Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾದ ಖ್ಯಾತ ಸ್ಪಿನ್ನರ್ ಅಜಂತ...

ಶ್ರೀಲಂಕಾದ ಖ್ಯಾತ ಸ್ಪಿನ್ನರ್ ಅಜಂತ ಮೆಂಡಿಸ್ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ28 Aug 2019 11:38 PM IST
share
ಶ್ರೀಲಂಕಾದ ಖ್ಯಾತ ಸ್ಪಿನ್ನರ್ ಅಜಂತ ಮೆಂಡಿಸ್ ನಿವೃತ್ತಿ

ಕೊಲಂಬೊ, ಆ.28: ಈ ಹಿಂದೆ ಕೇರಂ ಬಾಲ್ ಎಸೆತದ ಮೂಲಕ ಇಡೀ ವಿಶ್ವವನ್ನು ತನ್ನತ್ತ ಸೆಳೆದಿದ್ದ, ಶ್ರೀಲಂಕಾದ ವಿಲಕ್ಷಣ ಸ್ಪಿನ್ ಬೌಲರ್ ಅಜಂತ ಮೆಂಡಿಸ್ ಬುಧವಾರ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

2015ರಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಶ್ರೀಲಂಕಾದ ಪರ ಕೊನೆಯ ಪಂದ್ಯ ಆಡಿದ್ದ 34ರ ಹರೆಯದ ಮೆಂಡಿಸ್‌ಗೆ ಆ ಬಳಿಕ ರಾಷ್ಟ್ರೀಯ ತಂಡಕ್ಕೆ ವಾಪಸಾಗಲು ಸಾಧ್ಯವಾಗಲಿಲ್ಲ. 2008ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ ್ಟ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆಗೈದಿದ್ದ ಮೆಂಡಿಸ್ ಅದೇ ವರ್ಷ ನಡೆದಿದ್ದ ಏಶ್ಯಕಪ್ ಫೈನಲ್‌ನಲ್ಲಿ ಭಾರತ ವಿರುದ್ಧ 13 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಉರುಳಿಸಿ ಪ್ರಸಿದ್ದಿಗೆ ಬಂದಿದ್ದರು. ಭಾರತದ ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಯುವರಾಜ್ ಸಿಂಗ್, ರೋಹಿತ್ ಶರ್ಮಾ, ಸುರೇಶ್ ರೈನಾ ಹಾಗೂ ಎಂಎಸ್ ಧೋನಿ ಅವರನ್ನು ಪೆವಿಲಿಯನ್‌ಗೆ ಅಟ್ಟಿ ಗಮನ ಸೆಳೆದಿದ್ದರು.

ಭಾರತ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದ ಮೆಂಡಿಸ್ ಆ ಸರಣಿಯಲ್ಲಿ ಆಡಿದ್ದ 3 ಪಂದ್ಯಗಳಲ್ಲಿ 28 ವಿಕೆಟ್‌ಗಳನ್ನು ಉರುಳಿಸಿದ್ದರು. ವಿಶ್ವ ಕ್ರಿಕೆಟ್‌ಗೆ ಕೇರಂ ಬಾಲ್ ಎಸೆತವನ್ನು ಪರಿಚಯಿಸಿದ್ದ ಅಜಂತ ಮೆಂಡಿಸ್ ಓರ್ವ ಅಪೂರ್ವ ಕ್ರಿಕೆಟಿಗನಾಗಿದ್ದರು.

ಏಕದಿನ ಕ್ರಿಕೆಟ್ ಚರಿತ್ರೆಯಲ್ಲಿ ಅತ್ಯಂತ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ಸಾಧನೆ ಮಾಡಿದ್ದ ಮೆಂಡಿಸ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಎರಡು ಬಾರಿ 6 ವಿಕೆಟ್ ಗೊಂಚಲು ಪಡೆದಿರುವ ಏಕೈಕ ಬೌಲರ್.

ವೃತ್ತಿಜೀವನದ ಆರಂಭದಲ್ಲಿ ಅತ್ಯಂತ ಅಪಾಯಕಾರಿ ಅಂತರ್‌ರಾಷ್ಟ್ರೀಯ ಬೌಲರ್ ಎಂದು ಪರಿಗಣಿಸಲ್ಪಟ್ಟಿದ್ದ ಮೆಂಡಿಸ್ 2009 ಹಾಗೂ 2012ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಲಂಕಾದ ಪ್ರಮುಖ ಸ್ಪಿನ್ ಬೌಲರ್ ಆಗಿದ್ದರು. ಎಲ್ಲ ತಂಡಗಳ ಆಟಗಾರರು ಮೆಂಡಿಸ್ ಬೌಲಿಂಗ್ ಮರ್ಮವನ್ನು ಅರಿತು ಚೆನ್ನಾಗಿ ಆಡಲಾರಂಭಿಸಿದ ಬಳಿಕ ಅವರ ವೃತ್ತಿಜೀವನದ ಯಶಸ್ಸು ಇಳಿಮುಖವಾಗಿತ್ತು. 2011ರ ವಿಶ್ವಕಪ್‌ನಲ್ಲಿ ಲಂಕಾ ತಂಡಕ್ಕೆ ವಾಪಸಾಗಿದ್ದ ಅವರು ತನ್ನ ತಂಡವನ್ನು ಫೈನಲ್ ತನಕ ತಲುಪಿಸಿದ್ದರು.

ಮೆಂಡಿಸ್ ಶ್ರೀಲಂಕಾದ ಪರ 19 ಟೆಸ್ಟ್, 87 ಏಕದಿನ ಹಾಗೂ 39 ಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 70 ಟೆಸ್ಟ್ ವಿಕೆಟ್‌ಗಳು, 152 ಏಕದಿನ ಹಾಗೂ 66 ಟಿ-20 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

 ಈ ವರ್ಷ ಶ್ರೀಲಂಕಾದ ದೇಶೀಯ ಕ್ರಿಕೆಟ್‌ನಲ್ಲಿ ಆಡಿದ್ದ ಮೆಂಡಿಸ್ ಪ್ರೀಮಿಯರ್ ಲೀಗ್‌ವೊಂದರಲ್ಲಿ ಪೊಲೀಸ್ ಸ್ಪೋರ್ಟ್ಸ್ ಕ್ಲಬ್‌ನ ನಾಯಕತ್ವವಹಿಸಿಕೊಂಡಿದ್ದರು. ಕೆಲವೇ ಓವರ್‌ಗಳ ಬೌಲಿಂಗ್ ಮಾಡಿದ್ದ ಅವರು ತಂಡದ ಪ್ರಮುಖ ಬ್ಯಾಟ್ಸ್‌ಮನ್ ಆಗಿ ಆಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X