Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಶಾಂತ್‌ಗೆ ಐದು ವಿಕೆಟ್: ವಿಂಡೀಸ್ ಆಲೌಟ್

ಇಶಾಂತ್‌ಗೆ ಐದು ವಿಕೆಟ್: ವಿಂಡೀಸ್ ಆಲೌಟ್

► ಮೊದಲ ಟೆಸ್ಟ್ ► ಭಾರತಕ್ಕೆ 75ರನ್ ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ24 Aug 2019 11:47 PM IST
share
ಇಶಾಂತ್‌ಗೆ ಐದು ವಿಕೆಟ್: ವಿಂಡೀಸ್ ಆಲೌಟ್

 ನಾರ್ತ್ ಸೌಂಡ್(ಆ್ಯಂಟಿಗುವಾ), ಆ.24: ವೇಗದ ಬೌಲರ್ ಇಶಾಂತ್ ಶರ್ಮಾ ನೇತೃತ್ವದಲ್ಲಿ ಶಿಸ್ತುಬದ್ಧ ಬೌಲಿಂಗ್ ಸಂಘಟಿಸಿದ ಭಾರತ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು ಪ್ರಥಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 222 ರನ್‌ಗೆ ಆಲೌಟ್ ಮಾಡಿದೆ. ಇದರೊಂದಿಗೆ ಮೊದಲ ಇನಿಂಗ್ಸ್ ನಲ್ಲಿ 75 ರನ್ ಮುನ್ನಡೆ ಪಡೆಯಲು ಶಕ್ತವಾಗಿದೆ.

ಮೂರನೇ ದಿನದಾಟವಾದ ಶನಿವಾರ 8 ವಿಕೆಟ್‌ಗಳ ನಷ್ಟಕ್ಕೆ 189 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ವಿಂಡೀಸ್ ಕೇವಲ 15.2 ಓವರ್‌ಗಳ ಪಂದ್ಯ ಆಡುವಷ್ಟರಲ್ಲಿ ಕೊನೆಯ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ಔಟಾಗದೆ 10 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ವಿಂಡೀಸ್ ನಾಯಕ ಹೋಲ್ಡರ್ 39 ರನ್(65 ಎಸೆತ, 5 ಬೌಂಡರಿ)ಗಳಿಸಿ ವಿಕೆಟ್ ಒಪ್ಪಿಸಿದರು.

ಇಶಾಂತ್ ಯಶಸ್ವಿ ಬೌಲರ್(5-43) ಎನಿಸಿಕೊಂಡರು. ತಲಾ ಎರಡು ವಿಕೆಟ್ ಪಡೆದ ಮುಹಮ್ಮದ್ ಶಮಿ(2-48)ಹಾಗೂ ರವೀಂದ್ರ ಜಡೇಜ(2-64)ಇಶಾಂತ್‌ಗೆ ಸಾಥ್ ನೀಡಿದರು.

ವೆಸ್ಟ್‌ಇಂಡೀಸ್ 2ನೇ ದಿನದಾಟವಾದ ಶುಕ್ರವಾರ ಕೊನೆಯ ಅವಧಿಯಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡು 8 ವಿಕೆಟ್‌ಗಳ ನಷ್ಟಕ್ಕೆ 189 ರನ್ ಗಳಿಸಿತ್ತು. ಟೆಸ್ಟ್ ಕ್ರಿಕೆಟ್‌ನಲ್ಲಿ 9ನೇ ಬಾರಿ ಐದು ವಿಕೆಟ್ ಗೊಂಚಲು(5-43) ಪಡೆದ ಇಶಾಂತ್ ಸರ್ ವಿವಿಯನ್ ರಿಚರ್ಡ್ಸ್‌ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಸುಸ್ಥಿತಿಗೆ ತಲುಪಲು ನೆರವಾದರು.

ರೋಸ್ಟನ್ ಚೇಸ್(48 ರನ್, 74 ಎಸೆತ), ಜಾನ್ ಕ್ಯಾಂಪ್‌ಬೆಲ್(23 ರನ್, 30 ಎಸೆತ), ಡರೆನ್ ಬ್ರಾವೊ(18 ರನ್, 27 ಎಸೆತ), ಶೈ ಹೋಪ್(24 ರನ್, 65 ಎಸೆತ) ಹಾಗೂ ಶಿಮ್ರಾನ್ ಹೆಟ್ಮೆಯರ್(35, 47 ಎಸೆತ)ಉತ್ತರ ಆರಂಭ ಪಡೆದರೂ ಬೇಗನೆ ವಿಕೆಟ್ ಕೈಚೆಲ್ಲುವುದರೊಂದಿಗೆ ಪರೋಕ್ಷವಾಗಿ ಭಾರತ ಮೇಲುಗೈ ಸಾಧಿಸಲು ನೆರವಾದರು.

ಇದಕ್ಕೂ ಮೊದಲು ಆರು ವಿಕೆಟ್‌ಗಳ ನಷ್ಟಕ್ಕೆ 203 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ರವೀಂದ್ರ ಜಡೇಜರ ಹೋರಾಟಕಾರಿ ಅರ್ಧಶತಕ(58)ಸಹಾಯದಿಂದ 297 ರನ್ ಗಳಿಸಿತು.

ಜಡೇಜಗೆ ಉತ್ತಮ ಸಾಥ್ ನೀಡಿದ ಇಶಾಂತ್ ಶರ್ಮಾ 8ನೇ ವಿಕೆಟ್ ಜೊತೆಯಾಟದಲ್ಲಿ 60 ರನ್ ಸೇರಿಸಿ ತಂಡದ ಮೊತ್ತವನ್ನು 300ರ ಗಡಿ ತಲುಪಿಸಿದರು. ವಿಂಡೀಸ್‌ನ ಪರ ಗ್ಯಾಬ್ರಿಯಲ್(3-71) ಹಾಗೂ ಕೆಮರ್ ರೋಚ್(4-66)ಏಳು ವಿಕೆಟ್ ಪಡೆದರು. ಭಾರತವನ್ನು ಮೊದಲ ಇನಿಂಗ್ಸ್‌ನಲ್ಲಿ297 ರನ್‌ಗೆ ನಿಯಂತ್ರಿಸಿದ ವಿಂಡೀಸ್‌ನ ಆಟಗಾರರು ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಕ್ರೀಸ್‌ಗೆ ಅಂಟಿಕೊಂಡು ಆಡಲು ವಿಫಲರಾದರು. ಇಶಾಂತ್ ಬ್ಯಾಟ್ ಹಾಗೂ ಬಾಲ್‌ನಲ್ಲಿ ವಿಂಡೀಸ್‌ಗೆ ಸಿಂಹಸ್ವಪ್ನರಾದರು. ಆರಂಭಿಕ ಆಟಗಾರ ಕ್ರೆಗ್ ಬ್ರಾತ್‌ವೇಟ್(14) ಹಾಗೂ ಮಧ್ಯಮ ಕ್ರಮಾಂಕದ ದಾಂಡಿಗ ಹೆಟ್ಮೆಯರ್(35) ಅವರನ್ನು ರಿಟರ್ನ್ ಕ್ಯಾಚ್ ಪಡೆಯುವ ಮೂಲಕ ಔಟ್ ಮಾಡಿ ಗಮನ ಸೆಳೆದರು.

ಟೀ ವಿರಾಮದ ವೇಳೆಗೆ 82 ರನ್‌ಗೆ 3 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ ಸಂಕಷ್ಟದಲ್ಲಿತ್ತು. ಕ್ಷಿಪ್ರಗತಿಯಲ್ಲಿ ಅರ್ಧಶತಕ ಸಿಡಿಸಿದ ಬಳಿಕ ಬೌಲಿಂಗ್‌ನಲ್ಲೂ ಕೈಚಳಕ ತೋರಿದ ಜಡೇಜ ಚೊಚ್ಚಲ ಪಂದ್ಯ ಆಡಿದ ಬ್ರೂಕ್ಸ್(11) ವಿಕೆಟ್ ಉರುಳಿಸಿದರು. ಇನ್ನೋರ್ವ ಆರಂಭಿಕ ಆಟಗಾರ ಕ್ಯಾಂಪ್‌ಬೆಲ್(23) ವಿಕೆಟನ್ನು ಇನಿಂಗ್ಸ್‌ನ 8ನೇ ಓವರ್‌ನಲ್ಲಿ ಉರುಳಿಸಿದ ಮುಹಮ್ಮದ್ ಶಮಿ ಭಾರತಕ್ಕೆ ಆರಂಭಿಕ ಮೇಲುಗೈ ಒದಗಿಸಿದರು.

ಬ್ರಾವೊ(18)ರನ್ನು ಎಲ್ಬಿಡಬ್ಲು ಬಲೆಗೆ ಬೀಳಿಸಿದ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಿದರು. ವಿಂಡೀಸ್ ಪರ 2ನೇ ದಿನದಾಟದಲ್ಲಿ ಅಗ್ರ ಸ್ಕೋರರ್ ಎನಿಸಿಕೊಂಡ ಚೇಸ್ 48 ರನ್ ಗಳಿಸಿ ಇಶಾಂತ್ ಶರ್ಮಾಗೆ ಔಟಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X