Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅಸ್ತಿತ್ವವನ್ನೇ ಕಳೆದುಕೊಂಡ ಎರಡು...

ಉಡುಪಿ: ಅಸ್ತಿತ್ವವನ್ನೇ ಕಳೆದುಕೊಂಡ ಎರಡು ಬ್ಯಾಂಕುಗಳು

ವಾರ್ತಾಭಾರತಿವಾರ್ತಾಭಾರತಿ31 Aug 2019 10:35 PM IST
share

ಉಡುಪಿ, ಆ.31: ದೇಶದ ಬ್ಯಾಂಕಿಂಗ್ ರಂಗದ ತೊಟ್ಟಿಲು ಎಂದು ಕರೆಸಿ ಕೊಳ್ಳುತಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಗ್ಗಳಿಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿನ್ನೆಯ ಒಂದೇ ಒಂದು ಹೇಳಿಕೆ ಯಿಂದ ನುಚ್ಚುನೂರಾಗಿದೆ. ದೇಶಕ್ಕೆ ನಾಲ್ಕು ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಟ್ಟು ಐದು ಪ್ರಮುಖ ಬ್ಯಾಂಕುಗಳನ್ನು ನೀಡಿದ ದ.ಕ.ದಲ್ಲಿ ಈಗ ಉಳಿದಿರುವುದು ಒಂದು ಕರ್ನಾಟಕ ಬ್ಯಾಂಕ್ ಹಾಗೂ ಇನ್ನೊಂದು ಕೆನರಾ ಬ್ಯಾಂಕ್ ಮಾತ್ರ.

ಕರಾವಳಿಯ ರೈತರ ಆಶಾಕಿರಣವಾಗಿ ಹುಟ್ಟಿಕೊಂಡು ಉಳಿದೆಲ್ಲಾ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸದೃಢವಾಗಿಯೇ ಇದ್ದ ವಿಜಯಾ ಬ್ಯಾಂಕ್ ಈ ಮೊದಲೇ ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನಗೊಂಡಿದ್ದರೆ, ನಿನ್ನೆ ಒಂದೇ ಏಟಿಗೆ 113 ವರ್ಷಗಳಷ್ಟು ಹಳೆಯದಾದ ಕಾರ್ಪೋರೇಷನ್ ಬ್ಯಾಂಕ್ ಹಾಗೂ 94 ವರ್ಷಗಳನ್ನು ಪೂರೈಸಿರುವ ಸಿಂಡಿಕೇಟ್ ಬ್ಯಾಂಕ್ ತನ್ನ ಅಸ್ತಿತ್ವಗಳನ್ನೇ ಕಳೆದುಕೊಂಡಿದೆ.

ಉಳಿದೆಲ್ಲಾ ಪ್ರಾದೇಶಿಕ ಬ್ಯಾಂಕ್‌ಗಳಿಗೆ ಹೋಲಿಸಿದರೆ ಕನಿಷ್ಠ ಪ್ರಾದೇಶಿಕ ಅಸ್ಮಿತೆ, ಕುರುಹನ್ನು ಉಳಿಸಿಕೊಂಡಿರುವ ಕೆನರಾ ಬ್ಯಾಂಕ್‌ನಲ್ಲಿ ಸಿಂಡಿಕೇಟ್ ಬ್ಯಾಂಕ್‌ನ್ನು ವಿಲೀನಗೊಳಿಸುವ ಮೂಲಕ ಕರಾವಳಿಯ ಅಸ್ಮಿತೆಯನ್ನು ಎತ್ತಿ ಹಿಡಿಯುವ ಸಂಪೂರ್ಣ ಜವಾಬ್ದಾರಿ ಈಗ ಕೆನರಾಬ್ಯಾಂಕ್ ಮೇಲಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಐದು ಬ್ಯಾಂಕ್‌ಗಳಲ್ಲಿ ಕಾರ್ಪೋರೇಷನ್ ಬ್ಯಾಂಕ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಜನ್ಮ ತಾಳಿದ್ದು ಕೃಷ್ಣನೂರಿನಲ್ಲಿ. ದೇಶದ ಆರ್ಥಿಕ ವ್ಯವಸ್ಥೆಯನ್ನು ಬದಲಿಸುವಲ್ಲಿ ಜಿಲ್ಲೆಯ ಎರಡು ಬ್ಯಾಂಕುಗಳ ಪಾತ್ರ ಸಣ್ಣದೇನಲ್ಲ.ದೇಶದ ಜನತೆಗೆ ಸಣ್ಣ ಉಳಿತಾಯದ ಮಹತ್ವವನ್ನು ಸಾರಿದ್ದೇ ಸಿಂಡಿಕೇಟ್ ಬ್ಯಾಂಕ್ ತನ್ನ ಪಿಗ್ಮಿ ಉಳಿತಾಯದ ಮೂಲಕ.

ಕಾರ್ಪೋರೇಷನ್ ಬ್ಯಾಂಕ್: ದಾನಶೂರ ಕರ್ಣನೆಂದೇ ಖ್ಯಾತರಾದ ಅಗರ್ಭ ಶ್ರೀಮಂತ ಉಡುಪಿಯ ಖಾನ್ ಬಹಾದ್ದೂರ್ ಹಾಜಿ ಅಬ್ದುಲ್ಲಾ ಸಾಹೇಬರು 1906ರಲ್ಲಿ ಕೇವಲ 5000ರೂ. ಮೂಲಬಂಡವಾಳದೊಂದಿಗೆ ಸ್ಥಾಪಿಸಿದ ಕಾರ್ಪೋರೇಷನ್ ಬ್ಯಾಂಕ್ ಇಂದು ದೇಶದ ಮುಂಚೂಣಿಯ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ತಂತ್ರಜ್ಞಾನದ ಅಳವಡಿಕೆಯಲ್ಲೂ ಮೇಲುಗೈ ಹೊಂದಿತ್ತು. ಕೆನರಾ ಬ್ಯಾಂಕಿಂಗ್ ಕಾರ್ಪೋರೇಷನ್ ಬ್ಯಾಂಕ್ 1972ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ಆಗಿ ಪರಿವರ್ತನೆ ಹೊಂದಿ ಇದೀಗ 3.20 ಲಕ್ಷ ಕೋಟಿ ರೂ.ವಾರ್ಷಿಕ ವಹಿವಾಟವನ್ನು ಹೊಂದಿತ್ತು. 2500ಕ್ಕೂ ಅಧಿಕ ಬ್ಯಾಂಕ್ ಶಾಖೆಗಳು, 3000ಕ್ಕೂ ಅಧಿಕ ಎಟಿಎಂಗಳನ್ನೂ 17 ಸಾವಿರಕ್ಕೂ ಅಧಿಕ ನೌಕರನ್ನು ಹೊಂದಿದೆ.

ಸಿಂಡಿಕೇಟ್ ಬ್ಯಾಂಕ್:  ಆಧುನಿಕ ಮಣಿಪಾಲದ ರೂವಾರಿ ಎನಿಸಿದ ಡಾ. ಟಿಎಂಎ ಪೈ ಅವರು, ತನ್ನ ಹಿರಿಯ ಸಹೋದರ ಉಪೇಂದ್ರ ಪೈ ಹಾಗೂ ಮಂಗಳೂರಿನ ವಾಮನ ಕುಡ್ವ ಅವರ ಜೊತೆ ಸೇರಿ 6000ರೂ. ಮೂಲ ಬಂಡವಾಳದೊಂದಿಗೆ 1925ರಲ್ಲಿ ಪ್ರಾರಂಭಿಸಿದ ಸಿಂಡಿಕೇಟ್ ಬ್ಯಾಂಕ್ ಇಂದು 4.77 ಲಕ್ಷ ಕೋಟಿ ರೂ.ವಾರ್ಷಿಕ ವ್ಯವಹಾರ ನಡೆಸುತ್ತಿದೆ. 4000ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬ್ಯಾಂಕ್ 31ಸಾವಿರ ನೌಕರರನ್ನು ಹೊಂದಿದೆ. ಜಿಲ್ಲೆಯ ಜನತೆಗೆ ಉಳಿತಾಯದ ಮಹತ್ವವನ್ನು ಹೇಳಿಕೊಟ್ಟ ಶ್ರೇಯಸ್ಸು ಈ ಬ್ಯಾಂಕಿಗೆ ಸಲ್ಲುತ್ತದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರ್ವಾಂಗೀಣ ಪ್ರಗತಿಯಲ್ಲಿ ಈ ಬ್ಯಾಂಕ್‌ಗಳ ಪಾತ್ರ ಹಿರಿದು. ಶಿಕ್ಷಣ, ಆರೋಗ್ಯ ಹಾಗೂ ಸಾಕ್ಷರತೆಯಲ್ಲಿ ದೇಶದ ಮುಂಚೂಣಿ ಜಿಲ್ಲೆಯಾಗಿರುವ ಇಲ್ಲಿನ ಶೇ.95ಕ್ಕೂ ಅಧಿಕ ಜನಸಂಖ್ಯೆ ಬ್ಯಾಂಕ್ ಗಳಲ್ಲಿ ಖಾತೆಯನ್ನು ಹೊಂದಿರುವುದು ಒಂದು ದಾಖಲೆಯಾಗಿದೆ. ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸಾಲ ಮರುಪಾವತಿಯಲ್ಲೂ ಕರಾವಳಿಯ ಜನತೆ ಹೆಮ್ಮೆ ಪಡುವ ದಾಖಲೆ ಹೊಂದಿದ್ದಾರೆ.

ಈ ಎಲ್ಲಾ ಸಾಧನೆಗಳ ಹೊರತಾಗಿಯೂ ಉಡುಪಿ ಜಿಲ್ಲೆಯ ಎರಡೂ ಬ್ಯಾಂಕ್‌ಗಳು ಶೀಘ್ರವೇ ತನ್ನ ಅಸ್ತಿತ್ವ ಕಳೆದುಕೊಳ್ಳಲಿರುವುದು ಜಿಲ್ಲೆಯ ಜನರ ಪಾಲಿಗೆ ಮಾಗದ ಗಾಯವಾಗುಳಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X