ಕೇಂದ್ರ ಸರಕಾರದಿಂದ ನಿರೀಕ್ಷೆಗೂ ಮೀರಿ ನೆರವು: ಮುಖ್ಯಮಂತ್ರಿ ವಿಶ್ವಾಸ
![ಕೇಂದ್ರ ಸರಕಾರದಿಂದ ನಿರೀಕ್ಷೆಗೂ ಮೀರಿ ನೆರವು: ಮುಖ್ಯಮಂತ್ರಿ ವಿಶ್ವಾಸ ಕೇಂದ್ರ ಸರಕಾರದಿಂದ ನಿರೀಕ್ಷೆಗೂ ಮೀರಿ ನೆರವು: ಮುಖ್ಯಮಂತ್ರಿ ವಿಶ್ವಾಸ](https://www.varthabharati.in/sites/default/files/images/articles/2019/08/27/207177-1566909708.jpg)
ಬೆಂಗಳೂರು, ಆ.27: ರಾಜ್ಯದ ಪ್ರವಾಹ ಪರಿಹಾರ ಪರಿಸ್ಥಿತಿ ನಿಭಾಯಿಸಲು ನಮ್ಮ ನಿರೀಕ್ಷೆ ಮೀರಿ ಹೆಚ್ಚಿನ ನೆರವನ್ನು ಕೇಂದ್ರ ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರಿಗೆ ಕೈಗಾರಿಕೋದ್ಯಮಿಗಳು, ಸರಕಾರಿ ನೌಕರರು, ಮಠಾಧೀಶರು ಉದಾರ ನೆರವು ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಜನರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಆದ್ಯತೆ ಎಂದರು.
ಮುಖ್ಯಮಂತ್ರಿಯಾದ ದಿನದಿಂದ ಒಂದು ನಿಮಿಷ ವಿಶ್ರಾಂತಿ ಪಡೆಯದೆ ಅಹರ್ನಿಶಿ ದುಡಿಯುತ್ತಿದ್ದೇನೆ. ಈಗ ಉತ್ತಮ ಸಂಪುಟ ಇದೆ. ರಾಜ್ಯದ ಅಭಿವದ್ಧಿಗೆ ಎಲ್ಲರೂ ಕೈಜೋಡಿಸಿ ದುಡಿಯುವ ಜತೆಗೆ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ತರುವತ್ತ ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕಿದೆ ಎಂದು ಅವರು ಹೇಳಿದರು.
Next Story