Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈತ್ರಿ ಸರ್ಕಾರ ಪತನಕ್ಕೆ...

ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು-ದೇವೇಗೌಡ ಕಾರಣ: ಅನರ್ಹ ಶಾಸಕ ಎಂಟಿಬಿ ನಾಗರಾಜ್

"ರಮೇಶ್ ಕುಮಾರ್ ಒಬ್ಬರೇ ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ29 Aug 2019 11:54 PM IST
share
ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು-ದೇವೇಗೌಡ ಕಾರಣ: ಅನರ್ಹ ಶಾಸಕ ಎಂಟಿಬಿ ನಾಗರಾಜ್

ಕೋಲಾರ, ಆ.29: ಮೈತ್ರಿ ಸರ್ಕಾರ ಬೀಳಲು ಸಿದ್ದು ಹಾಗೂ ದೇವೇಗೌಡ ಕಾರಣ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಆರೋಪಿಸಿದರು.

ಕೋಲಾರದಲ್ಲಿ ಮಾತನಾಡಿದ ಅವರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒಬ್ಬನೇ ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ. ಹರಿಶ್ಚಂದ್ರನಂತೆ ಮಾತನಾಡುತ್ತಾನೆ ಅಷ್ಟೆ. ಸತ್ಯ ಹರಿಶ್ಚಂದ್ರನಾಗಿದ್ದರೆ ಮುನಿಯಪ್ಪ ಅವರನ್ನೇಕೆ ಸೋಲಿಸಿದರು ? ಕಾಂಗ್ರೆಸ್‍ಗೆ ತತ್ವ ಸಿದ್ದಾಂತ ಇದ್ದರೆ, ಮೊದಲು ಪಕ್ಷದಿಂದ ರಮೇಶ್ ಕುಮಾರ್ ಅವರನ್ನು ಉಚ್ಚಾಟನೆ ಮಾಡಬೇಕು. ಮುನಿಯಪ್ಪ ಸೋಲುವುದಕ್ಕೆ ರಮೇಶ್ ಕುಮಾರ್ ಅವರೇ ಕಾರಣ ಎಂದು ದೂರಿದರು.

ಕಾಂಗ್ರೆಸ್ ರಾಜ್ಯದಲ್ಲಿ ನೆಲ ಕಚ್ಚಲು ಮುಖಂಡರು ತೆಗೆದುಕೊಳ್ಳುವ ಏಕಪಕ್ಷೀಯ ನಿರ್ಧಾರಗಳು ಹಾಗೂ ಸ್ವಾರ್ಥ ರಾಜಕಾರಣವೇ ಕಾರಣ‌. ನಾನು ನಿಷ್ಟಾವಂತ ಕಾಂಗ್ರೇಸಿಗ, ನನ್ನ ಬಗ್ಗೆ ಸುಳ್ಳು ಅರೋಪಗಳು ಮಾಡಿದರೆ ಇವರ ವಿಷಯ ಬಿಚ್ಚಿಡಬೇಕಾಗುತ್ತದೆ. ಇವರ ಕಥೆಗಳನ್ನ ಹೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದರು.

ನಾವು ಮೂಲ ಕಾಂಗ್ರೇಸಿಗರು, ನಮ್ಮ ಬಗ್ಗೆ ಮಾತನಾಡುವ ಇವರು ಅಧಿಕಾರಕ್ಕಾಗಿ ಕಾಂಗ್ರೆಸ್‍ಗೆ ಬಂದವರು. ನಾವು ಕಟ್ಟಿದ ಕಾಂಗ್ರೆಸ್ ಮನೆಯಲ್ಲಿ ಇವರು ಸಂಸಾರ ಮಾಡುತ್ತಿದ್ದಾರೆ. ಇವರ ಆಡಳಿತ ಅಧಿಕಾರ ಇದ್ದಾಗ ಎಷ್ಟು ಪ್ರಮಾಣಿಕವಾಗಿ ಆಡಳಿತ ಮಾಡಿದ್ದಾರೆಂದು ನಾನು ಹೇಳುವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಏನು ಮಾಡಲಾಗುತ್ತಿಲ್ಲ, ಕುಮಾರಸ್ವಾಮಿ ಹಾಗೂ ರೇವಣ್ಣ ನನ್ನ ವಸತಿ ಖಾತೆಯಲ್ಲಿ ಮೂಗು ತೂರಿಸುತ್ತಿದ್ದಾರೆ, ಹೀಗಾಗಿ ರಾಜಿನಾಮೆ ನೀಡುತ್ತೇನೆ ಎಂದು ಮೂರು ಬಾರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ ಎಂದ ಅವರು, ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತೊಡೆ ತಟ್ಟಲಿ. ಇಂತಹ ತೊಡೆ ತಟ್ಟುವವರನ್ನು ನಾನು ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಹೇಳುತ್ತೇನೆ ಎಂದರು.

ಮದ್ಯಂತರ ಚುನಾವಣೆ ಸದ್ಯಕ್ಕೆ ಬರುವುದಿಲ್ಲ. ಕೇಂದ್ರದಲ್ಲಿ ಸ್ಥಿರವಾದ ಸರ್ಕಾರ ಇದೆ, ರಾಜ್ಯದಲ್ಲಿ ಈಗ ಪ್ರಾರಂಭವಾಗಿದೆ. ಕಾಂಗ್ರೆಸ್ ನವರು ಮಧ್ಯಂತರ ಚುನಾವಣೆ ಬರುತ್ತದೆ ಎಂದು ಹಗಲು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X