Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತ್ತಷ್ಟು ಹದಗೆಟ್ಟ ಬ್ರಹ್ಮರಕೂಟ್ಲು ಟೋಲ್...

ಮತ್ತಷ್ಟು ಹದಗೆಟ್ಟ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ: ಟೋಲ್ ವ್ಯಾಪ್ತಿಯಲ್ಲೇ ಗುಂಡಿ, ಭಯದಲ್ಲೇ ಸಂಚಾರ

ಬರೀ ಸುಂಕ ಕಟ್ಟಿದರೆ ಸಾಕೇ ? ರಸ್ತೆ ಬೇಡವೇ ?

ವಾರ್ತಾಭಾರತಿವಾರ್ತಾಭಾರತಿ26 Aug 2019 10:56 PM IST
share
ಮತ್ತಷ್ಟು ಹದಗೆಟ್ಟ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ: ಟೋಲ್ ವ್ಯಾಪ್ತಿಯಲ್ಲೇ ಗುಂಡಿ, ಭಯದಲ್ಲೇ ಸಂಚಾರ

ಬಂಟ್ವಾಳ, ಆ. 26: ಹದಗೆಟ್ಟ ರಸ್ತೆಗಳು, ತಕ್ಕು ಹಿಡಿಯುತ್ತಿರುವ ಬೂತ್-ತಗಡು ಶೀಟ್‍ಗಳು, ಎಲ್ಲೆಂದರಲ್ಲಿ ಬಿದ್ದಿರುವ ಬ್ಯಾರಿಕೇಡ್‍ಗಳು-ಕೋನ್‍ಗಳು, ಹಾಳಾಗಿರುವ ಹಾಗೂ ನೆಲನೋಡುತ್ತಿರುವ ಸಿಸಿ ಕ್ಯಾಮೆರಾಗಳು, ಉರಿಯದ ಸ್ಟ್ರೀಟ್ ಲೈಟ್‍ಗಳು, ಮುರಿದು ಬಿದ್ದಿರುವ ಸಂಚಾರ ನಾಮಫಲಕಗಳು, ಟೋಲ್ ಸಿಬ್ಬಂಗಳ ಗೂಂಡಾಗಿರಿ. ಇವುಗಳು ಬ್ರಹ್ಮರಕೂಟ್ಲು ಟೋಲ್ ಬೂತ್‍ನಲ್ಲಿ ಕಂಡು ಬರುತ್ತಿರುವ ಜ್ವಲಂತ ದೃಶ್ಯಗಳಾಗಿವೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಝವು ಅವೈಜ್ಞಾನಿಕವಾಗಿ ಕೂಡಿದ್ದು, ಮಳೆಗಾಲಕ್ಕೆ ರಸ್ತೆಗಳು ಸಹಿತ ಟೋಲ್‍ಬೂತ್ ವ್ಯಾಪ್ತಿಯ ಮೂಲಸೌಕರ್ಯ ಗಳು ಮತ್ತಷ್ಟು ಹದಗೆಟ್ಟು ಹೋಗಿದೆ. ಸುಂಕ ಕಟ್ಟಿ ಜೇಬು ಖಾಲಿ ಮಾಡಿಕೊಂಡದ್ದಲ್ಲದೇ, ವಾಹನಗಳ ದುರಸ್ತಿಗೆ ಮತ್ತಷ್ಟು ಹಣ ಕಟ್ಟಬೇಕಾದ ಅನಿವಾರ್ಯತೆ ವಾಹನ ಸವಾರರಿಗೆ ಎದುರಾಗಿದೆ. ಬರೀ ಸುಂಕ ಕಟ್ಟಿದರೆ ಸಾಕೇ ? ರಸ್ತೆ ಬೇಡವೇ ? ಎಂದು ವಾಹನ ಸವಾರರು ಪ್ರಶ್ನಿಸುತ್ತಿದ್ದಾರೆ.

ಕೇವಲ ಹಣ ಸಂಗ್ರಹಕ್ಕೆ ಸೀಮಿತವಾಗಿರುವ ಟೋಲ್ ರಸ್ತೆಯಲ್ಲಿ ಹೋಗುವ ವಾಹನಗಳಿಗೆ ಏನೂ ಭದ್ರತೆಯನ್ನು ಮಾಡುವ ಗೋಜಿಗೇ ಹೋಗಿಲ್ಲ. ವ್ಯವಸ್ಥಿತವಾದ ಚರಂಡಿ ವ್ಯವಸ್ಥೆ ಇಲ್ಲ. ಕಾಂಕ್ರೀಟ್ ರಸ್ತೆ ಕಿತ್ತು ಹೋಗಿದೆ. ಹೈಮಾಸ್ಕ್ ದೀಪ ಹಾಗೂ ದಾರಿ ದೀಪವೂ ಉರಿಯುತ್ತಿಲ್ಲ. ಟೋಲ್ ಶುಲ್ಕ ದರ ಬಿಟ್ಟರೆ, ಸಂಚಾರ ನಾಮಫಲಕಗಳು ನಾಪತ್ತೆಯಾಗಿವೆ. 24 ಗಂಟೆಯೂ ತೆರೆಬೇಕಾಗಿರುವ ನಂದಿನಿ ಹಾಲು ಒಕ್ಕೂಟದ ಕ್ಯಾಂಟೀನ್ ಇನ್ನೂ ಆರಂಭವಾಗಿಲ್ಲ. ಹೀಗೆ ಜನರಿಂದ ವಸೂಲಿ ಮಾಡುವುದರಲ್ಲಿ ಕಡಿಮೆ ಇಲ್ಲದ ಇಲಾಖೆ ಜನರಿಗೆ ಕೊಡಬೇಕಾದ ಸವಲತ್ತು ನೀಡುವುದರಲ್ಲಿ ಮೀನಮೇಷ ಹಾಕುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಹೆದ್ದಾರಿಯಲ್ಲಿ ಗಣ್ಯ ವ್ಯಕ್ತಿಗಳು, ಉನ್ನತ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ದಿನನಿತ್ಯ ಉಚಿತವಾಗಿ ಸಂಚರಿಸುವುದರಿಂದ ಅವರಿಗೆ ಇದರ ಸಮಸ್ಯೆ ಗೊತ್ತಾಗುವುದಿಲ್ಲ. ಸುಂಕ ನೀಡಿದವರಿಗೆ ಮಾತ್ರ ಇಲ್ಲಿನ ರಸ್ತೆ ದುರಾವಸ್ಥೆಯ ಸಮಸ್ಯೆಗಳು ಗೋಚರಿಸುತ್ತದೆ. ಆದ್ದರಿಂದ ಶ್ರದ್ಧೆಯಿಂದ ನೀಡುವ ಸುಂಕದ ಹಣಕ್ಕೆ, ರಸ್ತೆಯ ಅವ್ಯವಸ್ಥೆಯಿಂದ ಲಕ್ಷಗಟ್ಟಲೆ ಕೊಟ್ಟು ಖರೀದಿಸಿದ ವಾಹನಗಳ ದುಸ್ಥಿತಿಗೆ ಯಾವ ಇಲಾಖೆಯೂ ಮುನ್ನೆಚ್ಚರಿಕೆ ವಹಿಸುವುದಿಲ್ಲ ಎಂದು ಸವಾರರು ದೂರುತ್ತಿದ್ದಾರೆ.

ತುರ್ತು ರಸ್ತೆಯೂ ಇಲ್ಲ

ಸುಂಕ ವಸೂಲಿ ಮಾಡುವಾಗ ಹೆದ್ದಾರಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಆಂಬುಲೆನ್ಸ್ ಸಹಿತ ತುರ್ತು ವಾಹನಗಳ ಸಂಚಾರಕ್ಕೆ ರಸ್ತೆಯೂ ಇಲ್ಲ. ಟೋಲ್ ರಸ್ತೆ ವಾಹನಗಳು ಬೇಕಾಬಿಟ್ಟಿ ಸಂಚಾರಸುತ್ತಿದ್ದು, ಇದರಿಂದ ಸವಾರರಿಗೆ ಗಲಿಬಿಲಿಯಾಗುವ ಸಂಭವವೆ ಹೆಚ್ಚು ಎಂದು ದೂರುತ್ತಾರೆ ವಾಹನ ಸವಾರರು.

ವೀಡಿಯೊ ವೈರಲ್

ಕೆಲವು ದಿನಗಳ ಹಿಂದೆ ಕಾರೊಂದು ಸುಂಕ ನೀಡಿ ಮುಂದೆ ಹೋದಾಕ್ಷಣ ಟೋಲ್ ಬೂತ್‍ನ ಬಳಿಯೇ ಅದರ ಹೊಂಡಕ್ಕೆ ಬಿದ್ದು ಎರಡೂ ಟಯರ್ ಪಂಚರ್ ಆದ ಘಟನೆ ನಡೆದಿದ್ದು ಈ ಕಾರನ್ನು ತಲ್ಲುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಎಚ್ಚೆತ್ತುಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೊಂಡಕ್ಕೆ ತೇಪೆ ಹಚ್ಚುವ ಕೆಲಸ ಮಾಡುವುದನ್ನು ಬಿಟ್ಟರೆ ಶಾಶ್ವತವಾದ ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವುಕ್ಕೆ ಮುಂದಾಗಿಲ್ಲ.

ತಗಡಿನ ಬೂತ್

ಟೋಲ್ ಬೂತ್‍ಗೂ ಸರಿಯಾದ ಭದ್ರತೆ ಇಲ್ಲ. ಕಂಪ್ಯೂಟರ್ ಕೇಂದ್ರವೇ ದುರವಸ್ಥೆಯಿಂದ ಕೂಡಿದೆ. ಟೋಲ್ ಬೂತ್ ದುರಾವಸ್ಥೆಯಲ್ಲಿದ್ದರೂ ವಸೂಲಿ ಮಾತ್ರ ಕ್ರಮಬದ್ಧವಾಗಿ ನಡೆಯುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ವಾಹನ ದಟ್ಟಣೆಯನ್ನು ತಪ್ಪಿಸಲು ಹಾಗೂ ತುರ್ತು ವಾಹನಗಳು ಸಂಚರಿಸಲು ಹೊಸ ರಸ್ತೆ ಹಾಗೂ ಟೋಲ್ ಬೂತ್ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತು ವರ್ಷ ಕಳೆಯಿತು. ಹೀಗೆ ಹಲವಾರು ವರ್ಷಗಳಿಂದ ವಾಹನ ಸವಾರರಿಂದ ಸುಂಕ ಪಡೆದುಕೊಂಡರೂ ವಾಹನ ಸವಾರರಿಗೆ ಸವಲತ್ತು ನೀಡುವಲ್ಲಿ ಪ್ರಾಧಿಕಾರ ವಿಫಲವಾಗಿದೆ.

ಬ್ರಹ್ಮರಕೂಟ್ಲು ಟೋಲ್‍ ಪ್ಲಾಝಾ ಹೊಂಡಗಳಿಂದಲೇ ಸ್ವಾಗತಿಸುತ್ತದೆ. ಈ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ವಸೂಲಿ ಮಾಡುವುದನ್ನು ಬಿಟ್ಟರೆ ಬೇರೆ ಏನೂ ಕಾಣುವುದಿಲ್ಲ. ದಾರಿದೀಪವಿಲ್ಲ, ದೂರದಿಂದ ನೋಡಿದರೆ ಯಾವುದೋ ಕಬ್ಬಿಣದ ಸಲಾಕೆಯಿಂದ ನಿಲ್ಲಿಸಿದ ಮಂಟಪದಂತಿದೆ. ವಸೂಲಿ ಮಾಡುವ ಟೋಲ್ ಬೂತೇ ತುಕ್ಕು ಹಿಡಿದಿದೆ. ರಸ್ತೆಯಲ್ಲಿ ಹೋಗುವ ವಾಹನಗಳ ಸುರಕ್ಷತೆ ಅವರಿಗಿಲ್ಲ. ಇದನ್ನು ನಾವು ಅನುಭವಿಸುತ್ತಲೇ ಇರಬೇಕು.

-ಸುಕುಮಾರ್ ಬಂಟ್ವಾಳ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X