Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂವರು ಅಂತರಾಜ್ಯ ದರೋಡೆಕೋರರ ಬಂಧನ:...

ಮೂವರು ಅಂತರಾಜ್ಯ ದರೋಡೆಕೋರರ ಬಂಧನ: 17.59 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ23 Aug 2019 11:51 PM IST
share
ಮೂವರು ಅಂತರಾಜ್ಯ ದರೋಡೆಕೋರರ ಬಂಧನ: 17.59 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

ದಾವಣಗೆರೆ, ಆ.23: ರಾಷ್ಟ್ರೀಯ ಹೆದ್ದಾರಿ ಪಕ್ಕದ ಒಂಟಿ ಮನೆಗಳನ್ನೇ ಗುರಿಯಾಗಿಸಿಕೊಂಡು ಕೊಲೆ ದರೋಡೆ ಮಾಡುತ್ತಿದ್ದ ಅಂತರ್ ರಾಜ್ಯ ಪಾರ್ದಿ ಗ್ಯಾಂಗ್‍ನ ಮೂವರು ದರೋಡೆ ಕೋರರನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದ ಉಸ್ಮಾನಬಾದ್ ಜಿಲ್ಲೆಯ ಕಲಂಬ ತಾಲೂಕಿನ ಕೊಠಲ್‍ವಾಡಿ ಗ್ರಾಮದ ಮೋಹನ ರಾಮದೇವ ಕಾಳೆ, ಅಂದೋರಾ ಗ್ರಾಮದ ದಶರಥ ಗಣಪತಿ ಕಾಳೆ ಅಲಿಯಾಸ್ ಖಂಡು ಹಾಗೂ ಕೊಠಲ್‍ವಾಡಿ ಗ್ರಾಮದ ಲಕ್ಕನ ಕಾಳೆ ಬಂಧಿತ ಆರೋಪಿಗಳು ಎಂದು ಹೇಳಿದರು.

ಕೆಲ ದಿನಗಳ ಹಿಂದೆ ದಾವಣಗೆರೆಯ ಶಾಮನೂರು ಡಾಲರ್ಸ್ ಕಾಲೋನಿ ತಿಮ್ಮರೆಡ್ಡಿ ಶಾಲೆ ಬಳಿಯ ಚಂದ್ರಕಲಾ ಎಂಬುವರ ಮನೆಗೆ ಐವರು ಅಪರಿಚಿತರು ರಾತ್ರಿ ವೇಳೆ ನುಗ್ಗಿ ಮನೆಯಲ್ಲಿದ್ದವರನ್ನು ಬಟ್ಟೆಯಿಂದ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಕೃತ್ಯವನ್ನು ಒಟ್ಟು ಏಳು ಜನರ ತಂಡದೊಂದಿಗೆ ಲಾರಿಯಲ್ಲಿ ಬಂದು ಕೃತ್ಯವೆಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಆರೋಪಿತರು ರಾಜ್ಯ ಮತ್ತು ಆಂದ್ರಪ್ರದೇಶ ರಾಜ್ಯದಲ್ಲಿಯೂ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬಾಗೇಪಲ್ಲಿಯಲ್ಲಿ ದರೋಡೆ ಮಾಡುವಾಗ ಒಬ್ಬ ಪುರುಷನನ್ನು ಹತ್ಯೆ ಮಾಡಿರುವುದಾಗಿ ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾರೆಂದು ಮಾಹಿತಿ ನೀಡಿದರು.

ಬಂಧಿತರಿಂದ 7,59,000 ರೂ. ಬೆಲೆ ಬಾಳುವ 253 ಗ್ರಾಂ ತೂಕದ ಬಂಗಾರದ ಆಭರಣಗಳ, ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಹಾಗೂ 10 ಲಕ್ಷ ರೂ. ಬೆಲೆ ಬಾಳುವ ಒಂದು ಲಾರಿ ಸೇರಿ ಒಟ್ಟು 17,59,000 ರೂ ಬೆಲೆ ಬಾಳುವ ಮಾಲನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಉಳಿದ ನಾಲ್ವರ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದರು.

ಈ ಡಕಾಯತಿ ತಂಡವು ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ದರೋಡೆ ಮತ್ತು ಒಂದು ಮನೆ ಕಳವು, ಕಲಬುರಗಿ ಜಿಲ್ಲೆಯ ಜೇವರ್ಗಿ ಠಾಣೆ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಆಂಧ್ರ ಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯ ತ್ರೀಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ದರೋಡೆ ಪ್ರಕರಣ ಹಾಗೂ ಬಾಗೇಪಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಕೊಲೆ ಮತ್ತು ದರೋಡೆ ಮಾಡಿರುವ ಬಗ್ಗೆ ಬಂಧಿತರು ಸುಳಿವು ನೀಡಿದ್ದಾರೆ ಎಂದು ವಿವರಿಸಿದರು.

ಎಎಸ್ಪಿ ರಾಜೀವ್, ಡಿವೈಎಸ್‍ಪಿಗಳಾದ ನಾಗರಾಜ, ಎಂ.ಕೆ ಗಂಗಲ್, ಡಾ.ದೇವರಾಜ್ ಇವರ ಮಾರ್ಗದರ್ಶನದಲ್ಲಿ ಸಿಪಿಐಗಳಾದ ತಿಮ್ಮಣ್ಣ, ಲಕ್ಷ್ಮಣ್ ನಾಯ್ಕ, ದೇವರಾಜ್, ಪಿ.ಎಸ್.ಐಗಳಾದ ಪ್ರಸಾದ್, ರೂಪ ತೆಂಬದ್, ಎಎಸ್‍ಐ ಆಂಜನಪ್ಪ ಹಾಗೂ  ಸಿಬ್ಬಂದಿಗಳಾದ ಮಜೀದ್ ಕೆ.ಸಿ, ಆಂಜನೇಯ, ರಾಘವೇಂದ್ರ, ರಮೇಶ್ ನಾಯ್ಕ, ತಿಪ್ಪೇಸ್ವಾಮಿ ಕೆ.ಎಲ್, ಲೋಕಾನಾಯ್ಕ, ಚಂದ್ರಪ್ಪ, ವಿಶ್ವನಾಥ, ಮಂಜುನಾಥ, ತಿಮ್ಮಣ್ಣ, ಯೋಗೀಶ್ ನಾಯ್ಕ, ಬಸವರಾಜ್, ಕಣ್ಣಪ್ಪ, ಮಂಜುನಾಥ, ನಾಗರಾಜ, ಗೋಪಿನಾಥ ಬಿ ನಾಯ್ಕ, ನರೇಂದ್ರ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ, ಶಾಂತ ರಾಜ್, ಉಮೇಶ್, ಚಾಲಕರಾದ ಮಂಜುನಾಥ, ರಾಮಚಂದ್ರ, ಉಮೇಶ್ ನಾಯ್ಕ ಕಾರ್ಯಚರಣೆ ನಡೆಸಿದ್ದು, ಇವರಿಗೆ ಮಹರಾಷ್ಟ್ರ ಉಸ್ಮಾನಾಬಾದ್ ಜಿಲ್ಲೆಯ ಎಲ್.ಸಿ.ಬಿ ಘಟಕದ ಪಿ.ಐ ಹರ್ಷವರ್ಧನ ಗೌಳಿ ಮತ್ತು ಪಿ.ಐ ಸಂದೀಪ್ ಮೋದಿ, ಪಿ.ಎಸ್.ಐ ಕರಣ್ ಮಾನೆ ಸಿಬ್ಬಂದಿಗಳಾದ ವಾಘ್ಮೋರೆ, ಅಮೂಲ್ ಚೌಹಣ್, ಜೋಂಬಾಡೆ ಮತ್ತು ವಿದ್ಯಾನಗರ ಠಾಣೆಯ ಸಿಬ್ಬಂದಿಗಳು ತನಿಖೆಗೆ ಸಹಕರಿಸಿದ್ದಾರೆಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X