Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ. 5: ಪಡುಬಿದ್ರಿ "ಸಹಕಾರ ಸಂಗಮ"...

ಸೆ. 5: ಪಡುಬಿದ್ರಿ "ಸಹಕಾರ ಸಂಗಮ" ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 Aug 2019 5:46 PM IST
share
ಸೆ. 5: ಪಡುಬಿದ್ರಿ ಸಹಕಾರ ಸಂಗಮ ಉದ್ಘಾಟನೆ

ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವಜ್ರ ಮಹೋತ್ಸವ ಕಟ್ಟಡ "ಸಹಕಾರ ಸಂಗಮ"ವು ಸೆ.5ರಂದು ಉದ್ಘಾಟನೆಗೊಳ್ಳಲಿದೆ.

ಶನಿವಾರ ಸೊಸೈಟಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಕುಮಾರ್ ಈ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪಡುಬಿದ್ರಿಯ ಅಂಚೆ ಕಚೇರಿ ಮುಂಭಾಗ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನೆಲಮಹಡಿ ಸಹಿತ ನಾಲ್ಕು ಮಹಡಿಗಳೊಂದಿಗೆ ನೂತನವಾಗಿ ನಿರ್ಮಾಣಗೊಂಡ ಸಹಕಾರ ಸಂಗಮವನ್ನು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು. ರಾಜ್ಯ ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸೊಸೈಟಿಯ ನೂತನ ಸಭಾಂಗಣ ಉದ್ಘಾಟನೆ ನಡೆಸಲಿರುವರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸೊಸೈಟಿಯ ಶಾಖಾ ಕಛೇರಿಯನ್ನು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಉದ್ಘಾಟಿಸುವರು. ಭದ್ರತಾ ಕೊಠಡಿಯನ್ನು ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್‍ರವರು ಕಂಪ್ಯೂಟರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಪ್ರಧಾನ ಕಚೇರಿ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‍ಚಂದ್ರ ಡಿ.ಸುವರ್ಣರವರು ಸೇಫ್ ಲಾಕರ್ ಉದ್ಘಾಟಿಸಲಿದ್ದಾರೆ.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರು ಠೇವಣಿ ಪತ್ರಗಳನ್ನು ಬಿಡುಗಡೆಗೊಳಿಸಲಿರುವರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿರುವರು.

9.30ಕ್ಕೆ ವಾರ್ಷಿಕ ಮಹಾಸಭೆ: ವಜ್ರಮಹೋತ್ಸವ ಕಟ್ಟಡ ಸಹಕಾರ ಸಂಗಮ ಉದ್ಘಾಟನೆಗೆ ಮುನ್ನ ಬೆಳಿಗ್ಗೆ 9.30 ಗಂಟೆಗೆ ಸೊಸೈಟಿಯ ವಾರ್ಷಿಕ ಮಹಾಸಭೆಯು ನೂತನ ಕಟ್ಟಡದ ಬಳಿ ನಡೆಯಲಿದೆ. ಸೊಸೈಟಿಯ ಎಲ್ಲಾ ಸದಸ್ಯರು ಮಹಾಸಭೆಯಲ್ಲಿ ಹಾಜರಿರುವಂತೆ ವೈ.ಸುಧೀರ್‍ಕುಮಾರ್ ವಿನಂತಿಸಿದ್ದಾರೆ.

ವಜ್ರ ಮಹೋತ್ಸವ ಸಂಭ್ರಮದ ಜಿಲ್ಲೆಯ ಮೊತ್ತ ಮೊದಲ ನೊಂದಾಯಿತ ಸಂಸ್ಥೆಯಾಗಿದೆ. ಪಡುಬಿದ್ರಿ ಕೇಂದ್ರ ಕಛೇರಿಯಾಗಿದ್ದು, ಹೆಜಮಾಡಿ, ಪಲಿಮಾರು ಮತ್ತು ಎರ್ಮಾಳು ತೆಂಕಗಳಲ್ಲಿ ಶಾಖೆಗಳನ್ನು ಹೊಂದಿದೆ.  ಸೊಸೈಟಿಯಲ್ಲಿ ವೈ.ಸುಧೀರ್ ಕುಮಾರ್‍ರವರು ಕಳೆದ 15 ವರ್ಷಗಳಿಂದ ಅಧ್ಯಕ್ಷರಾಗಿ ಸೊಸೈಟಿಯನ್ನು ಉನ್ನತ ಸ್ಥಾನಕ್ಕೇರಿಸಿದ್ದು, ಜಿಲ್ಲೆಯ ಅತ್ಯುತ್ತಮ ಸಹಕಾರಿ ಸೊಸೈಟಿ ಆಗಿ ಮೂಡಿಬಂದಿದೆ. ಕಳೆದ 8 ವರ್ಷಗಳಲ್ಲಿ ಸದಸ್ಯರಿಗೆ ನಿರಂತರ ಶೇ.25 ಡಿವಿಡೆಂಟ್ ನೀಡುವ ಮೂಲಕ ಜಿಲ್ಲೆಯ ಏಕೈಕ ಸೊಸೈಟಿಯಾಗಿದೆ. ಅಲ್ಲದೆ ಕೃಷಿಕರಿಗೆ ಗೊಬ್ಬರ ಖರೀದಿಗೆ ಶೆ.15 ಸಬ್ಸಿಡಿ ನೀಡುವ ಏಕೈಕ ಸಂಸ್ಥೆಯಾಗಿದೆ.

ಸುದ್ದಿಗೋಷ್ಠಿಯಲ್ಲಿ ಸೊಸೈಟಿ ನಿರ್ದೇಶಕರಾದ ರಾಜಾರಾಮ್ ರಾವ್, ವೈ.ಜಿ.ರಸೂಲ್, ಗಿರೀಶ್ ಪಲಿಮಾರ್, ವಾಸುದೇವ ದೇವಾಡಿಗ, ಯಶವಂತ ಪಿ.ಬಿ., ಮಾಧವ ಆಚಾರ್ಯ, ಸುಚರಿತಾ ಎಲ್.ಅಮೀನ್, ಕುಸುಮಾ ಎಮ್.ಕರ್ಕೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X