Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಾಹನ ಚಾಲಕರೇ, ನಾಳೆಯಿಂದ ನಿಯಮ...

ವಾಹನ ಚಾಲಕರೇ, ನಾಳೆಯಿಂದ ನಿಯಮ ಉಲ್ಲಂಘನೆಗೆ ಭಾರೀ ದಂಡ, ಜೈಲು: ಯಾವ ತಪ್ಪಿಗೆ ಏನು ಶಿಕ್ಷೆ?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ31 Aug 2019 5:22 PM IST
share
ವಾಹನ ಚಾಲಕರೇ, ನಾಳೆಯಿಂದ ನಿಯಮ ಉಲ್ಲಂಘನೆಗೆ ಭಾರೀ ದಂಡ, ಜೈಲು: ಯಾವ ತಪ್ಪಿಗೆ ಏನು ಶಿಕ್ಷೆ?

ಹೊಸದಿಲ್ಲಿ, ಆ.31: ಮೋಟಾರು ವಾಹನಗಳ ತಿದ್ದುಪಡಿ ಕಾಯಿದೆ ನಾಳೆ (ಸೆಪ್ಟಂಬರ್ 1)ಯಿಂದ ಜಾರಿಗೊಳ್ಳಲಿದ್ದು, ಇನ್ನು ಮುಂದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ತಪ್ಪಿಸಿಕೊಳ್ಳುವುದು ಸುಲಭದ ಮಾತೇನಲ್ಲ. ಮದ್ಯದ ನಶೆಯಲ್ಲಿ ವಾಹನ ಚಲಾಯಿಸಿದರೆ ಅಥವಾ ಆ್ಯಂಬುಲೆನ್ಸ್ ಅಥವಾ ಅಗ್ನಿಶಾಮಕ ವಾಹನಕ್ಕೆ ದಾರಿ ಬಿಡದೇ ಇದ್ದರೆ 10,000 ರೂ. ದಂಡ ಅಥವಾ ಜೈಲು ಇಲ್ಲವೇ ಎರಡೂ ಶಿಕ್ಷೆಗಳನ್ನು ಎದುರಿಸಬೇಕಾಗಬಹುದು.

ಈ ಹೊಸ ತಿದ್ದುಪಡಿ ಕಾಯಿದೆ ವಾಹನ ತಯಾರಕರಿಗೆ, ವಾಹನ ಸವಾರರಿಗೆ ಹಾಗೂ ಕ್ಯಾಬ್ ಚಾಲಕರಿಗೂ ಕಠಿಣ ನಿಯಮಗಳನ್ನು  ಜಾರಿಗೆ ತಂದಿದ್ದು, ಸಂಚಾರ ನಿಯಮ ಪಾಲನೆ ಮೂಲಕ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದೇ ಅದರ ಉದ್ದೇಶ.

ಈ ತಿದ್ದುಪಡಿ ಕಾಯಿದೆಯಂತೆ ಪ್ರತಿಯೊಂದು ಉಲ್ಲಂಘನೆಗೆ ಕಠಿಣ ದಂಡ ವಿಧಿಸಲಾಗುತ್ತದೆ. ಅದು ಸೀಟ್ ಬೆಲ್ಟ್ ಹಾಕದೇ ಇರುವುದು, ಅಪ್ರಾಪ್ತರು ವಾಹನ ಚಲಾಯಿಸಿದರೆ ಹೆತ್ತವರನ್ನು ಜವಾಬ್ದಾರರನ್ನಾಗಿಸುವುದು, ಅತಿ ವೇಗದ ಹಾಗೂ ನಿರ್ಲಕ್ಷ್ಯದ ವಾಹನ ಚಲಾವಣೆ, ವಿಮೆಯಿಲ್ಲದೆ ವಾಹನ ಚಲಾಯಿಸುವುದು,  ವಾಹನಗಳಲ್ಲಿ ಮಿತಿ ಮೀರಿ ಪ್ರಯಾಣಿಕರನ್ನು ತುಂಬಿಸುವುದು ಹೀಗೆ ಪ್ರತಿಯೊಂದು  ಉಲ್ಲಂಘನೆಗೆ ಕಠಿಣ ಶಿಕ್ಷೆ ಕಾದಿದೆ.

ಹೆಲ್ಮೆಟ್ ಧರಿಸದೇ ಇದ್ದ ದ್ವಿಚಕ್ರ ವಾಹನ ಸವಾರರು ರೂ 1,000 ದಂಡ ಪಾವತಿಸುವುದರ ಜತೆಗೆ ಮೂರು ತಿಂಗಳು ಲೈಸನ್ಸ್ ರದ್ದತಿಗೂ ಒಳಗಾಗುತ್ತಾರೆ. ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸಿದರೆ, 5000 ರೂ. ದಂಡ ವಿಧಿಸಲಾಗುವುದು. ಅನರ್ಹಗೊಂಡರೂ ವಾಹನ ಚಲಾಯಿಸಿದರೆ 10 ಸಾವಿರ ರೂ. ಅತಿ ವೇಗದ ಚಾಲನೆಗೆ ಸಣ್ಣ ವಾಹನಗಳಿಗೆ 1000 ಮತ್ತು 2000 ರೂ., ಪ್ರಯಾಣಿಕ ಮತ್ತು ಗೂಡ್ಸ್ ವಾಹನಗಳಿಗೆ 2000 ರೂ.ಗಳಿಂದ 4000 ರೂ. ವಿಧಿಸಲಾಗುವುದು.

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ 6 ತಿಂಗಳು ಜೈಲು ಮತ್ತು 10 ಸಾವಿರ ದಂಡ, 2ನೆ ಬಾರಿ ಇದೇ ತಪ್ಪು ಮಾಡಿದಲ್ಲಿ 2 ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಲಾಗುವುದು.

ಈ ಕಾಯಿದೆಯನ್ವಯ ವಾಹನ ಸವಾರರಿಂದ ಹಿಡಿದು ವಾಹನ ತಯಾರಕರು ಹಾಗೂ ಗುತ್ತಿಗೆದಾರರೂ ಜವಾಬ್ದಾರರಾಗುತ್ತಾರೆ. ಉದಾಹರಣೆಗೆ ರಸ್ತೆ ನಿಮಾರ್ಣದಲ್ಲಿ ಗುಣಮಟ್ಟದ ಕೊರತೆಯಿಂದ ಅಪಘಾತವಾದರೆ ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು, ಮೇಲಾಗಿ  ಸಂಬಂಧಿತ ನಿಯಮಗಳನ್ವಯ  ಜಾರಿ ಪ್ರಾಧಿಕಾರಗಳು ಮಾಡಿದ ತಪ್ಪಿಗೂ ದುಪ್ಪಟ್ಟು ದಂಡ ಪಾವತಿಸಬೇಕಾಗುತ್ತದೆ.

ವಾಹನ ಚಾಲನಾ ಪರೀಕ್ಷೆ ಹೆಚ್ಚು ತಂತ್ರಜ್ಞಾನ ಆಧರಿತವಾಗಲಿದ್ದು , ಭ್ರಷ್ಟಾಚಾರವನ್ನು ಕಡಿಮೆಗೊಳಿಸುವ ಉದ್ದೇಶ ಹೊಂದಿದೆ. ಈಗಿನ ವ್ಯವಸ್ಥೆಯನ್ವಯ ಚಾಲನೆಯಲ್ಲಿ ಅನನುಭವಿಗೂ ಚಾಲನಾ ಪರವಾನಗಿ ಪಡೆದು ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆಯಿರುವುದರಿಂದ ತಂತ್ರಜ್ಞಾನ ಆಧರಿತ ಡ್ರೈವಿಂಗ್ ಲೈಸನ್ಸ್ ಒದಗಿಸುವ ವ್ಯವಸ್ಥೆಯಿಂದ ಸಾಕಷ್ಟು ಪ್ರಯೋಜವಾಗಲಿದೆ.

ಅಷ್ಟೇ ಅಲ್ಲದೆ ಈ ಮೋಟಾರು ವಾಹನಗಳ ತಿದ್ದುಪಡಿ ಕಾಯಿದೆಯನ್ವಯ  ದಂಡ ಮೊತ್ತವನ್ನು ವಾರ್ಷಿಕ ಶೇ 10ರಷ್ಟು ಏರಿಕೆ ಮಾಡುವ  ಅವಕಾಶವೂ ಇದ್ದು, ಇದರಿಂದಾಗಿ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಸಾಕಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X