Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್: ಹಿಂಸೆಗೆ ತಿರುಗಿದ ಪ್ರತಿಭಟನೆ

ಹಾಂಕಾಂಗ್: ಹಿಂಸೆಗೆ ತಿರುಗಿದ ಪ್ರತಿಭಟನೆ

ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಬೀದಿ ಕಾಳಗ; 36 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Aug 2019 11:04 PM IST
share
ಹಾಂಕಾಂಗ್: ಹಿಂಸೆಗೆ ತಿರುಗಿದ ಪ್ರತಿಭಟನೆ

ಹಾಂಕಾಂಗ್, ಆ. 26: ಹಾಂಕಾಂಗ್‌ನಲ್ಲಿ ರವಿವಾರ ನಡೆದ ಪ್ರಜಾಪ್ರಭುತ್ವ ಪರ ಪ್ರತಿಭಟನೆಯ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸರು 36 ಮಂದಿಯನ್ನು ಬಂಧಿಸಿದ್ದಾರೆ.

ಪ್ರತಿಭಟನಕಾರರು ಮತ್ತು ಪೊಲೀಸರ ನಡುವಿನ ಉದ್ವಿಗ್ನತೆ ತಾರಕಕ್ಕೇರಿದಾಗ, ಪ್ರತಿಭಟನಕಾರರು ಪೊಲೀಸರತ್ತ ಪೆಟ್ರೋಲ್ ಬಾಂಬ್ (ಪೆಟ್ರೋಲ್ ತುಂಬಿದ ಗಾಜಿನ ಬಾಟಲಿಗೆ ಬೆಂಕಿ ಕೊಟ್ಟು ಎಸೆಯುವುದು)ಗಳನ್ನು ಎಸೆದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಪ್ರತಿಭಟನಕಾರರ ಮೇಲೆ ಜಲಫಿರಂಗಿ ಧಾರೆಯನ್ನು ಹರಿಸಿದರು ಹಾಗೂ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

ಹಾಂಕಾಂಗ್‌ನ ಆರೋಪಿಗಳನ್ನು ವಿಚಾರಣೆಗಾಗಿ ಮಾತೃಭೂಮಿ ಚೀನಾಕ್ಕೆ ಗಡಿಪಾರು ಮಾಡುವ ಹಾಂಕಾಂಗ್‌ನ ಮಸೂದೆಯನ್ನು ವಿರೋಧಿಸಿ ಪ್ರತಿಭಟನಕಾರರು ಮೂರು ತಿಂಗಳಿನಿಂದ ಬೀದಿಗಿಳಿದು ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಅಂದಿನಿಂದ ಜೊತೆಜೊತೆಯಾಗಿ ಪ್ರಜಾಪ್ರಭುತ್ವ ಪರ ಚಳವಳಿಯೂ ನಡೆಯುತ್ತಿದೆ.

ರವಿವಾರ ಸಂಜೆ ಇಟ್ಟಿಗೆಗಳು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಎಸೆದ ಪ್ರತಿಭಟನಕಾರರ ಮೇಲೆ ಪೊಲೀಸರು ಜಲಫಿರಂಗಿ ಧಾರೆ ಹರಿಸಿದರು ಹಾಗು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

ಪ್ರತಿಭಟನಕಾರರು ಪೊಲೀಸರೊಂದಿಗೆ ಕಣ್ಣಾಮುಚ್ಚಾಲೆ ಆಟ ಆಡಿದರು. ನಗರದ ಎಲ್ಲಾ ಕಡೆ ಓಡಾಡಿದ ಪ್ರತಿಭಟನಕಾರರು, ಕೆಲವು ರಸ್ತೆಗಳನ್ನು ಮುಚ್ಚುವುದಕ್ಕಾಗಿ ರಸ್ತೆ ತಡೆಗಳನ್ನು ಏರ್ಪಡಿಸಿದರು.

ಇದಕ್ಕೂ ಮೊದಲು, ಬೆಳಗ್ಗಿನ ಅವಧಿಯಲ್ಲಿ ಪ್ರತಿಭಟನೆಯು ಬಹುತೇಕ ಶಾಂತಿಯುತವಾಗಿತ್ತು.

ಅಕ್ರಮ ಕೂಟ, ಆಕ್ಷೇಪಾರ್ಹ ಆಯುಧಗಳ ಬಳಕೆ ಮತ್ತು ಪೊಲೀಸರಿಗೆ ಹಲ್ಲೆ ಮಾಡಿದ ಆರೋಪಗಳಲ್ಲಿ 29 ಪುರುಷರು ಮತ್ತು 7 ಮಹಿಳೆಯರನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪೊಲೀಸರಿಂದ ಗಾಳಿಯಲ್ಲಿ ಗುಂಡು

ಆರು ಪೊಲೀಸ್ ಅಧಿಕಾರಿಗಳು ತಮ್ಮ ಪಿಸ್ತೂಲುಗಳನ್ನು ಸೊಂಟದಿಂದ ಎಳೆದುಕೊಂಡರು ಹಾಗೂ ಓರ್ವ ಅಧಿಕಾರಿ ಗಾಳಿಯಲ್ಲಿ ಎಚ್ಚರಿಕೆಯ ಗುಂಡು ಹಾರಿಸಿದರು ಎಂದು ಪೊಲೀಸರು ಹೇಳಿಕೆಯೊಂದರಲ್ಲಿ ತಿಳಿಸಿದರು.

‘‘ಪ್ರತಿಭಟನಕಾರರ ಕಾನೂನುಬಾಹಿರ ಮತ್ತು ಹಿಂಸಾತ್ಮಕ ಕೃತ್ಯಗಳು ಆಕ್ರೋಶ ಹುಟ್ಟಿಸುವುದು ಮಾತ್ರವಲ್ಲ, ಅವುಗಳು ಹಾಂಕಾಂಗನ್ನು ಅತ್ಯಂತ ಅಪಾಯಕಾರಿ ಪರಿಸ್ಥಿತಿಗಡೆ ತಳ್ಳುತ್ತಿವೆ’’ ಎಂದು ಸರಕಾರ ಬಿಡುಗಡೆ ಮಾಡಿದ ಹೇಳಿಕೆಯೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X