Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ದಶಕಗಳಿಂದ ಮೂರು ವೇತನ...

ಮೂರು ದಶಕಗಳಿಂದ ಮೂರು ವೇತನ ಪಡೆಯುತ್ತಿರುವ ಬಿಹಾರಿ ಎಂಜಿನಿಯರ್ !

ವಾರ್ತಾಭಾರತಿವಾರ್ತಾಭಾರತಿ24 Aug 2019 10:51 AM IST
share
ಮೂರು ದಶಕಗಳಿಂದ ಮೂರು ವೇತನ ಪಡೆಯುತ್ತಿರುವ ಬಿಹಾರಿ ಎಂಜಿನಿಯರ್ !

ಪಾಟ್ನಾ: ಬಿಹಾರ ಸರ್ಕಾರದ ಸಹಾಯಕ ಎಂಜಿನಿಯರ್ ಒಬ್ಬರು ಕಳೆದ ಮೂರು ದಶಕಗಳಿಂದ ಮೂರು ಭಿನ್ನ ಹುದ್ದೆಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡುತ್ತಾ ಮೂರು ಕಡೆಯೂ ವೇತನ ಪಡೆಯುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.

ಪ್ರತಿ ಹುದ್ದೆಗಳಲ್ಲಿ ಬಡ್ತಿಯನ್ನೂ ಪಡೆದಿದ್ದಾರೆ. ಆದರೆ ಪಾಟ್ನಾ ಜಿಲ್ಲೆಯ ಬಬೂಲ್ ಗ್ರಾಮದ ನಿವಾಸಿಯಾಗಿರುವ ಸುರೇಶ್‌ರಾಂಗೆ ಅದೃಷ್ಟ ಇತ್ತೀಚೆಗೆ ಕೈಕೊಟ್ಟಿತು. ಸಮಗ್ರ ಹಣಕಾಸು ನಿರ್ವಹಣೆ ವ್ಯವಸ್ಥೆ (ಸಿಎಫ್‌ಎಂಎಸ್) ಈ ಹಗರಣವನ್ನು ಪತ್ತೆ ಮಾಡಿದೆ. ಸರ್ಕಾರ ಆರಂಭಿಸಿರುವ ಈ ಹೊಸ ವಿತ್ತೀಯ ಸಾಧನ ಎಲ್ಲ ಉದ್ಯೋಗಿಗಳ ಆಧಾರ್ ಸಂಖ್ಯೆ, ಜನ್ಮ ದಿನಾಂಕ, ಪಾನ್‌ಕಾರ್ಡ್ ಮತ್ತಿತರ ವಿವರಗಳನ್ನು ದಾಖಲಿಸಿದ ಕಾರಣದಿಂದ ಈ ವಂಚನೆ ಬಹಿರಂಗವಾಗಿದೆ.

ಬಿಹಾರದ ಕಟ್ಟಡ ನಿರ್ಮಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಈತನ ವಿರುದ್ಧ ಸಹೋದ್ಯೋಗಿ ಮಧುಸೂಧನ್ ಕುಮಾರ್ ಕರ್ಣ್ ನಿಡಿದ ದೂರಿನ ಹಿನ್ನೆಲೆಯಲ್ಲಿ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಸುರೇಶ್ ನಿವೃತ್ತರಾಗಬೇಕಿತ್ತು. ಈತನ ಬಂಧನಕ್ಕಾಗಿ ಡಿವೈಎಸ್ಪಿ ಅಖಿಲೇಶ್ ಸಿಂಗ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದು ಕಿಶನ್‌ಗಂಜ್ ಎಸ್ಪಿ ಕುಮಾರ್ ಆಶೀಶ್ ಹೇಳಿದ್ದಾರೆ.

ಸುರೇಶ್ 1988ರಲ್ಲಿ ರಾಜ್ಯ ರಸ್ತೆ ನಿರ್ಮಾಣ ಇಲಾಖೆಯಲ್ಲಿ ಕಿರಿಯ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು. ಬಳಿಕ ಜಲಸಂಪನ್ಮೂಲ ಇಲಾಖೆಗೆ ಆಯ್ಕೆಯಾಗಿದ್ದರು. ಅದೇ ನಗರದಲ್ಲಿ 1989ರ ಜುಲೈ 28ರಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಅದೇ ಇಲಾಖೆಯಲ್ಲಿ ಅದೇ ವರ್ಷ ಮತ್ತೊಂದು ಹುದ್ದೆಗೆ ಆಯ್ಕೆಯಾದ ಸುರೇಶ್‌ನನ್ನು ಭೀಮನಗರ ಪೂರ್ವ ಎಂಬಾಕ್‌ಮೆಂಟ್‌ಗೆ ನಿಯೋಜಿಸಲಾಗಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸುರೇಶ್ ಕಳೆದ ವರ್ಷದ ಏಪ್ರಿಲ್‌ನಲ್ಲಿ ಸಹಾಯಕ ಎಂಜಿನಿಯರ್ ಆಗಿ ರಸ್ತೆ ನಿರ್ಮಾಣ ಇಲಾಖೆಯಲ್ಲಿ ಬಡ್ತಿ ಪಡೆದಿದ್ದರು. 2005ರ ಜೂನ್ 17ರಂದು ಜಲಸಂಪನ್ಮೂಲ ಇಲಾಖೆಯಲ್ಲಿ ಬಡ್ತಿ ಪಡೆದಿದ್ದರು. ಸಿಎಫ್‌ಎಂಎಸ್ ಆರಂಭಿಸದಿದ್ದರೆ ಸುರೇಶ್ ಒಂದರ ಮೇಲೊಂದರಂತೆ ಮೂರೂ ಹುದ್ದೆಗಳಿಂದ ಸದ್ಯದಲ್ಲೇ ನಿವೃತ್ತರಾಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X