Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯ ಪೊಲೀಸ್ ಅಕಾಡಮಿಯಲ್ಲಿ ತರಬೇತಿ...

ರಾಷ್ಟ್ರೀಯ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಮುಗಿಸಿದ 92 ಐಪಿಎಸ್ ಪ್ರೊಬೇಷನರಿಗಳು

ವಾರ್ತಾಭಾರತಿವಾರ್ತಾಭಾರತಿ24 Aug 2019 8:20 PM IST
share
ರಾಷ್ಟ್ರೀಯ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಮುಗಿಸಿದ 92 ಐಪಿಎಸ್ ಪ್ರೊಬೇಷನರಿಗಳು

ಹೈದರಾಬಾದ್,ಆ.24: ಇಲ್ಲಿಯ ಸರದಾರ್ ವಲ್ಲಭಭಾಯಿ ಪಟೇಲ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 12 ಮಹಿಳೆಯರು ಸೇರಿದಂತೆ 92 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಅಕಾಡೆಮಿಯ ಆವರಣದಲ್ಲಿ ಶನಿವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಈ ಅಧಿಕಾರಿಗಳು ಪಾಸಿಂಗ್ ಔಟ್ ಪರೇಡ್‌ನ್ನು ನಡೆಸಿದರು.

ಪ್ರೊಬೇಷನರಿಗಳ ಪೈಕಿ 57 ಇಂಜಿನಿಯರಿಂಗ್ ಮತ್ತು 11 ವೈದ್ಯಕೀಯ ಪದವೀಧರರಿದ್ದಾರೆ. ಏಳು ಅಧಿಕಾರಿಗಳು ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ.

92 ಐಪಿಎಸ್ ಪ್ರೊಬೇಷನರಿಗಳ ಜೊತೆಗೆ ರಾಯಲ್ ಭೂತಾನ್ ಪೊಲೀಸ್‌ನ ಆರು ಅಧಿಕಾರಿಗಳು ಮತ್ತು ನೇಪಾಳ ಪೊಲೀಸ್‌ನ ಐವರು ಅಧಿಕಾರಿಗಳೂ ಅಕಾಡೆಮಿಯಲ್ಲಿ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ.

 ಹೆಚ್ಚಿನ ಪ್ರೊಬೇಷನರಿಗಳು ಸಾಮಾನ್ಯ ಕುಟುಂಬ ಹಿನ್ನೆಲೆಗಳಿಂದ ಬಂದವರಾಗಿದ್ದಾರೆ. ತೆಲಂಗಾಣ ಕೇಡರ್‌ಗೆ ಹಂಚಿಕೆ ೆಯಾಗಿರುವ ದಿಲ್ಲಿಯ ಗೌಸ್ ಆಲಂ ಅವರು ಅತ್ಯುತ್ತಮ ಸರ್ವಾಂಗೀಣ ಪ್ರೊಬೇಷನರ್‌ಗಾಗಿರುವ ಪ್ರಧಾನಿಗಳ ಬ್ಯಾಟನ್‌ ಮತ್ತು ಗೃಹಸಚಿವಾಲಯದ ರಿವಾಲ್ವರ್‌ನ್ನು ಪಡೆದುಕೊಂಡರು. ಅಧ್ಯಯನಕ್ಕಾಗಿ ಮೆಹ್ತಾ ಕಪ್ ಮತ್ತು ಹೊರಾಂಗಣ ವಿಷಯಗಳಲ್ಲಿ ಪ್ರಾವೀಣ್ಯತೆಗಾಗಿ ಬಿಎಸ್‌ಎಫ್ ಟ್ರೋಫಿಗೂ ಅವರು ಪಾತ್ರರಾದರು.

ಮೂಲತಃ ಬಿಹಾರದ ಗಯಾ ಜಿಲ್ಲೆಯವರಾಗಿರುವ ಆಲಂ ದಿಲ್ಲಿಯಲ್ಲಿ ಬೆಳೆದಿದ್ದರು. ಸೇನೆಯಲ್ಲಿ ಸುಬೇದಾರ್ ಆಗಿದ್ದ ತಂದೆಯನ್ನು ಆಲಂ ತನ್ನ ಬಾಲ್ಯದಲ್ಲಿಯೇ ಕಳೆದುಕೊಂಡಿದ್ದರು.

ಐಐಟಿ-ಬಾಂಬೆಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪಡೆದಿರುವ ಆಲಂ ಯುಪಿಎಸ್‌ಸಿ ಪರೀಕ್ಷೆಗೆ ಬರೆಯುವ ಮುನ್ನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸಿದ್ದರು.

ಉತ್ತರ ಪ್ರದೇಶದ ರಿಚಾ ತೋಮರ್ ಅವರು ಅತ್ಯುತ್ತಮ ಮಹಿಳಾ ಪ್ರೊಬೇಷನರ್‌ಗಾಗಿರುವ 1973ರ ಐಪಿಎಸ್ ತಂಡದ ಟ್ರೋಫಿಯನ್ನು ತನ್ನದಾಗಿಸಿಕೊಂಡರು. ಕೃಷಿಕನ ಪುತ್ರಿಯಾಗಿರುವ ಅವರನ್ನು ರಾಜಸ್ಥಾನ ಕೇಡರ್‌ಗೆ ಹಂಚಿಕೆ ಮಾಡಲಾಗಿದೆ. ಎರಡೂವರೆ ವರ್ಷ ಪ್ರಾಯದ ಗಂಡುಮಗುವಿನ ತಾಯಿಯಾಗಿರುವ ರಿಚಾ ಅವರ ಪತಿ ದಿಲ್ಲಿಯಲ್ಲಿ ಎಸಿಪಿಯಾಗಿದ್ದಾರೆ.

ನೇಪಾಲದ ಕೃಷ್ಣ ಖಡ್ಕಾ ಅವರು ಅತ್ಯುತ್ತಮ ಔಟ್‌ಡೋರ್ ಪ್ರೊಬೇಷನರ್ ಆಗಿ ಐಪಿಎಸ್ ಸಂಘದ ಸ್ವೋರ್ಡ್ ಆಫ ಆನರ್ ಅನ್ನು ಪಡೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X