Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಸರಕಾರ 'ಆಪರೇಷನ್ ಕಮಲ'ದ ಅನೈತಿಕ...

ಬಿಜೆಪಿ ಸರಕಾರ 'ಆಪರೇಷನ್ ಕಮಲ'ದ ಅನೈತಿಕ ಕೂಸು: ಸಿದ್ದರಾಮಯ್ಯ

"ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದು"

ವಾರ್ತಾಭಾರತಿವಾರ್ತಾಭಾರತಿ28 Aug 2019 8:00 PM IST
share
ಬಿಜೆಪಿ ಸರಕಾರ ಆಪರೇಷನ್ ಕಮಲದ ಅನೈತಿಕ ಕೂಸು: ಸಿದ್ದರಾಮಯ್ಯ

ಬೆಂಗಳೂರು, ಆ.28: ರಾಜ್ಯ ಬಿಜೆಪಿ ಸರಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪ ಸರಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಗೋಕಾಕ್, ಕಾಗವಾಡ ಮತ್ತು ಅಥಣಿ ಉಪ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾವನಾತ್ಮಕ ವಿಚಾರಗಳ ಮೇಲೆಯೇ ರಾಜಕಾರಣ ಮಾಡುತ್ತಾ ಹೋದರೆ ಜನರ ನೈಜ ಸಮಸ್ಯೆಗಳಾದ ನಿರುದ್ಯೋಗ, ಬಡತನ, ಅನಕ್ಷರತೆ, ಹಸಿವು ಇವುಗಳನ್ನು ಬಗೆಹರಿಸುವವರಾರು? ಜನರ ಅನುಕಂಪ ಗಳಿಸುವುದು, ಪ್ರಚಾರ ಪಡೆಯುವುದು, ಭಾವನಾತ್ಮಕವಾಗಿ ಮರುಳು ಮಾಡುವುದು ಸರಕಾರದ ಕರ್ತವ್ಯವಲ್ಲ, ದುರಂತವೆಂದರೆ ಕೇಂದ್ರ ಸರಕಾರ ಇದನ್ನು ಬಿಟ್ಟು ಬೇರೇನೂ ಮಾಡುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ ಮೂರು ದಿನ ದಿಲ್ಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನು ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X