Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂರ್ಕಿ ಐಐಟಿಯಲ್ಲಿ 20 ವರ್ಷಗಳ ಬಳಿಕ...

ರೂರ್ಕಿ ಐಐಟಿಯಲ್ಲಿ 20 ವರ್ಷಗಳ ಬಳಿಕ ಎಂಜಿನಿಯರ್: ಪದವೀಧರರಲ್ಲದವರಿಗೆ ಎಂಬಿಎ ಪ್ರವೇಶಾವಕಾಶ

ವಾರ್ತಾಭಾರತಿವಾರ್ತಾಭಾರತಿ26 Aug 2019 8:54 PM IST
share
ರೂರ್ಕಿ ಐಐಟಿಯಲ್ಲಿ 20 ವರ್ಷಗಳ ಬಳಿಕ ಎಂಜಿನಿಯರ್: ಪದವೀಧರರಲ್ಲದವರಿಗೆ ಎಂಬಿಎ ಪ್ರವೇಶಾವಕಾಶ

ರೂರ್ಕೆ (ಉತ್ತರಾಖಂಡ), ಆ. 26: ಎರಡು ದಶಕಗಳ ಬಳಿಕ ರೂರ್ಕಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ತನ್ನ ಎಂಬಿಎ ಕೋರ್ಸ್‌ಗಳಿಗೆ ಎಂಜಿನಿಯರ್ ಪದವೀಧರರಲ್ಲದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ.

 ರೂರ್ಕಿ ಐಐಟಿ ಎಂಬಿಎ ವಿಭಾಗ 1998ರಲ್ಲಿ ಆರಂಭವಾಗಿತ್ತು. ಮೊದಲ ತಂಡದಲ್ಲಿ (1998-2000) 7 ಮಂದಿ ವಿದೇಶದ ವಿದ್ಯಾರ್ಥಿಗಳು ಸೇರಿಂತೆ 57 ಮಂದಿ ವಿದ್ಯಾರ್ಥಿಗಳಿದ್ದರು ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಮೊದಲ ತಂಡದಲ್ಲಿ 25 ಮಂದಿ ಎಂಜಿನಿಯರ್‌ಗಳು ಇದ್ದರು. ಉಳಿದವರು ವಿಜ್ಞಾನ, ಮ್ಯಾನೇಜ್‌ಮೆಟ್, ವಾಣಿಜ್ಯ ಶಾಸ್ತ್ರ, ಕಲೆ ಹಾಗೂ ಔಷಧ ವಿಜ್ಞಾನ ಸೇರಿದಂತೆ ವಿವಿಧ ಹಿನ್ನೆಲೆಯಿಂದ ಬಂದವರಾಗಿದ್ದರು. 

ಹೋಟೆಲ್ ಮ್ಯಾನೇಜ್‌ಮೆಂಟ್, ಬಿಎಸ್‌ಸಿ ಕೃಷಿ, ಬಿಎಸ್‌ಸಿ ಗೃಹ ವಿಜ್ಞಾನ ಹಿನ್ನೆಲೆ ಹೊಂದಿದವರು ಕೂಡ ಇದ್ದರು ಎಂದು ಅದು ಹೇಳಿದೆ. ಆದರೆ, ಮೊದಲನೇ ತಂಡ ಹೊರಬಂದ ಬಳಿಕ ಇಂಜಿನಿಯರ್ ಪದವೀಧರರಲ್ಲದ ವಿದ್ಯಾರ್ಥಿಗಳಿಗೆ ಎಂಬಿಎ ಕೋರ್ಸ್‌ಗೆ ಪ್ರವೇಶಾತಿಯನ್ನು ನಿಲ್ಲಿಸಲಾಗಿತ್ತು ಎಂದು ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಿಳಿಸಿದ್ದಾರೆ. 

ಇಂದು ಕೈಗಾರಿಕೆಗಳು ವಿಭಿನ್ನ ಶೈಕ್ಷಣಿಕ ಹಿನ್ನೆಲೆಯ ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ನಿಯೋಜಿಸುತ್ತಿರುವುದರಿಂದ ಇದು ತುಂಬಾ ಮುಖ್ಯವಾದುದು ಎಂಬುದು ನಮ್ಮ ಭಾವನೆ. ವಿಭಿನ್ನ ಶೈಕ್ಷಣಿಕ ಹಿನ್ನೆಲೆ ಇರುವ ಕೌಶಲಯುತ ಅಭ್ಯರ್ಥಿಗಳ ಬೇಡಿಕೆ ಹಾಗೂ ಲಭ್ಯವಿರುವ ಪ್ರತಿಭಾವಂತರ ನಡುವಿನ ಅಂತರವನ್ನು ಈ ನಡೆ ತುಂಬಬಹುದು ಎಂದು ಐಐಟಿ ರೂರ್ಕಿಯ ನಿರ್ದೇಶಕ ಅಜಿತ್ ಕೆ. ಚತುರ್ವೇದಿ ಹೇಳಿದ್ದಾರೆ. ಜುಲೈಯಲ್ಲಿ ಆರಂಭವಾದ ಈ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರ್ ಪದವೀಧರರಲ್ಲದ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಈ ವರ್ಷದ ಒಟ್ಟು ಸಾಮರ್ಥ್ಯದ ಶೇ. 10 ಎಂದು ವಿಭಾಗದ ಹಿರಿಯ ಅಧ್ಯಾಪಕರೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X