Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರರಿಗೆ ನೆರವು, ಪಾಕ್ ನಂಟು: ಬಂಧಿತ...

ಉಗ್ರರಿಗೆ ನೆರವು, ಪಾಕ್ ನಂಟು: ಬಂಧಿತ ಬಜರಂಗದಳದ ಮಾಜಿ ಮುಖಂಡ ಈ ಹಿಂದೆಯೂ ಇದೇ ಆರೋಪದಲ್ಲಿ ಬಂಧನವಾಗಿದ್ದ!

ವಾರ್ತಾಭಾರತಿವಾರ್ತಾಭಾರತಿ24 Aug 2019 12:22 PM IST
share
ಉಗ್ರರಿಗೆ ನೆರವು, ಪಾಕ್ ನಂಟು: ಬಂಧಿತ ಬಜರಂಗದಳದ ಮಾಜಿ ಮುಖಂಡ ಈ ಹಿಂದೆಯೂ ಇದೇ ಆರೋಪದಲ್ಲಿ ಬಂಧನವಾಗಿದ್ದ!

ಭೋಪಾಲ್, ಆ.24: ಪಾಕ್ ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಮಾಜಿ ಬಜರಂಗ ದಳದ ಮುಖಂಡ ಬಲರಾಮ್ ಸಿಂಗ್ ಸಹಿತ ನಾಲ್ವರನ್ನು ಬುಧವಾರ ರಾತ್ರಿ ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತ ಬಜರಂಗ ದಳದ ಮುಖಂಡ 2017ರಲ್ಲೂ ಇದೇ ಆರೋಪದಲ್ಲಿ ಬಂಧನವಾಗಿ ಕಳೆದ ವರ್ಷ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ.

ಮಧ್ಯಪ್ರದೇಶದಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಾವು ಸಹಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಕಮಲ್‌ ನಾಥ್  ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ. ‘‘ಉಗ್ರರಿಗೆ ಹಣಕಾಸು ನೆರವು ನೀಡುವ ಅಥವಾ ಬೇಹುಗಾರಿಕೆ ಜಾಲ ಹೊಂದಿರುವ, ಮಧ್ಯಪ್ರದೇಶದಲ್ಲಿ ಬೇಹುಗಾರಿಕೆ ನಡೆಸುವ ಯಾರೇ ಆಗಲಿ, ಯಾವುದೇ ರಾಜಕೀಯ ಸಂಘಟನೆಗೆ ಸೇರಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’’ ಎಂದು ಮಾಜಿ ಬಜರಂಗ ದಳದ ನಾಯಕನ ಬಂಧನವನ್ನು ಉಲ್ಲೇಖಿಸಿ ಕಮಲ್‌ ನಾಥ್  ಹೇಳಿದ್ದಾರೆ.

ಪಾಕಿಸ್ತಾನ ಮಾರ್ಗದರ್ಶನದ ಬೇಹುಗಾರಿಕೆ-ಉಗ್ರರ ಹಣಕಾಸು ನೆರವು ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಬುಧವಾರ ರಾತ್ರಿ ಬಲರಾಮ್ ಸಿಂಗ್ ಹಾಗೂ ಇತರ ಮೂವರನ್ನು ಸಟ್ನಾ ಜಿಲ್ಲೆಯಲ್ಲಿ ಬಂಧಿಸಲಾಗಿತ್ತು. ಸಿಂಗ್ ಹಾಗೂ ಆತನ ಸಹಚರರನ್ನು ಆಗಸ್ಟ್ 26ರ ತನಕ ಎಟಿಎಸ್ ತನ್ನ ವಶಕ್ಕೆ ಪಡೆದಿದೆ.

ಪಾಕಿಸ್ತಾನದ ಸಂಚಾಲಕರೊಂದಿಗೆ ಸಂಪರ್ಕ ಹೊಂದಿದ್ದ ಬಂಧಿತ ಆರೋಪಿಗಳು ರಣತಂತ್ರದ ಮಾಹಿತಿಯನ್ನು, ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳುತ್ತಿದ್ದರು. ಸಂಶಯಾಸ್ಪದ ಗಡಿಯಾಚೆಗಿನ ಹಣಕಾಸು ವ್ಯವಹಾರಗಳನ್ನು ಕೈಗೊಳ್ಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲರಾಮ್ ಸಿಂಗ್ ಬಜರಂಗದಳದೊಂದಿಗೆ ಸಕ್ರಿಯನಾಗಿದ್ದ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ಸಂಯೋಜಕ ನರೇಂದ್ರ ಸಲುಜಾ ಶುಕ್ರವಾರ ನೀಡಿದ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.

2017ರಲ್ಲಿ ಬಲರಾಮ್ ಹಾಗೂ ಬಿಜೆಪಿ ಕಾರ್ಯಕರ್ತ ಧುೃವ್ ಸಕ್ಸೇನಾರನ್ನು ಪಾಕಿಸ್ತಾನದ ಬೇಹುಗಾರಿಕೆ ಜಾಲಕ್ಕೆ ನೆರವು ನೀಡಿದ ಆರೋಪದಲ್ಲಿ ಮಧ್ಯಪ್ರದೇಶದ ಎಟಿಎಸ್ ಬಂಧಿಸಿತ್ತು. ಆದರೆ, ಧುೃವ್ ಹಾಗೂ ಬಲರಾಮ್ ಸಹಿತ 15ರಲ್ಲಿ 13 ಆರೋಪಿಗಳು ಕಳೆದ ವರ್ಷ ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ಬಿಡುಗಡೆಯಾದ ಬಳಿಕ ಹೊಸ ಹುಡುಗರೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಬಲರಾಮ್ ಬೇಹುಗಾರಿಕೆಗೆ ನೆರವು ಜಾಲವನ್ನು ಸಾಟ್ನಾದಲ್ಲಿ ಮತ್ತೊಮ್ಮೆ ಆರಂಭಿಸಿದ್ದ. ಸಾಟ್ನಾ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಲ್ಲಿ ಹಣ ಜಮೆ ಮಾಡಿದ್ದ. ಪಾಕಿಸ್ತಾನದ ಸಂಚಾಲಕರ ಆಜ್ಞೆಯ ಪ್ರಕಾರ ಬೇಹುಗಾರಿಕೆ ಕಾರ್ಯಾಚರಣೆಗೆ ಹಣವನ್ನು ಇತರ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ  ಪೂರೈಸಲಾಗುತ್ತಿತ್ತು.

ಬಿಜೆಪಿಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ, ಚಿತ್ರಕೂಟ, ದೇವಾಸ್, ಬರ್ವಾನಿ ಹಾಗೂ ಮಂದಸೌರ್ನಲ್ಲಿ ನಡೆದ ಅಪರಾಧ ಘಟನೆಗಳಲ್ಲಿ ಭಾಗಿಯಾಗಿದ್ದ ಹಾಗೂ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುವ ಕಾರ್ಯದಲ್ಲೂ ಭಾಗಿಯಾಗಿದ್ದ ಎಂದು ಕಾಂಗ್ರೆಸ್ನ ಮಾಧ್ಯಮ ಸಂಯೋಜಕ ಸಲುಜಾ ಆರೋಪಿಸಿದ್ದಾರೆ.

‘‘ಆತ(ಬಲರಾಮ್ ಸಿಂಗ್)ಬಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದನೋ ಇಲ್ಲವೋ ಎಂದು ನಮಗೆ ಗೊತ್ತಿಲ್ಲ. ಕ್ರಮ ಕೈಗೊಳ್ಳಲು ದೇಶದ ಭದ್ರತಾ ಏಜೆನ್ಸಿಗಳಿಗೆ ಅವಕಾಶ ನೀಡಲೇ ಬೇಕು. ಯಾರೇ ಅಪರಾಧ ಎಸಗಿದರೆ, ಸರಕಾರ ಆತನ ಜಾತಿ, ಧರ್ಮ ಹಾಗೂ ಪಕ್ಷವನ್ನು ಬಹಿರಂಗಪಡಿಸುವ ಬದಲು ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು’’ ಎಂದು ಮಧ್ಯಪ್ರದೇಶದ ಬಿಜೆಪಿ ವಕ್ತಾರ ರಜನೀಶ್ ಅಗರ್ವಾಲ್ ಸುದ್ದಿಸಂಸ್ಥೆ ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X