Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೊಳೆತು ದುರ್ವಾಸನೆ ಬೀರುತ್ತಿದೆ...

ಕೊಳೆತು ದುರ್ವಾಸನೆ ಬೀರುತ್ತಿದೆ ತ್ಯಾಜ್ಯ: ಮಂಗಳೂರು ಸ್ಮಾರ್ಟ್‌ ಸಿಟಿಗೆ ಕಳಂಕ ಸೆಂಟ್ರಲ್ ಮಾರ್ಕೆಟ್!

ಮೂಗು ಮುಚ್ಚಿಕೊಂಡಿರಬೇಕು ಗ್ರಾಹಕರು, ವ್ಯಾಪಾರಸ್ಥರು!

ಬಂದೇನವಾಝ್ ಮ್ಯಾಗೇರಿಬಂದೇನವಾಝ್ ಮ್ಯಾಗೇರಿ28 Aug 2019 9:58 PM IST
share
ಕೊಳೆತು ದುರ್ವಾಸನೆ ಬೀರುತ್ತಿದೆ ತ್ಯಾಜ್ಯ: ಮಂಗಳೂರು ಸ್ಮಾರ್ಟ್‌ ಸಿಟಿಗೆ ಕಳಂಕ ಸೆಂಟ್ರಲ್ ಮಾರ್ಕೆಟ್!

ಮಂಗಳೂರು, ಆ.28: ಮಹಾನಗರ ಮಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇತ್ತೀಚೆಗೆ ಸ್ಮಾರ್ಟ್ ಸಿಟಿಯಾಗಿಯೂ ಪರಿವರ್ತನೆಯಾಗುತ್ತಿದೆ. ಆದರೆ, ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದು, ಕಸ ವಿಲೇವಾರಿಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಮನಪಾ ನಿಗದಿ ಮಾಡಿದ ಸೆಂಟ್ರಲ್ ಮಾರ್ಕೆಟ್ ನ ಮಾಂಸದಂಗಡಿಯ ಪಕ್ಕದಲ್ಲಿ ಈಗಾಗಲೇ ತ್ಯಾಜ್ಯ ಹಾಕಿದ್ದನ್ನು ಮನಪಾದ ಕಸ ವಿಲೇವಾರಿ ತಂಡ ಸಾಗಿಸುತ್ತದೆ. ಆದರೆ, ಕಳೆದ ಹಲವು ದಿನಗಳಿಂದ ತ್ಯಾಜ್ಯ ಸಾಗಾಟ ನಡೆದೇ ಇಲ್ಲ ಎನ್ನುವಂತೆ ಭಾಸವಾಗುತ್ತಿದೆ. ತ್ಯಾಜ್ಯ ರಾಶಿ ಬಿದ್ದಿದ್ದು, ದುರ್ವಾಸನೆ ಮುಖ, ಮೂಗಿಗೆ ರಾಚುತ್ತಿದೆ.

ಮಾರ್ಕೆಟ್ ನಲ್ಲಿರುವ ಹಮಾಲಿಗಳು ಕಸದ ಲಾರಿಗಳು ನಿಂತಿದ್ದರೂ ಕೂಡ ಕಸವನ್ನು ಲಾರಿಗೆ ತುಂಬಿಸುವ ಬದಲು ರಸ್ತೆಯ ಪಕ್ಕದಲ್ಲಿಯೇ ರಾಶಿ ಹಾಕಿಕೊಂಡು ಹೋಗುತ್ತಾರೆ. ಇಲ್ಲಿ ವ್ಯಾಪಾರಸ್ಥರು ಮೂಗು ಮುಚ್ಚಿ ವಹಿವಾಟಿನಲ್ಲಿ ತೊಡಗಬೇಕಾಗಿದೆ. ಪಾಲಿಕೆ ಸಿಬ್ಬಂದಿಯ ನಿರ್ಲಕ್ಷತನದ ಪಾಲೂ ಇದರಲ್ಲಿದೆ.

“ಕೆಟ್ಟ ಕುಂಬಳಕಾಯಿ, ಸೌತೆ, ಬದನೆಯಂತಹ ತರಕಾರಿಯ ತ್ಯಾಜ್ಯವೆಲ್ಲ ಸೆಂಟ್ರಲ್ ಮಾರ್ಕೆಟ್‌ ನ ಮಾಂಸದಂಗಡಿ ಸಮೀಪ ಗುಡ್ಡೆ ಹಾಕಲಾಗುತ್ತಿದೆ. ಇದರಿಂದ ಗ್ರಾಹಕರು ಮೂಗು ಮುಚ್ಚಿಕೊಂಡು ತರಕಾರಿ, ಹಣ್ಣುಹಂಪಲು ಖರೀದಿಸುವ ದುಃಸ್ಥಿತಿ ನಿರ್ಮಾಣವಾಗಿದೆ. ವ್ಯಾಪಾರಸ್ಥರಂತೂ ತ್ಯಾಜ್ಯದ ವಾಸನೆಯಿಂದ ಕಂಗಾಲಾಗಿದ್ದಾರೆ. ಕಳೆದ ಆರು ದಿನಗಳಿಂದ ತ್ಯಾಜ್ಯದ ಬೃಹತ್ ಗುಡ್ಡೆ ತುಂಬಿ ರಸ್ತೆಗೆ ಚಾಚಿಕೊಂಡಿದ್ದು, ಅರ್ಧ ರಸ್ತೆಯೇ ಆಪೋಶನ ತೆಗೆದುಕೊಂಡಿದೆ” ಎಂದು ಸೆಂಟ್ರಲ್ ಮಾರ್ಕೆಟ್‌ನ ವ್ಯಾಪಾರಸ್ಥ ಝಮೀರ್ ವಾಮಂಜೂರು ಅಸಹನೆ ಹೊರ ಹಾಕಿದರು.

ಮಾರಕ ರೋಗಗಳ ಅಪಾಯ

ಸೆಂಟ್ರಲ್ ಮಾರ್ಕೆಟ್‌ ನ ತ್ಯಾಜ್ಯದ ಗುಡ್ಡೆಗಳು ಮಾರಕ ರೋಗಗಳನ್ನು ಆಹ್ವಾನಿಸುವಂತಿದೆ. ಮಾರ್ಕೆಟ್‌ನ ಹಲವು ವ್ಯಾಪಾರಸ್ಥರು ಈಗಾಗಲೇ ಡೆಂಗ್, ಮಲೇರಿಯದಂತಹ ಕಾಯಿಲೆಗಳಿಂದ ಬಳಲಿ ಜರ್ಝರಿತಗೊಂಡಿದ್ದಾರೆ. ತ್ಯಾಜ್ಯವನ್ನು ಇಂದು ತೆಗೆಯುತ್ತಾರೆ; ನಾಳೆ ತೆಗೆಯುತ್ತಾರೆನ್ನುವ ಆಶಾಭಾವನೆಯಲ್ಲೇ ದಿನದೂಡುತ್ತಿದ್ದು, ಗುರುವಾರವೇ ಮನಪಾ ಆಯುಕ್ತರಿಗೆ ಮನವಿ ಸಲ್ಲಿಸಿ, ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ಝಮೀರ್ ವಾಮಂಜೂರು ತಿಳಿಸಿದರು.

 “ಪಾಲಿಕೆಯ ತ್ಯಾಜ್ಯ ವಿಲೇವಾರಿ ವಾಹನ ಬಾರದೆ ಒಂದು ವಾರವೇ ಕಳೆಯಿತು. ಕಸ ತುಂಬುವಾಗ ಇದನ್ನು ಮತ್ತಷ್ಟು ಡ್ರಜ್ಜಿಂಗ್ ಮಾಡಿ ಸಾಗಿಸುವ ಭರದಲ್ಲಿ ಈ ತ್ಯಾಜ್ಯದ ನೀರು ನೇರವಾಗಿ ರಸ್ತೆಯಲ್ಲೇ ಸಾಗಿ ಅಲ್ಲಿರುವ ಅಂಗಡಿಗಳ ಮುಂಭಾಗದಲ್ಲಿ ಹರಿಯುತ್ತದೆ. ಈ ಸಮಸ್ಯೆಯಿಂದಾಗಿ ಮಾಂಸದಂಗಡಿಗೆ ಸಾಗುವ ರಸ್ತೆಯಲ್ಲಿ ಯಾರು ನೇರವಾಗಿ ಹೋಗಲು ಸಾಧ್ಯವಿಲ್ಲ. ಮತ್ತೊಂದೆಡೆ ತ್ಯಾಜ್ಯ ಹಾಕುವ ಜಾಗವನ್ನು ಸರಿ ಮಾಡಿದರೆ ಕಸದ ಸಮಸ್ಯೆಗೆ ಕೊಂಚ ಮುಕ್ತಿ ನೀಡಬಹುದು” ಎನ್ನುತ್ತಾರೆ ಸೆಂಟ್ರಲ್ ಮಾರ್ಕೆಟ್‌ನ ಮತ್ತೋರ್ವ ವ್ಯಾಪಾರಸ್ಥ.

ಸೆಂಟ್ರಲ್ ಮಾರ್ಕೆಟ್‌ ನಲ್ಲಿನ ತ್ಯಾಜ್ಯದ ಗುಡ್ಡೆಗಳಿಂದಾಗಿ ರಸ್ತೆಯಲ್ಲಿಯೇ ತ್ಯಾಜ್ಯನೀರು ಹರಿದು ವಾಹನಗಳ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಒಂದು ವಾರದಲ್ಲೆ ಮೂರು-ನಾಲ್ಕು ಅಪಘಾತ ಸಂಭವಿಸಿವೆ. ಬುಧವಾರ ಮಧ್ಯಾಹ್ನವೂ ಬೈಕೊಂದು ಸ್ಕಿಡ್‌ಆಗಿ ಬಿದ್ದು, ಸವಾರ ಹಾಗೂ ಸಹಸವಾರೆ ಗಾಯಗೊಂಡಿದ್ದಾರೆ. ಪಾಲಿಕೆಯೇ ಇದಕ್ಕೆ ಹೊಣೆ ಹೊರಬೇಕು.

- ಝಮೀರ್ ವಾಮಂಜೂರು, ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥ

share
ಬಂದೇನವಾಝ್ ಮ್ಯಾಗೇರಿ
ಬಂದೇನವಾಝ್ ಮ್ಯಾಗೇರಿ
Next Story
X