Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸತತ ಮೂರನೇ ಬಾರಿ ಫೈನಲ್‌ಗೆ ಸಿಂಧು...

ಸತತ ಮೂರನೇ ಬಾರಿ ಫೈನಲ್‌ಗೆ ಸಿಂಧು ತೇರ್ಗಡೆ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ24 Aug 2019 11:42 PM IST
share
ಸತತ ಮೂರನೇ ಬಾರಿ ಫೈನಲ್‌ಗೆ ಸಿಂಧು ತೇರ್ಗಡೆ

ಬಾಸೆಲ್, ಆ.24: ಆಲ್ ಇಂಗ್ಲೆಂಡ್ ಚಾಂಪಿಯನ್ ಚೆನ್ ಯು ಫೀ ವಿರುದ್ಧ ನೇರ ಗೇಮ್‌ಗಳ ಅಂತರದಿಂದ ಜಯ ಸಾಧಿಸಿರುವ ಭಾರತದ ಪಿ.ವಿ.ಸಿಂಧು ಬಿಡಬ್ಲುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸತತ ಮೂರನೇ ಬಾರಿ ಫೈನಲ್‌ಗೆಲಗ್ಗೆ ಇಟ್ಟಿದ್ದಾರೆ.

ಇಲ್ಲಿ ಶನಿವಾರ 40 ನಿಮಿಷಗಳಲ್ಲಿ ಕೊನೆಗೊಂಡ ಮಹಿಳೆಯರ ಸಿಂಗಲ್ಸ್‌ನ ಸೆಮಿ ಫೈನಲ್ ಪಂದ್ಯದಲ್ಲಿ ಸಿಂಧು ಚೀನಾದ ಚೆನ್‌ರನ್ನು 21-7, 21-14 ನೇರ ಗೇಮ್‌ಗಳಿಂದ ಸೋಲಿಸಿದರು. *ಚೊಚ್ಚಲ ಪ್ರಶಸ್ತಿ ನಿರೀಕ್ಷೆ: 

ಪ್ರತಿಷ್ಠಿತ ಟೂರ್ನಮೆಂಟ್‌ನ ಕಳೆದ ಎರಡು ಆವೃತ್ತಿಗಳಲ್ಲಿ ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. 2018ರಲ್ಲಿ ಸ್ಪೇನ್‌ನ ಕರೊಲಿನಾ ಮರಿನ್ ಹಾಗೂ 2017ರಲ್ಲಿ ಜಪಾನ್‌ನ ನೊರೊಮಿ ಒಕುಹರಾ ವಿರುದ್ಧ ಫೈನಲ್ ಪಂದ್ಯವನ್ನು ಸೋತಿದ್ದರು. ಇದೀಗ ವಿಶ್ವದ ನಂ.3ನೇ ಆಟಗಾರ್ತಿ ಚೆನ್‌ರನ್ನು ಸದೆಬಡಿದಿರುವ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿದ್ದಾರೆ. 24ರ ಹರೆಯದ ಹೈದರಾಬಾದ್ ಆಟಗಾರ್ತಿ ರವಿವಾರ ನಡೆಯಲಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 2013ರ ವಿಶ್ವ ಚಾಂಪಿಯನ್ ರಚನೊಕ್ ಇಂತನಾನ್ ಅಥವಾ 2017ರ ಚಾಂಪಿಯನ್, ಜಪಾನ್‌ನ ನೊರೊಮಿ ಒಕುಹರಾ ಅವರ ಸವಾಲನ್ನು ಎದುರಿಸಲಿದ್ದಾರೆ.

ಇಂದಿನ ಪಂದ್ಯಕ್ಕಿಂತ ಮೊದಲು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತೆ ಸಿಂಧು, ಚೆನ್ ವಿರುದ್ಧ ಆಡಿರುವ 8 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿ ಹೆಡ್-ಟು-ಹೆಡ್ ದಾಖಲೆಯಲ್ಲಿ ಮೇಲುಗೈ ಸಾಧಿಸಿದ್ದರು. ಇಂದು ಆರನೇ ಗೆಲುವಿನಿಂದ ಬೀಗಿದರು.

 ಸಿಂಧು ಮೊದಲ ಸೆಮಿ ಫೈನಲ್‌ನ ಮೊದಲ ಗೇಮ್‌ನಲ್ಲಿ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದು ಕೇವಲ 15 ನಿಮಿಷಗಳಲ್ಲಿ ಮೊದಲ ಗೇಮ್‌ನ್ನು 21-7 ಅಂತರದಿಂದ ಗೆದ್ದುಕೊಂಡರು. ಚೀನಾ ಆಟಗಾರ್ತಿ ಚೆನ್ 2ನೇ ಗೇಮ್‌ನಲ್ಲಿ ಒಂದಷ್ಟು ಪ್ರತಿರೋಧ ಒಡ್ಡಿದರು. ತನ್ನ ಎತ್ತರದ ಸಂಪೂರ್ಣ ಲಾಭ ಎತ್ತಿದ ನೀಳಕಾಯದ ಸಿಂಧು ಎರಡನೇ ಗೇಮ್‌ನ್ನು 21-14 ಅಂತರದಿಂದ ವಶಪಡಿಸಿಕೊಂಡು ಗೆಲುವಿನ ನಗೆ ಬೀರಿದರು.

*5ನೇ ಪದಕ ದೃಢಪಡಿಸಿದ ಸಿಂಧು: ಶುಕ್ರವಾರ ಸೆಮಿ ಫೈನಲ್‌ಗೆ ತಲುಪಿದ್ದ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 5ನೇ ಪದಕವನ್ನು ದೃಢಪಡಿಸಿದ್ದರು. ಸಿಂಧು ಈ ತನಕ 2 ಕಂಚು ಹಾಗೂ 2 ಬೆಳ್ಳಿ ಪದಕವನ್ನು ಜಯಿಸಿದ್ದಾರೆ. 2013ರಲ್ಲಿ ತನ್ನ 18ನೇ ವಯಸ್ಸಿನಲ್ಲಿ ಕಂಚಿನ ಪದಕ ಜಯಿಸಿದ್ದ ಸಿಂಧು ಮರು ವರ್ಷ 2014ರಲ್ಲಿ ಮತ್ತೊಮ್ಮೆ ಕಂಚಿಗೆ ತೃಪ್ತಿಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X