Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಡಿಪಾರು ಮಸೂದೆ ಹಿಂದಕ್ಕೆ ಪಡೆಯುವ...

ಗಡಿಪಾರು ಮಸೂದೆ ಹಿಂದಕ್ಕೆ ಪಡೆಯುವ ಹಾಂಕಾಂಗ್ ಪ್ರಸ್ತಾಪಕ್ಕೆ ಚೀನಾ ತಿರಸ್ಕಾರ

ವಾರ್ತಾಭಾರತಿವಾರ್ತಾಭಾರತಿ30 Aug 2019 9:13 PM IST
share
ಗಡಿಪಾರು ಮಸೂದೆ ಹಿಂದಕ್ಕೆ ಪಡೆಯುವ ಹಾಂಕಾಂಗ್ ಪ್ರಸ್ತಾಪಕ್ಕೆ ಚೀನಾ ತಿರಸ್ಕಾರ

ಹಾಂಕಾಂಗ್, ಆ. 30: ವಿವಾದಾತ್ಮಕ ಗಡಿಪಾರು ಮಸೂದೆಯನ್ನು ಹಿಂದಕ್ಕೆ ಪಡೆದರೆ ಹಾಂಕಾಂಗ್‌ನಲ್ಲಿ ನೆಲೆಸಿರುವ ಬಿಕ್ಕಟ್ಟು ಶಮನಗೊಳ್ಳಬಹುದು ಎಂಬ ಅದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾರೀ ಲ್ಯಾಮ್‌ರ ಸಲಹೆಯನ್ನು ಚೀನಾ ಕೇಂದ್ರ ಸರಕಾರ ತಿರಸ್ಕರಿಸಿದೆ.

ಬೇಸಿಗೆಯ ಆದಿ ಭಾಗದಲ್ಲಿ ಕ್ಯಾರೀ ಲ್ಯಾಮ್, ಪ್ರತಿಭಟನಕಾರರ ಐದು ಪ್ರಮುಖ ಬೇಡಿಕೆಗಳ ಬಗ್ಗೆ ತನ್ನ ವಿಶ್ಲೇಷಣೆಯನ್ನೊಳಗೊಂಡ ವರದಿಯೊಂದನ್ನು ಚೀನಾಕ್ಕೆ ಸಲ್ಲಿಸಿದ್ದರು.

ಆದರೆ, ಗಡಿಪಾರು ಮಸೂದೆಯನ್ನು ಹಿಂದಕ್ಕೆ ಪಡೆಯುವ ಲ್ಯಾಮ್‌ರ ಪ್ರಸ್ತಾಪವನ್ನು ಚೀನಾ ಕೇಂದ್ರ ಸರಕಾರ ತಿರಸ್ಕರಿಸಿದೆ ಹಾಗೂ ಪ್ರತಿಭಟನಕಾರರ ಯಾವುದೇ ಬೇಡಿಕೆಗಳಿಗೆ ಮಣಿಯದಂತೆ ಅವರಿಗೆ ಆದೇಶ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯ್ಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರತಿಭಟನೆಗಳಿಗೆ ಪ್ರತಿಕ್ರಿಯಿಸುವಲ್ಲಿ ಹಾಂಕಾಂಗನ್ನು ಚೀನಾ ಹೇಗೆ ನಿಯಂತ್ರಿಸುತ್ತಿದೆ ಎನ್ನುವುದನ್ನು ಇದು ತೋರಿಸಿದೆ.

ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಚೀನಾದ ಕೇಂದ್ರ ಸರಕಾರ ಖಂಡಿಸಿದೆ ಹಾಗೂ ವಿದೇಶಿ ಶಕ್ತಿಗಳು ಹಾಂಕಾಂಗ್‌ನಲ್ಲಿ ಶಾಂತಿ ಕದಡುತ್ತಿವೆ ಎಂದು ಆರೋಪಿಸಿದೆ. ಹಾಂಕಾಂಗ್‌ನಲ್ಲಿ ಹಸ್ತಕ್ಷೇಪ ಮಾಡದಿರುವಂತೆ ಚೀನಾ ವಿದೇಶ ಸಚಿವಾಲಯವು ಇತರ ದೇಶಗಳಿಗೆ ಪದೇ ಪದೇ ಎಚ್ಚರಿಕೆ ನೀಡಿದೆ ಹಾಗೂ ಅಲ್ಲಿನ ಪರಿಸ್ಥಿತಿಯು ‘ಆಂತರಿಕ ವ್ಯವಹಾರ’ವಾಗಿದೆ ಎಂದಿದೆ.

ಪ್ರಜಾಪ್ರಭುತ್ವ ಚಳವಳಿಯ ಪ್ರಮುಖ ನಾಯಕರ ಬಂಧನ

ಹಾಂಕಾಂಗ್‌ನಾದ್ಯಂತ ಶುಕ್ರವಾರ ಪ್ರಮುಖ ಪ್ರಜಾಪ್ರಭುತ್ವಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ನಾಗರಿಕ ಹಕ್ಕುಗಳ ಗುಂಪೊಂದು ಶನಿವಾರ ನಡೆಸಲು ಉದ್ದೇಶಿಸಿದ್ದ ಪ್ರಮುಖ ಸಭೆಯೊಂದನ್ನು ಭದ್ರತಾ ಕಾರಣಕ್ಕಾಗಿ ಪೊಲೀಸರು ನಿಷೇಧಿಸಿದ ಬಳಿಕ, ಚಳವಳಿಯ ನಾಯಕರನ್ನು ವ್ಯಾಪಕವಾಗಿ ಬಂಧಿಸಲಾಗಿದೆ.

ಹಾಂಕಾಂಗ್‌ನಲ್ಲಿ ಮೂರು ತಿಂಗಳಿನಿಂದ ಬೃಹತ್ ಪ್ರಜಾಪ್ರಭುತ್ವಪರ ಪ್ರತಿಭಟನೆಗಳು ನಡೆಯುತ್ತಿದ್ದು, ಚೀನಾದ ಆಳ್ವಿಕೆಯ ನಗರದಲ್ಲಿ ಬಿಕ್ಕಟ್ಟು ನೆಲೆಸಿದೆ.

ಪ್ರತಿಭಟನಕಾರರು ಶನಿವಾರ ಬೃಹತ್ ಸಭೆಯನ್ನು ಆಯೋಜಿಸಿದ್ದರು. ಈ ದಿನವು, ಹಾಂಕಾಂಗ್‌ನಲ್ಲಿ ‘ಸಾರ್ವತ್ರಿಕ ಮತದಾನ’ (ಯನಿವರ್ಸಲ್ ಸಫ್ರಿಜ್)ಕ್ಕೆ ಅವಕಾಶ ಮಾಡಿಕೊಡಬೇಕೆನ್ನುವ ಕರೆಯನ್ನು ಚೀನಾ ತಿರಸ್ಕರಿಸಿದ 5ನೇ ವಾರ್ಷಿಕ ದಿನವೂ ಆಗಿದೆ.

2014ರಲ್ಲಿ ಹಾಂಕಾಂಗ್‌ನಲ್ಲಿ ನಡೆದ 79 ದಿನಗಳ ‘ಕೊಡೆ ಚಳವಳಿ’ಯ ವೇಳೆ ಈ ಸಾರ್ವತ್ರಿಕ ಮತದಾನದ ಬೇಡಿಕೆಯನ್ನು ಇಡಲಾಗಿತ್ತು. ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ 5 ವರ್ಷಗಳ ಹಿಂದಿನ ಆ ಚಳವಳಿಯೇ ಬುನಾದಿಯಾಗಿದೆ.

ಪೊಲೀಸರು ಸಭೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ, ಶನಿವಾರ ತಾವು ಪ್ರತಿಭಟನೆ ನಡೆಸುವುದಿಲ್ಲ ಎಂದು ಸಂಘಟಕರು ಶುಕ್ರವಾರ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X