Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಶ್ವತ ಪರಿಹಾರ ಕಲ್ಪಿಸಲು ಸರಕಾರಕ್ಕೆ...

ಶಾಶ್ವತ ಪರಿಹಾರ ಕಲ್ಪಿಸಲು ಸರಕಾರಕ್ಕೆ ಆಗ್ರಹ: ಸಿದ್ದರಾಮಯ್ಯ

ಪಚ್ಚನಾಡಿಯ ಮಂದಾರಕ್ಕೆ ಮಾಜಿ ಸಿಎಂ ಭೇಟಿ

ವಾರ್ತಾಭಾರತಿವಾರ್ತಾಭಾರತಿ31 Aug 2019 2:02 PM IST
share
ಶಾಶ್ವತ ಪರಿಹಾರ ಕಲ್ಪಿಸಲು ಸರಕಾರಕ್ಕೆ ಆಗ್ರಹ: ಸಿದ್ದರಾಮಯ್ಯ

ಮಂಗಳೂರು, ಆ.31: ಪಚ್ಚನಾಡಿಯ ಡಂಪಿಂಗ್ ಯಾರ್ಡ್‌ನಿಂದ ತ್ಯಾಜ್ಯ ಕುಸಿದು ಸಂತ್ರಸ್ತರಾಗಿರುವ ಮಂದಾರ ಪ್ರದೇಶದ 27 ಕುಟುಂಬಗಳಿಗೆ ಶಾಶ್ವತ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ನೇರವಾಗಿ ಮಂದಾರ ಪ್ರದೇಶಕ್ಕೆ ಭೇಟಿದ ಸಂದರ್ಭ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ವಿವರಿಸಿ, ಶಾಶ್ವತ ಪರಿಹಾರದ ಬೇಡಿಕೆಯನ್ನು ಪ್ರಸ್ತಾಪಿಸಿದರು.

ಇದೇ ವೇಳೆ ಸಿದ್ದರಾಮಯ್ಯ ಪ್ರವಾಹದ ರೀತಿಯಲ್ಲಿ ಡಂಪಿಂಗ್ ಯಾರ್ಡ್‌ನಿಂದ ಮಂದಾರಕ್ಕೆ ವ್ಯಾಪಿಸಿರುವ ತ್ಯಾಜ್ಯ ರಾಶಿಯನ್ನು ವೀಕ್ಷಿಸಿದರು. ಬಳಿಕ ಮತ್ತೆ ಸಂತ್ರಸ್ತರ ಜತೆ ಮಾತನಾಡಿದರು.

ಸಂತ್ರಸ್ತರಿಗೆ ಮನೆ ನಿರ್ಮಿಸುವವರೆಗೆ ಜೀವನೋಪಾಯಕ್ಕಾಗಿ ನಿರ್ದಿಷ್ಟ ಮೊತ್ತವನ್ನು ನೀಡಬೇಕು ಅಥವಾ ಬಾಡಿಗೆ ಮನೆಯಲ್ಲಿ ತಿಂಗಳಿಗೆ 10,000 ರೂ.ನಂತೆ ಒದಗಿಸಲು ಒತ್ತಾಯಿಸಲಾಗುವುದು. ಇದೇ ವೇಳೆ ಸರಕಾರವು ಮಂದಾರ ಪ್ರದೇಶವನ್ನು ವ್ಯಾಪಿಸಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಬದುಕಲು ಯೋಗ್ಯವಾಗಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ಇಲ್ಲಿ ತಡೆಗೋಡೆ ನಿರ್ಮಿಸಿ ಆ ಜಾಗವನ್ನೂ ಸ್ವಾಧೀನಪಡಿಸಿಕೊಂಡು ಜಮೀನುದಾರರಿಗೆ ಪರಿಹಾರ ಮೊತ್ತ ನೀಡಬೇಕು. ಕಲುಷಿತ ನೀರು ಹರಿದು ಹೋಗದಂತೆ ತಡೆಯಲು, ಕೃಷಿ ಯೋಗ್ಯ ಜಮೀನನ್ನಾಗಿಸುವಲ್ಲಿ ಕ್ರಮ ವಹಿಸುವ ಬಗ್ಗೆ ಸರಕಾರಕ್ಕೆ ಸಲಹೆ ನೀಡಲಾಗುವುದು ಎಂದು ಅವರು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಮಹಾನಗರ ಪಾಲಿಕೆಯವರು ಡಂಪಿಂಗ್ ಯಾರ್ಡ್ ಮಾಡಿ ಇಲ್ಲಿ ಕಸ ಹಾಕಿದ್ದಾರೆ. ಕಸ ಹಾಕಿದ ಸಂದರ್ಭ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಯಾವತ್ತಾದರೂ ಇಂತಹ ಪರಿಸ್ಥಿತಿ ಎದುರಾಗಬಹುದು ಎಂಬ ಬಗ್ಗೆ ಮುನ್ನೋಟವಿರಲಿಲ್ಲ. ಮೊದಲೇ ತಡೆಗೋಡೆಯನ್ನು ನಿರ್ಮಿಸಿದ್ದಲ್ಲಿ ಇಂತಹ ದುರಂತ ತಪ್ಪಿಸಬಹುದಿತ್ತು. 27 ಮನೆಗಳಿಗೆ ಹಾನಿಯಾಗಿವೆ. ಕೃಷಿ ಜಮೀನು, ತೋಟ, ದೈವಸ್ಥಾನಗಳು ಕಸದಿಂದ ಮುಚ್ಚಿವೆ. ಶಾಶ್ವತವಾದ ಪರಿಹಾರ ಅಗತ್ಯವಾಗಿದೆ. ತಾತ್ಕಾಲಿಕ ಪರಿಹಾರದಿಂದ ಯಾವುದೇ ಪ್ರಯೋಜನವಾಗದು. 10 ಮನೆಯವರು ಇಲ್ಲೇ ಇರಲು ಬಯಸಿದ್ದಾರೆ. ಉಳಿದ 17 ಮನೆಯವರು ಬೇರೆ ಕಡೆ ಸ್ಥಳಾಂತರಗೊಳ್ಳಲು ಬಯಸಿದ್ದಾರೆ. ಅವರಿಗೆ ಜಾಗ ನೀಡಿ ಮನೆ ಕಟ್ಟಿ ಕೊಡಬೇಕು. ಇಲ್ಲಿ ಸಂಗ್ರಹವಾಗಿರುವ ಕಸದಿಂದ ಇಲ್ಲಿನ ಜಲಮೂಲಗಳು ಕಲುಷಿತವಾಗಿವೆ. ಅದನ್ನು ತಪ್ಪಿಸುವ ಕೆಲಸ ಆಗಬೇಕು. ಕಸವನ್ನು ತೆರವುಗೊಳಿಸಬೇಕು. ಇಲ್ಲವೇ ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಅದನ್ನು ಡಂಪಿಂಗ್ ಯಾರ್ಡ್ ಮಾಡಬಹುದು. ಜತೆಗೆ ನಿರಾಶ್ರಿತರಿಗೆ ಒಂದು ನಿರ್ದಿಷ್ಟ ಮೊತ್ತವನ್ನು ನೀಡಿ ಅವರಿಗೆ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು. ಕೃಷಿ ಹಾನಿಯನ್ನು ಸರಕಾರ ತಕ್ಷಣ ಪರಿಹಾರ ರೂಪದಲ್ಲಿ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಮೇಯರ್‌ಗಳಾದ ಭಾಸ್ಕರ ಮೊಯ್ಲಿ, ಕವಿತಾ ಸನಿಲ್, ಶಶಿಧರ ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X