Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ದಿನ ಭಾರತದ ಗೌರವಾರ್ಹ ಮೊತ್ತ

ಮೊದಲ ದಿನ ಭಾರತದ ಗೌರವಾರ್ಹ ಮೊತ್ತ

ಎರಡನೇ ಟೆಸ್ಟ್: ಮಾಯಾಂಕ್, ಕೊಹ್ಲಿ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ31 Aug 2019 11:53 PM IST
share
ಮೊದಲ ದಿನ ಭಾರತದ ಗೌರವಾರ್ಹ ಮೊತ್ತ

ಜಮೈಕಾ, ಆ.31: ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್‌ವಾಲ್ ಅರ್ಧಶತಕಗಳ ನೆರವಿನಲ್ಲಿ ಭಾರತ ವೆಸ್ಟ್‌ಇಂಡೀಸ್ ವಿರುದ್ಧ ಎರಡನೇ ಹಾಗೂ ಅಂತಿಮ ಟೆಸ್ಟ್‌ನ ಮೊದಲ ದಿನ ಗೌರವಾರ್ಹ ಮೊತ್ತ ದಾಖಲಿಸಿದೆ.

ಶುಕ್ರವಾರ ಸಬೀನಾ ಪಾರ್ಕ್‌ನಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆಇಳಿಸಲ್ಪಟ್ಟ ಭಾರತ ಅಗ್ರ ಸರದಿಯ ಎರಡು ವಿಕೆಟ್‌ಗಳನ್ನು ಬೇಗನೇ ಕಳೆದುಕೊಂಡರೂ ಕೊಹ್ಲಿ ಮತ್ತು ಅಗರ್‌ವಾಲ್‌ಅರ್ಧಶತಕಗಳನ್ನು ದಾಖಲಿಸುವ ಮೂಲಕ ತಂಡವನ್ನು ಕಷ್ಟದಿಂದ ಪಾರು ಮಾಡಿದರು. ಮೊದಲ ದಿನದಾಟದಂತ್ಯಕ್ಕೆ ಭಾರತ 90 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 264 ರನ್‌ಗಳಿಸಿತ್ತು.

ಆಟ ನಿಂತಾಗ 42 ರನ್ ಗಳಿಸಿರುವ ಹನುಮ ವಿಹಾರಿ ಮತ್ತು 27 ರನ್ ಗಳಿಸಿರುವ ವಿಕೆಟ್ ಕೀಪರ್ ರಿಷಭ್ ಪಂತ್ ಕ್ರೀಸ್‌ನಲ್ಲಿದ್ದರು. ಭಾರತ 16.5 ಓವರ್‌ಗಳಲ್ಲಿ 46 ರನ್ ಗಳಿಸುವಷ್ಟರಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಜೇಸನ್ ಹೋಲ್ಡರ್ ಮತ್ತು ಚೊಚ್ಚಲ ಟೆಸ್ಟ್ ಆಡುತ್ತಿರುವ ರಹಕೀಮ್ ಕಾರ್ನ್ ವಾಲ್ ಅವರು ಭಾರತಕ್ಕೆ ಆರಂಭದಲ್ಲೇ ಆಘಾತ ನೀಡಿದರು.

  ಲೋಕೇಶ್ ರಾಹುಲ್ 13 ರನ್ ಮತ್ತು ಚೇತೇಶ್ವರ್ ಪೂಜಾರ 6 ರನ್ ಗಳಿಸಿ ಔಟಾದರು. ಮಾಯಾಂಕ್ ಅಗರ್‌ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ ಲೋಕೇಶ್ ರಾಹುಲ್ 6.5ನೇ ಓವರ್‌ನಲ್ಲಿ ವಿಂಡೀಸ್ ನಾಯಕ ಜೇಸನ್ ಹೋಲ್ಡರ್ ಅವರ ಎಸೆತದಲ್ಲಿ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕಾರ್ನ್ ವಾಲ್ ಅವರಿಗೆ ಕ್ಯಾಚ್ ನೀಡಿ ಪೆವಿಲಿಯನ್‌ಗೆ ವಾಪಸಾದರು.

 ಮಾಯಾಂಕ್ ಅಗರವಾಲ್‌ಗೆ ಜೊತೆಯಾದ ಚೇತೇಶ್ವರ ಪೂಜಾರ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಕಾ

 ರ್‌ವಾಲ್‌ರಎಸೆತದಲ್ಲಿ ಬ್ರೂಕ್ಸ್‌ಗೆ ಕ್ಯಾಚ್ ನೀಡಿದರು. ಇದರೊಂದಿಗೆ ಧಡೂತಿ ದೇಹದ ಆಲ್‌ರೌಂಡರ್ ಕಾರ್ನ್‌ವಾಲ್ ಚೊಚ್ಚಲ ವಿಕೆಟ್ ಪಡೆದರು. ಪೂಜಾರ ಅವರು 25 ಎಸೆತಗಳನ್ನು ಎದುರಿಸಿ 6 ರನ್ ಗಳಿಸಲಷ್ಟೇ ಶಕ್ತರಾದರು.

 ಮಾಯಾಂಕ್ ಅಗರ್‌ವಾಲ್‌ಮತ್ತು ನಾಯಕ ವಿರಾಟ್ ಕೊಹ್ಲಿ ಜೊತೆಯಾಗಿ ಮೂರನೇ ವಿಕೆಟ್‌ಗೆ 69 ರನ್ ಸೇರಿಸಿದರು. ಅಗರವಾಲ್ ತನ್ನ ನಾಲ್ಕನೇ ಟೆಸ್ಟ್‌ನಲ್ಲಿ ಮೂರನೇ ಅರ್ಧಶತಕ ದಾಖಲಿಸಿದರು. 55 ರನ್ ಗಳಿಸಿದ ಅಗರವಾಲ್ ಅವರು ಹೋಲ್ಡರ್ ಎಸೆತದಲ್ಲಿ ಕಾರ್ನ್‌ವಾಲ್‌ಗೆ ಕ್ಯಾಚ್ ನೀಡಿದರು. 4ನೇ ವಿಕೆಟ್‌ಗೆ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಜೊತೆಯಾಗಿ 49 ರನ್ ಜಮೆ ಮಾಡಿದರು. ಕಳೆದ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅರ್ಧಶತಕ (81) ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಶತಕ (102) ದಾಖಲಿಸಿದ್ದ ರಹಾನೆ ಅವರು 24 ರನ್ ಗಳಿಸಿ ಕ್ಯಾಮರೊನ್ ರೋಚ್‌ಗೆ ವಿಕೆಟ್ ಒಪ್ಪಿಸಿದರು.

59.5 ಓವರ್‌ಗಳಲ್ಲಿ 164ಕ್ಕೆ 4 ವಿಕೆಟ್ ಕಳೆದುಕೊಂಡಿದ್ದ ಭಾರತದ ಬ್ಯಾಟಿಂಗ್‌ನ್ನು ಮುನ್ನಡೆಸಲು ನಾಯಕ ಕೊಹ್ಲಿಗೆ ಹನುಮ ವಿಹಾರಿ ಜೊತೆಯಾದರು. ಇವರು ಜೊತೆಯಾಗಿ ತಂಡದ ಸ್ಕೋರ್‌ನ್ನು 200ರ ಗಡಿ ದಾಟಿಸಿದರು. ನಾಯಕ ಕೊಹ್ಲಿ 22ನೇ ಅರ್ಧಶತಕ ದಾಖಲಿಸಿದರು. ಕೊಹ್ಲಿ ಶತಕದ ಯೋಜನೆಯಲ್ಲಿದ್ದರು. ಆದರೆ ಹೋಲ್ಡರ್ ಇದಕ್ಕೆ ಅವಕಾಶ ನೀಡಲಿಲ್ಲ. ಹ್ಯಾಮಿಲ್ಟನ್‌ಗೆ ಕ್ಯಾಚ್ ನೀಡಿದರು. ಕೊಹ್ಲಿ 76 ರನ್(163ಎ, 10ಬೌ) ಗಳಿಸಿ ನಿರ್ಗಮಿಸಿದರು. 6ನೇ ವಿಕೆಟ್‌ಗೆ ಹನುಮ ವಿಹಾರಿ ಮತ್ತು ರಿಷಭ್ ಪಂತ್ ಜೊತೆಯಾಗಿ ಮುರಿಯದ ಜೊತೆಯಾಟದಲ್ಲಿ 62 ಜಮೆ ಮಾಡಿ ಬ್ಯಾಟಿಂಗ್‌ನ್ನು ಎರಡನೇ ದಿನಕ್ಕೆ ಕಾಯ್ದಿರಿಸಿದರು. ವಿಂಡೀಸ್ ನಾಯಕ ಜೇಸನ್ ಹೋಲ್ಡರ್ 39ಕ್ಕೆ 3 ವಿಕೆಟ್ ಪಡೆದರು. ಕೇಮರ್ ರೋಚ್ ಮತ್ತು ರಹಕೀಮ್ ಕಾರ್ನ್‌ವಾಲ್ ತಲಾ 1 ವಿಕೆಟ್ ಹಂಚಿಕೊಂಡರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X