Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೆಹಬೂಬ ಬಿಡುಗಡೆ ಬಗ್ಗೆ ಯಾವುದೇ...

ಮೆಹಬೂಬ ಬಿಡುಗಡೆ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಕುಟುಂಬದ ಅಳಲು

“ಭೇಟಿಯಾಗಲೂ ಬಿಡುತ್ತಿಲ್ಲ”

ವಾರ್ತಾಭಾರತಿವಾರ್ತಾಭಾರತಿ27 Aug 2019 9:12 PM IST
share
ಮೆಹಬೂಬ ಬಿಡುಗಡೆ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಕುಟುಂಬದ ಅಳಲು

 ಶ್ರೀನಗರ,ಆ.27: ಜಮ್ಮು-ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಅವರು ಕಳೆದ ಸುಮಾರು ಒಂದು ತಿಂಗಳಿನಿಂದಲೂ ಪೊಲೀಸರ ವಶದಲ್ಲಿದ್ದು,ಅವರನ್ನು ಯಾವಾಗ ಬಿಡುಗಡೆಗೊಳಿಸಬಹುದು ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಮೆಹಬೂಬ ಬಂಧನದ ಬಳಿಕ ಒಂದು ಬಾರಿಯೂ ಅವರನ್ನು ಭೇಟಿಯಾಗಲು ತಮಗೆ ಅವಕಾಶ ನೀಡಲಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಆದರೆ ಬಂಧಿತರ ಕುಟುಂಬಗಳಿಂದ ಇಂತಹ ಯಾವುದೇ ಕೋರಿಕೆ ತನಗೆ ಬಂದಿಲ್ಲ ಎಂದು ರಾಜ್ಯ ಆಡಳಿತವು ಹೇಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

  “ಪದೇ ಪದೇ ಮನವಿಗಳನ್ನು ಮಾಡಿಕೊಂಡಿದ್ದರೂ ಅವರನ್ನು ನೋಡಲು ನಮಗೆ ಅನುಮತಿ ನೀಡಲಾಗಿಲ್ಲ. ನಮ್ಮ ವಯೋವೃದ್ಧ ತಾಯಿ ಪುತ್ರಿಯ ಕ್ಷೇಮದ ಬಗ್ಗೆ ಆತಂಕಗೊಂಡಿದ್ದಾರೆ” ಎಂದು ಮೆಹಬೂಬರ ಸೋದರಿ ರುಬಿಯಾ ಸಯೀದ್ ಅವರು ಆ.21ರಂದು ಭದ್ರತಾ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

“ನಾವು ಹೆಚ್ಚುಕಡಿಮೆ ಪ್ರತಿದಿನವೂ ಅವರನ್ನು ಕೋರುತ್ತಲೇ ಇದ್ದೇವೆ. ಭದ್ರತಾ ಸಿಬ್ಬಂದಿಗಳು ಮೌಖಿಕ ಮನವಿಗಳಿಗೆ ಸ್ಪಂದಿಸುತ್ತಿಲ್ಲವಾದ್ದರಿಂದ ಲಿಖಿತ ಪತ್ರವನ್ನು ನೀಡಿದ್ದೆವು,ಆದರೆ ಅದಕ್ಕೂ ಅವರು ಸ್ಪಂದಿಸಿಲ್ಲ. ನನಗೆ ಲಿಖಿತವಾಗಿ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ. ತಾವೇನು ಮಾಡುತ್ತಿದ್ದೇವೆ ಎನ್ನುವುದರ ಕಾನೂನು ಮಗ್ಗಲನ್ನು ಅವರು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ” ಎಂದು ಮೆಹಬೂಬರ ಪುತ್ರಿ ಇಲ್ತಿಜಾ ಜಾವೇದ್ ತಿಳಿಸಿದರು.

ಕೇಂದ್ರವು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡು,ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದಾಗಿನಿಂದ ರಾಜ್ಯಾದ್ಯಂತ 40 ಮುಖ್ಯವಾಹಿನಿ ರಾಜಕೀಯ ನಾಯಕರನ್ನು ಬಂಧಿಸಲಾಗಿದೆ. ಈ ಪೈಕಿ ಅರ್ಧದಷ್ಟು ನಾಯಕರನ್ನು ಜಮ್ಮುವಿನಲ್ಲಿ ಗೃಹಬಂಧನದಲ್ಲಿರಿಸಲಾಗಿದ್ದರೆ,ಇತರರನ್ನು ಕಾಶ್ಮೀರದಲ್ಲಿರಿಸಲಾಗಿದೆ ಎಂದು ಹಿರಿಯ ಸರಕಾರಿ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

ರಾಜ್ಯದಲ್ಲಿ ಶಾಂತಿಯನ್ನು ಕಾಯ್ದುಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಅಂಗವಾಗಿ ಈ ಬಂಧನಗಳನ್ನು ಮಾಡಲಾಗಿದೆ ಮತ್ತು ಸಹಜ ಸ್ಥಿತಿ ಮರಳಿದ ಬಳಿಕ ಈ ಕ್ರಮಗಳನ್ನು ಹಿಂದೆಗೆದುಕೊಳ್ಳಲಾಗುವುದು ಎಂದು ಸರಕಾರವು ಹೇಳಿದೆ. ಆದರೆ ಸುಮಾರು ಒಂದು ತಿಂಗಳಾಗುತ್ತ ಬಂದಿದ್ದರೂ ಯಾವುದೇ ಕ್ರಮವನ್ನು ಪೂರ್ಣವಾಗಿ ಹಿಂದೆಗೆದುಕೊಳ್ಳಲಾಗಿಲ್ಲ.

ಮೆಹಬೂಬ ಮತ್ತು ಉಮರ್ ಅವರ ಸಂಪುಟಗಳಲ್ಲಿದ್ದ 70 ವರ್ಷಕ್ಕೂ ಕಡಿಮೆ ಪ್ರಾಯದ ಎಲ್ಲ ಮಾಜಿ ಸಚಿವರು ಗೃಹಬಂಧನದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಫಾರೂಕ್ ಅಬ್ದುಲ್ಲಾ, ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜ್ಜಾದ್ ಲೋನ್,ಮತ್ತು ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್ ಅವರು ಬಂಧಿತರಲ್ಲಿ ಸೇರಿದ್ದಾರೆ. ಜಮ್ಮುವಿನಲ್ಲಿ ಬಂಧನದಲ್ಲಿರುವವರಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಸೋದರ ದೇವೆಂದರ್ ಸಿಂಗ್ ರಾಣಾ ಕೂಡ ಸೇರಿದ್ದಾರೆ. ರಾಣಾ ತನ್ನ ನಿವಾಸದಲ್ಲಿಯೇ ಬಂಧನದಲ್ಲಿದ್ದು,ಕುಟುಂಬ ಸದಸ್ಯರು ಅವರನ್ನು ಭೇಟಿಯಾಗುತ್ತಿರುತ್ತಾರೆ ಎಂದು ಅಧಿಕಾರಿ ತಿಳಿಸಿದರು.

ಬಂಧಿತರಲ್ಲಿ ಹೆಚ್ಚಿನವರು ಶ್ರೀನಗರದ ಸೆಂಟಾರ್ ಹೋಟೆಲ್‌ನಲ್ಲಿದ್ದಾರೆ. ಒಮರ್ ಅವರು ಸರಕಾರಿ ಅತಿಥಿ ಗೃಹವಾದ ಹರಿನಿವಾಸ ಪ್ಯಾಲೇಸ್‌ನಲ್ಲಿದ್ದರೆ,ಮೆಹಬೂಬ ಶ್ರೀನಗರದಲ್ಲಿಯ ಅತ್ಯಂತ ಸುಂದರ ಸಾರ್ವಜನಿಕ ಉದ್ಯಾನಗಳಲ್ಲೊಂದಿರುವ ಚಷ್ಮಾ ಶಾಹಿಯಲ್ಲಿದ್ದಾರೆ.

ಈ ನಾಯಕರ ಬಿಡುಗಡೆ ಶೀಘ್ರವೇ ಆಗುತ್ತದೆ ಎನ್ನುವುದರಲ್ಲಿ ಅನುಮಾನವಿದೆ ಎಂದು ಜಮ್ಮು-ಕಾಶ್ಮೀರದಲ್ಲಿಯ ಇನ್ನೋರ್ವ ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X