Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾತಿ ವ್ಯವಸ್ಥೆಯ ವಿರುದ್ಧ ಜನಾಕ್ರೋಶ...

ಜಾತಿ ವ್ಯವಸ್ಥೆಯ ವಿರುದ್ಧ ಜನಾಕ್ರೋಶ ರೂಪಗೊಳ್ಳಬೇಕು: ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಬೆಜವಾಡ ವಿಲ್ಸನ್

ಯು.ಆರ್.ಅನಂತಮೂರ್ತಿ ನೆನಪಿನ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Aug 2019 10:31 PM IST
share
ಜಾತಿ ವ್ಯವಸ್ಥೆಯ ವಿರುದ್ಧ ಜನಾಕ್ರೋಶ ರೂಪಗೊಳ್ಳಬೇಕು: ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಬೆಜವಾಡ ವಿಲ್ಸನ್

ಬೆಂಗಳೂರು, ಆ.24: ದೇಶವು ಜಾತೀಯತೆ, ಅಸ್ಪಶ್ಯತೆಯಿಂದ ನರಳುತ್ತಿದೆ. ಮಲದ ಗುಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಮೃತಪಡುತ್ತಿದ್ದಾರೆ. ಇದರ ಬಗ್ಗೆ ಜನಾಕ್ರೋಶ ರೂಪಗೊಳ್ಳದೇ ಇರುವುದು ಇಂದಿನ ದುರಂತವಾಗಿದೆ ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಬೆಜವಾಡ ವಿಲ್ಸನ್ ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಸುಚಿತ್ರಾ ಫಿಲ್ಮಂ ಸೊಸೈಟಿ ವತಿಯಿಂದ ಆಯೋಜಿಸಿದ್ದ ಯು.ಆರ್.ಅನಂತಮೂರ್ತಿ ಅವರ ನೆನಪಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಒಂದು ಬಾಂಬ್ ದಾಳಿಯಾದ ಸಂದರ್ಭದಲ್ಲಿ, ಒಂದು ಹೆಣ್ಣಿನ ಮೇಲೆ ಅತ್ಯಾಚಾರವಾದಾಗ, ಒಬ್ಬರ ಹತ್ಯೆಯಾದ ಸಂದರ್ಭದಲ್ಲಿ ಸಹಜವಾಗಿ ಜನಾಕ್ರೋಶ ಭುಗಿಲೇಳುತ್ತದೆ. ಆದರೆ, ಪ್ರತಿದಿನ ಜಾತಿಯ ಕಿರುಕುಳ, ಮಲ ಗುಂಡಿ ಶುಚಿ ಮಾಡುವ ಸಂದರ್ಭದಲ್ಲಿ ಸಾಯುವವರ ಬಗ್ಗೆ ಯಾಕೆ ಅಷ್ಟೇ ಮಟ್ಟದಲ್ಲಿ ಜನಾಕ್ರೋಶ ರೂಪಗೊಳ್ಳುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಭಾರತದಲ್ಲಿ ಸಾವಿರಾರು ವರ್ಷಗಳಿಂದಲೂ ನಿರಂತರವಾಗಿ ಜಾತಿ ವ್ಯವಸ್ಥೆ ನಮ್ಮನ್ನು ಕಾಡುತ್ತಿದೆ. ಇಂದಿಗೂ ಅದು ಮುಂದುವರಿದಿದ್ದು, ಇತೀಚಿಗೆ ತಮಿಳುನಾಡಿನಲ್ಲಿ ದಲಿತರೊಬ್ಬರ ಮೃತದೇಹವನ್ನು ಸಾಗಿಸಲು ಅನುಮತಿ ನೀಡಿಲ್ಲ. ಮತ್ತೊಂದು ಕಡೆ ಮೇಲ್ಜಾತಿಯವರನ್ನು ಪ್ರೀತಿಸಿದ್ದಕ್ಕೆ ಹೆಣ್ಣಿನ ಎದೆಗೆ ಒದ್ದ ದೃಶ್ಯಗಳು ಇಂದಿಗೂ ನಮ್ಮ ಕಣ್ಣು ಮುಂದಿರುವ ತಾಜಾ ಸಾಕ್ಷಿಗಳಾಗಿವೆ ಎಂದರು.

ಪ್ರಧಾನಿ ಮೋದಿ ಕಳೆದ ಬಾರಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಅಚ್ಛೇದಿನ್‌ಗಳನ್ನು ತರುತ್ತೇವೆ ಎಂದಿದ್ದರು. ಆದರೆ, ಅವರ ಅಧಿಕಾರ ಅವಧಿ ಮುಗಿಯುವ ವೇಳೆ ಮಲದ ಗುಂಡಿ ಸ್ವಚ್ಛಗೊಳಿಸುವುದು ಆಧ್ಯಾತ್ಮಿಕ ಸಂತುಷ್ಟಿ ನೀಡುವ ಕೆಲಸ ಎಂದು ಹೇಳುತ್ತಾರೆ. ಇದು ಮಾನವತೆಯ ಮೇಲೆ ನಡೆಸಿದ ದೊಡ್ಡ ದಾಳಿಯಾಗಿದೆ ಎಂದು ಅವರು ಹೇಳಿದರು. ಎರಡು ನಿಮಿಷ ಕೈಯಲ್ಲಿ ಪೊರಕೆ ಹಿಡಿದು, ಫೋಟೊಶೂಟ್ ಮಾಡಿಸಿಕೊಂಡು, ಸ್ವಚ್ಛ ಭಾರತದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿಗೆ, ದೇಶದಾದ್ಯಂತ ನೂರಾರು ಜನರು ಮಲ ಹೊರುವ ಪದ್ಧತಿ ಜೀವಂತವಾಗಿರುವುದು ಕಾಣುತ್ತಿಲ್ಲ. ಹೀಗಾಗಿ, ನಮಗೆ ಬೇಕಿರುವುದು ಸ್ವಚ್ಛ ಭಾರತ ಯೋಜನೆಯಲ್ಲ, ನಮ್ಮ ಮೆದುಳಿನ ಸ್ವಚ್ಛತೆ. ಜಾತಿ ವ್ಯವಸ್ಥೆ ಧ್ವಂಸವಾದಾಗ ಮಾತ್ರ ಅಭಿವೃದ್ದಿ ಭಾರತ ನಿರ್ಮಾಣವಾಗುತ್ತದೆ ಎಂದು ವಿಲ್ಸನ್ ಅಭಿಪ್ರಾಯಪಟ್ಟರು.

ದೇಶದಲ್ಲಿ ಲಕ್ಷಾಂತರ ದಲಿತರು ಮಲ ಹೊರುತ್ತಿದ್ದಾರೆ. ಆದರೂ, ಇದನ್ನು ತಡೆಯಲು ಸರಕಾರಗಳು ಮುಂದಾಗಿಲ್ಲ. ಮಲಹೊರುವ ಪದ್ಧತಿ ನಿಷೇಧವಾಗಿದ್ದರೂ, ಉತ್ತರ ಪ್ರದೇಶ, ಗುಜರಾತ್, ಬಿಹಾರ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ಅನೇಕ ಕಡೆಗಳಲ್ಲಿ ಜೀವಂತವಾಗಿದೆ ಎಂದು ಅವರು ಆಪಾದಿಸಿದರು.

ಭಾರತ ಸಾರ್ವಭೌಮ ರಾಷ್ಟ್ರ. ಇಲ್ಲಿ ದೇಶದ ಸಾರ್ವಭೌಮತೆಗಿಂತ ಜನರ ಸಾರ್ವಭೌಮತೆ ಮುಖ್ಯ. ಜನರಿಲ್ಲದೆ ದೇಶ ಇಲ್ಲ. ಈ ಸಾರ್ವಭೌಮತೆಗೆ ಧಕ್ಕೆ ಉಂಟಾದಾಗ ಇದು ನಾನು ಬಯಸುವ ಭಾರತ ಅಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಹೇಳಬೇಕು. ಆದರೆ, ಈ ರೀತಿ ಮಾತನಾಡಿದರೆ ದೇಶದ್ರೋಹಿ ಎಂದು ಪ್ರಮಾಣಪತ್ರ ನೀಡುವ ಏಜೆನ್ಸಿಗಳು ದೇಶದಲ್ಲಿವೆ. ಧೈರ್ಯದಿಂದ ಮಾತನಾಡಲೂ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ ಎಂದು ಬೆಜವಾಡ ವಿಲ್ಸನ್ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಯು.ಆರ್.ಅನಂತಮೂರ್ತಿಯವರು ಬಹಿರಂಗವಾಗಿ, ಗಟ್ಟಿ ಧ್ವನಿಯಲ್ಲಿ ನಾನು ಕಂಡ ಭಾರತ ಇದು ಅಲ್ಲ ಎಂದರು. ಅವರಂತೆ ಎಲ್ಲರೂ ಬಹಿರಂಗವಾಗಿ ಸತ್ಯವನ್ನು ಮಾತನಾಡಬೇಕಿದೆ. ಇಲ್ಲದಿದ್ದರೆ, ಅಧಿಕಾರದಲ್ಲಿರುವವರಿಗೆ ನಮ್ಮ ನೋವು, ಸಂಕಷ್ಟ ಅರ್ಥವಾಗುವುದಿಲ್ಲ ಎಂದು ನುಡಿದರು.

ಭಾರತದಲ್ಲಿ ದಲಿತ, ಶೋಷಿತ ವರ್ಗಗಳು ಇಂದಿಗೂ ಆಹಾರ, ಶಿಕ್ಷಣ, ಉದ್ಯೋಗಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿಯಿದೆ. ಪರಿಶಿಷ್ಟರಿಗೆ ಮೀಸಲಾತಿಯಿದ್ದರೂ, ಅವರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿಲ್ಲ. ಈ ವಿಷಯಗಳ ಬಗ್ಗೆ ಎಲ್ಲಿಯೂ ಚರ್ಚೆಯಾಗುತ್ತಿಲ್ಲ. ಕೇವಲ ಭಾವನಾತ್ಮಕ ವಿಚಾರಗಳು, ದೇಶಪ್ರೇಮದೊಳಗೆ ಮರೆಯಾಗುತ್ತಿವೆ ಎಂದರು.

ದೇಶದಲ್ಲಿ ಹಲವಾರು ಜನರು ಬಡವರಿದ್ದಾರೆ. ಆದರೆ, ಎಲ್ಲರೂ ಮಲ ಹೊರುವ ಕೆಲಸ ಮಾಡುವುದಿಲ್ಲ. ಅದೇ ರೀತಿ ಲಕ್ಷಾಂತರ ಪಿತೃ ಪ್ರಧಾನ ವ್ಯವಸ್ಥೆಯಿಂದ ನೊಂದ ಹೆಣ್ಣು ಮಕ್ಕಳಿದ್ದಾರೆ. ಆದರೆ, ಎಲ್ಲರೂ ಮಲಗುಂಡಿ ಸ್ವಚ್ಛ ಮಾಡುವುದಿಲ್ಲ. ಸಾವಿರಾರು ಜನರು ಅವಿದ್ಯಾವಂತರಿದ್ದಾರೆ. ಎಲ್ಲರೂ ಚರಂಡಿ ಸ್ವಚ್ಛ ಮಾಡುವುದಿಲ್ಲ. ತಲೆ ಮೇಲೆ ಮಲ ಹೊರುವವರು, ಮಲಗುಂಡಿ ಸ್ವಚ್ಛ ಮಾಡುವವರು, ಚರಂಡಿ ಸ್ವಚ್ಛ ಮಾಡುವವರು ಒಂದು ಜಾತಿಯ ಜನ ಮಾತ್ರ.

-ಬೆಜವಾಡ ವಿಲ್ಸನ್, ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X