Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ದಲಿತರು,ಮುಸ್ಲಿಮರಿಗೆ ಆಸ್ತಿ...

ಗುಜರಾತ್: ದಲಿತರು,ಮುಸ್ಲಿಮರಿಗೆ ಆಸ್ತಿ ಮಾರದಂತೆ ಸದಸ್ಯರಿಗೆ ಸೂಚಿಸಿದೆ ಹೌಸಿಂಗ್ ಸೊಸೈಟಿ

ವಾರ್ತಾಭಾರತಿವಾರ್ತಾಭಾರತಿ31 Aug 2019 10:03 PM IST
share
ಗುಜರಾತ್: ದಲಿತರು,ಮುಸ್ಲಿಮರಿಗೆ ಆಸ್ತಿ ಮಾರದಂತೆ ಸದಸ್ಯರಿಗೆ ಸೂಚಿಸಿದೆ ಹೌಸಿಂಗ್ ಸೊಸೈಟಿ

ಹೊಸದಿಲ್ಲಿ,ಆ.31: ಗುಜರಾತ್ನ ನರ್ಮದಾ ಜಿಲ್ಲೆಯ ನಾಂದೋಡ್ ತಾಲೂಕಿನ ವಾಡಿಯಾ ಗ್ರಾಮದಲ್ಲಿರುವ ಹೌಸಿಂಗ್ ಸೊಸೈಟಿಯೊಂದು ಆಸ್ತಿಗಳನ್ನು ದಲಿತರು ಮತ್ತು ಮುಸ್ಲಿಮರಿಗೆ ಮಾರಾಟ ಮಾಡದಂತೆ ತನ್ನ ಸದಸ್ಯರಿಗೆ ಸೂಚಿಸಿದೆ. ಸೊಸೈಟಿಯು ಹೊರಡಿಸಿರುವ ಕರಪತ್ರದಲ್ಲಿಯ ಹಲವಾರು ‘ಸಲಹೆ ’ಗಳಲ್ಲಿ ಇದೂ ಒಂದಾಗಿದ್ದು,ಇವೆಲ್ಲ ಸಭೆಯಲ್ಲಿ ಚರ್ಚೆಯಾಗಬೇಕಾದ ಅಜೆಂಡಾದ ಭಾಗವಾಗಿವೆ ಎಂದು ಸೊಸೈಟಿಯು ನಂತರ ಹೇಳಿಕೊಂಡಿದೆ.

ಮುಂಬರುವ ಉತ್ಸವಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಸ್ತಿಗಳ ಮಾರಾಟದ ಮೇಲೆ ವಿಧಿಸಬೇಕಾದ ಶುಲ್ಕಗಳ ಕುರಿತು ಚರ್ಚೆಯ ಜೊತೆಗೆ ಸದಸ್ಯರು ‘ದಲಿತರು ಮತ್ತು ಮುಸ್ಲಿಮರಿಗೆ ಆಸ್ತಿ ಮಾರಾಟದಿಂದ ದೂರವಿರಬೇಕು ’ ಎಂದು ಕರಪತ್ರದಲ್ಲಿ ಹೇಳಲಾಗಿದೆ.

ದಲಿತ ಸಮುದಾಯದ ಸದಸ್ಯರು ಜಿಲ್ಲಾಧಿಕಾರಿ ಐ.ಕೆ.ಪಟೇಲ್ ಅವರನ್ನು ಭೇಟಿಯಾಗಿ ಜಾತಿ ಆಧರಿತ ತಾರತಮ್ಯದ ವಿರುದ್ಧ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

 ದೂರಿನ ಬಗ್ಗೆ ಉತ್ತರಿಸುವಂತೆ ಸೊಸೈಟಿಗೆ ಸೂಚಿಸಲಾಗಿದ್ದು,ಕರಪತ್ರವು ತನ್ನ ಸಭೆಯಲ್ಲಿ ಚರ್ಚೆಯಾಗಬೇಕಿರುವ ಅಜೆಂಡಾದ ಕರಡು ಪ್ರತಿಯಾಗಿದೆ. ದಲಿತರು ಮತ್ತು ಮುಸ್ಲಿಮರಿಗೆ ಆಸ್ತಿಗಳನ್ನು ಮಾರಾಟ ಮಾಡದಂತೆ ತಾನು ನಿಯಮವನ್ನು ಹೊರಡಿಸುತ್ತಿಲ್ಲ, ಆದರೆ ಕರಪತ್ರದಲ್ಲಿಯ ವಿಷಯಗಳ ಪಟ್ಟಿಯನ್ನು ಸದಸ್ಯರು ನೀಡಿದ್ದ ಸಲಹೆಗಳನ್ನು ಆಧರಿಸಿ ರೂಪಿಸಲಾಗಿದೆ ಎಂದು ಅದು ತಿಳಿಸಿದೆ. ಈ ಸ್ಪಷ್ಟನೆಯನ್ನು ನಾವು ಒಪ್ಪಿಕೊಂಡಿದ್ದೇವೆ ಮತ್ತು ಈ ವಿಷಯದಲ್ಲಿ ನಿಗಾಯಿರಿಸುತ್ತೇವೆ. ಜಾತಿ ತಾರತಮ್ಯ ನಡೆದರೆ ಕ್ರಮವನ್ನು ಜರುಗಿಸುತ್ತೇವೆ ಎಂದು ಪಟೇಲ್ ಸುದ್ದಿಗಾರರಿಗೆ ತಿಳಿಸಿದರು.

 ಇದರಲ್ಲಿಯ ವಿಷಯಗಳು ಸೊಸೈಟಿಯು ತನ್ನ ಸಭೆಯಲ್ಲಿ ಅಂಗೀಕರಿಸಿರುವ ನಿರ್ಣಯಗಳಾಗಿದ್ದು,ಎಲ್ಲ ಸದಸ್ಯರು ಇದಕ್ಕೆ ಬದ್ಧರಾಗಬೇಕಾಗುತ್ತದೆ ಎಂದೂ ಕರಪತ್ರದಲ್ಲಿ ಉಲ್ಲೇಖಿಸಿರುವುದರಿಂದ ಸೊಸೈಟಿಯ ಸ್ಪಷ್ಟನೆಯು ಪ್ರಶ್ನಾರ್ಹವಾಗಿದೆ.

ಮನೆಗಳ ಮಾಲಿಕರು ದಲಿತರು ಮತ್ತು ಮುಸ್ಲಿಮರಿಗೆ ಬಾಡಿಗೆಗೆ ನೀಡಲು ನಿರಾಕರಿಸಿರುವ ಹಲವಾರು ವಿವಾದಗಳು ರಾಜ್ಯದಲ್ಲಿ ನಡೆದಿವೆ. 2016ರಲ್ಲಿ ವಸತಿ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ್ತಿ ಲೈಲಾನಿ ಫರಾ ಅವರು, ಗುಜರಾತನಲ್ಲಿ ವಸತಿಗೆ ಸಂಬಂಧಿಸಿದಂತೆ ಶೋಷಿತ ಗುಂಪುಗಳು ತಾರತಮ್ಯಕ್ಕೊಳಗಾಗಿವೆ ಎಂದು ತನ್ನ ವರದಿಯಲ್ಲಿ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X