Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿಯಲ್ಲಿ ನನ್ನ ಪುತ್ರ, ಟೈಲರ್ ಮಗನನ್ನು...

ಐಐಟಿಯಲ್ಲಿ ನನ್ನ ಪುತ್ರ, ಟೈಲರ್ ಮಗನನ್ನು ಒಟ್ಟಾಗಿ ನೋಡಿದಾಗ ಸಂತಸವಾಗುತ್ತದೆ: ಅರವಿಂದ ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ28 Aug 2019 10:54 PM IST
share
ಐಐಟಿಯಲ್ಲಿ ನನ್ನ ಪುತ್ರ, ಟೈಲರ್ ಮಗನನ್ನು ಒಟ್ಟಾಗಿ ನೋಡಿದಾಗ ಸಂತಸವಾಗುತ್ತದೆ: ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ, ಆ. 28: ದಿಲ್ಲಿ ಸರಕಾರದ ಉಚಿತ ತರಬೇತಿ ಕಾರ್ಯಕ್ರಮದಿಂದ ಟೈಲರ್‌ನ ಮಗನೋರ್ವ ಐಐಟಿ ಪ್ರವೇಶ ಪರೀಕ್ಷೆ ಉತ್ತೀರ್ಣನಾಗಿರುವ ಬಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂತಸ ವ್ಯಕ್ತಪಡಿಸಿದ್ದಾರೆ.

“ನನ್ನ ಪುತ್ರ ಕೂಡ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಅಲ್ಲದೆ ನನ್ನ ಪುತ್ರ ಟೈಲರ್‌ನ ಮಗನೊಂದಿಗೆ ಒಂದೇ ಐಐಟಿಯಲ್ಲಿ ಶಿಕ್ಷಣ ಪಡೆದುಕೊಳ್ಳಲಿದ್ದಾರೆ. ಇದು ನನಗೆ ಹೆಮ್ಮೆ ಅನಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

 ‘‘ವಿಜಯ್ ಕುಮಾರ್‌ನ ತಂದೆ ಟೈಲರ್ ಹಾಗೂ ಆತನ ತಾಯಿ ಗೃಹಿಣಿ. ದಿಲ್ಲಿ ಸರಕಾರ ಉಚಿತ ತರಬೇತಿ ನೀಡಿದ ಬಳಿಕ ಆತ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣನಾದ ಎಂಬುದು ನನಗೆ ಹೆಮ್ಮೆಯಾಗುತ್ತಿದೆ. ಬಾಬಾ ಸಾಹೇಬ್ ಅವರ ಈ ಆಕಾಂಕ್ಷೆ ದಿಲ್ಲಿ ಸರಕಾರದಿಂದ ಈಡೇರಿದೆ’’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಜೈ ಭೀಮ್ ಮುಖ್ಯಮಂತ್ರಿ ಪ್ರತಿಭಾ ವಿಕಾಸ್ ಯೋಜನೆಯ ಮೊದಲ ಬ್ಯಾಚ್‌ನಲ್ಲಿ ಹೆಸರು ನೋಂದಾಯಿಸಿದ 4,953 ವಿದ್ಯಾರ್ಥಿಗಳಲ್ಲಿ 16 ವರ್ಷದ ಕುಮಾರ್ ಕೂಡ ಸೇರಿದ್ದಾನೆ. ಆತ ಜೆಇಇಯ ಮೊದಲ ಪ್ರಯತ್ನದಲ್ಲೇ ಉತ್ತೀರ್ಣನಾಗಿದ್ದಾನೆ.

ಪ್ರಮುಖ ತರಬೇತಿ ಕೇಂದ್ರಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಆಕಾಂಕ್ಷೆ ಹೊಂದಿರುವ  ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು 2017ರಲ್ಲಿ ಆಪ್ ಸರಕಾರ ಈ ಯೋಜನೆ ಆರಂಭಿಸಿತ್ತು. ‘‘ನನ್ನ ಪುತ್ರ ಹಾಗೂ ಆತನ ಪುತ್ರನ ಒಂದೇ ಸಮಯದಲ್ಲಿ ಐಐಟಿಯಲ್ಲಿ ಶಿಕ್ಷಣ ಪಡೆಯುತ್ತಿರುವುದು ನನಗೆ ತುಂಬಾ ಸಂತಸ ಉಂಟು ಮಾಡುತ್ತಿದೆ. ಉತ್ತಮ ಶಿಕ್ಷಣದ ಕೊರತೆಯ ಕಾರಣಕ್ಕೆ ಬಡವನ ಪುತ್ರ ಬಡವನಾಗಿಯೇ ಉಳಿಯುವ ಸಂಪ್ರದಾಯ ಇದೆ. ಆದರೆ, ಗುಣಮಟ್ಟದ ಶಿಕ್ಷಣ ಹಾಗೂ ತರಬೇತಿ ನೀಡುವ ಮೂಲಕ ಬಡವರು ಮತ್ತು ಶ್ರೀಮಂತರ ನಡುವಿನ ಅಂತರವನ್ನು ತುಂಬಿಸಬಹುದು’’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X