ಇಂದು ಮಧ್ಯಾಹ್ನದ ಬಳಿಕ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ
![ಇಂದು ಮಧ್ಯಾಹ್ನದ ಬಳಿಕ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ ಇಂದು ಮಧ್ಯಾಹ್ನದ ಬಳಿಕ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ](https://www.varthabharati.in/sites/default/files/images/articles/2019/08/24/206721-1566621865.png)
ಬೆಂಗಳೂರು: ಖಾತೆ ಹಂಚಿಕೆ ಸಂಬಂಧ ಅಮಿತ್ ಷಾ ಜತೆ ಚರ್ಚಿಸಿದ್ದು, ಇಂದು ಮಧ್ಯಾಹ್ನದ ಬಳಿಕ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಅಮಿತ್ ಷಾ ಜತೆ ಒಂದೂವರೆ ಗಂಟೆಗಳ ಕಾಲ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಇಂದು ಮಧ್ಯಾಹ್ನ ಖಾತೆ ಹಂಚಿಕೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಹೇಳಿದರು.
ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ
ಇಂದಿನಿಂದ ಮೂರು ದಿನ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಕೇಂದ್ರ ಅಧ್ಯಯನ ತಂಡ ಪ್ರವಾಸ ಮಾಡಲಿದೆ. ಅವರು ಪ್ರವಾಹದಿಂದ ಆಗಿರುವ ಅನಾಹುತಗಳ ಪರಿಶೀಲನೆ ನಡೆಸಲಿದ್ದಾರೆ ಎಂದರು.
Next Story