Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯುಗೆ ರೋಮಿಲಾ ಥಾಪರ್ ಅವರ ಬಯೋಡಾಟಾ...

ಜೆಎನ್‌ಯುಗೆ ರೋಮಿಲಾ ಥಾಪರ್ ಅವರ ಬಯೋಡಾಟಾ ನೋಡಬೇಕಂತೆ!

ವಾರ್ತಾಭಾರತಿವಾರ್ತಾಭಾರತಿ1 Sept 2019 11:36 AM IST
share
ಜೆಎನ್‌ಯುಗೆ ರೋಮಿಲಾ ಥಾಪರ್ ಅವರ ಬಯೋಡಾಟಾ ನೋಡಬೇಕಂತೆ!

  ಹೊಸದಿಲ್ಲಿ, ಸೆ.1: ಕೇಂದ್ರ ಸರಕಾರದ ನೀತಿಗಳನ್ನು ತೀವ್ರವಾಗಿ ಟೀಕಿಸುತ್ತಿರುವ ಖ್ಯಾತ ಇತಿಹಾಸ ತಜ್ಞೆ ರೋಮಿಲಾ ಥಾಪರ್‌ರನ್ನು ಗೌರವ ಪ್ರೊಫೆಸರ್ ಆಗಿ ಮುಂದುವರಿಸಬೇಕೇ ಎಂದು ನಿರ್ಧರಿಸಲು ಜವಾಹರಲಾಲ್ ನೆಹರೂ ಯೂನಿವರ್ಸಿಟಿಯು ಥಾಪರ್ ಅವರಿಂದ ಸಿವಿ(ವೈಯಕ್ತಿಕ, ಶೈಕ್ಷಣಿಕ ವಿವರ)ಸಲ್ಲಿಸುವಂತೆ ಸೂಚಿಸಿದೆ.

 87 ವಯಸ್ಸಿನ ಥಾಪರ್‌ಗೆ ಕಳೆದ ತಿಂಗಳು ಬಯೋಡಾಟಾ ಸಲ್ಲಿಸುವಂತೆ ಜೆಎನ್‌ಯು ರಿಜಿಸ್ಟ್ರಾರ್ ಪ್ರಮೋದ್ ಕುಮಾರ್ ಪತ್ರದ ಮೂಲಕ ಸೂಚಿಸಿದ್ದರು. ವಿಶ್ವವಿದ್ಯಾಲಯದಿಂದ ಆಯ್ಕೆ ಮಾಡಿರುವ ಸಮಿತಿಯು ನಿಮ್ಮ ಕೆಲಸವನ್ನು ವೌಲ್ಯಮಾಪನ ಮಾಡಬಹುದು ಹಾಗೂ ನಿಮ್ಮನ್ನು ಗೌರವ ಪ್ರೊಫೆಸರ್ ಆಗಿ ಮುಂದುವರಿಸಬೇಕೇ ಎಂದು ನಿರ್ಧರಿಸಲಿದೆ ಎಂದು ರಿಜಿಸ್ಟ್ರಾರ್ ತಿಳಿಸಿದ್ದರು.

   ಮೂವರು ಹಿರಿಯ ಪ್ರಾಧ್ಯಾಪಕರು ಜೆಎನ್‌ಯು ರಿಜಿಸ್ಟ್ರಾರ್ ಅವರ ನಿರ್ಧಾರಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಗೌರವ ಪ್ರಾಧ್ಯಾಪಕರಲ್ಲಿ ಬಯೋಡಾಟಾ ಸಲ್ಲಿಸುವಂತೆ ಈ ತನಕ ಕೇಳಿಲ್ಲ. ಒಮ್ಮೆ ಅವರನ್ನು ಆಯ್ಕೆ ಮಾಡಿದ ಬಳಿಕ ಅವರು ಜೀವನಪರ್ಯಂತ ಅದೇ ಹುದ್ದೆಯಲ್ಲಿ ಮುಂದುವರಿಯಬಹುದಾಗಿದೆ ಎಂದು ಪ್ರೊಫೆಸರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

‘‘ಇದೊಂದು ಶುದ್ಧ ರಾಜಕೀಯ ಪ್ರೇರಿತ ಕ್ರಮ. ಥಾಪರ್ ಅವರು ಶಿಕ್ಷಣ ಖಾಸಗೀಕರಣ, ಜೆಎನ್‌ಯು ಸಹಿತ ಎಲ್ಲ ಸಂಸ್ಥೆಗಳ ಸ್ವಾಯತ್ತತೆಯ ಸವೆತ ಹಾಗೂ ಸಂಸ್ಥೆಗಳಿಂದ ಭಿನ್ನಾಭಿಪ್ರಾಯವನ್ನು ಪುಡಿಗಟ್ಟುವ ನೀತಿಗಳ ವಿರುದ್ಧ ಕಟು ಟೀಕೆಗಳನ್ನು ಮಾಡುತ್ತಿದ್ದರು’’ ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪ್ರಾಧ್ಯಾಪಕರು ಹೇಳಿದ್ದಾರೆ.

ಗೌರವ ಪ್ರಾಧ್ಯಾಪಕ ಹುದ್ದೆಗೆ ಕೇವಲ ಆಯ್ದ ಅಂತರ್‌ರಾಷ್ಟ್ರೀಯ ಖ್ಯಾತಿಯ ಶಿಕ್ಷಣ ತಜ್ಞರನ್ನು ಆಯ್ಕೆ ಮಾಡಲಾಗುತ್ತದೆ. ಜೆಎನ್‌ಯುನಲ್ಲಿ ನಿವೃತ್ತ ಪ್ರಾಧ್ಯಾಪಕರ ಹೆಸರನ್ನು ಕೇಂದ್ರ ಸರಕಾರ ಪ್ರಸ್ತಾವ ಮಾಡುತ್ತದೆ. ಸಂಬಂಧಿತ ಅಧ್ಯಯನ ಮಂಡಳಿ ಹಾಗೂ ವಿಶ್ವವಿದ್ಯಾಲಯದ ಶೈಕ್ಷಣಿಕ ಕೌನ್ಸಿಲ್ ಹಾಗೂ ಕಾರ್ಯಕಾರಿ ಕೌನ್ಸಿಲ್ ಹೆಸರನ್ನು ಅಂತಿಮಗೊಳಿಸುತ್ತದೆ.

ಈ ಹುದ್ದೆಯಲ್ಲಿರುವ ಶಿಕ್ಷಣ ತಜ್ಞರಿಗೆ ಯಾವುದೇ ಹಣಕಾಸು ಲಾಭವಿರುವುದಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ಕೆಲಸವನ್ನು ಮುಂದುವರಿಸಲು ಕೊಠಡಿಯೊಂದನ್ನು ಕೇಂದ್ರ ಒದಗಿಸುತ್ತದೆ. ಇವರು ಕೆಲವೊಮ್ಮೆ ಉಪನ್ಯಾಸ ನೀಡುತ್ತಾರೆ ಹಾಗೂ ಸಂಶೋಧನ ವಿದ್ಯಾರ್ಥಿಗಳ ಮೇಲ್ವಿಚಾರಣೆ ನಡೆಸುತ್ತಾರೆ.

 ಆರಂಭಿಕ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣತಿ ಪಡೆದಿರುವ ರೋಮಿಲಾ ಥಾಪರ್ ಸುಮಾರು 6 ದಶಕಗಳ ಕಾಲ ಪ್ರಾಧ್ಯಾಪಕಿ ಹಾಗೂ ಸಂಶೋಧಕಿಯಾಗಿ ಸೇವೆ ಸಲ್ಲಿಸಿದ್ದಾರೆ. 1970ರಿಂದ 1991ರ ತನಕ ಜೆಎನ್‌ಯುನಲ್ಲಿ ಪ್ರೊಫೆಸರ್ ಆಗಿದ್ದರು. 1993ರಲ್ಲಿ ಗೌರವ ಪ್ರಾಧ್ಯಾಪಕಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಅಮೆರಿಕ ಲೈಬ್ರರಿ ಆಫ್ ಕಾಂಗ್ರೆಸ್‌ನಿಂದ ಪ್ರತಿಷ್ಠಿತ ಕ್ಲುಗೆ ಪ್ರಶಸ್ತಿಗೆ ಭಾಜನರಾಗಿದ್ದರು.

ರೋಮಿಲಾ ಥಾಪರ್ ಬರೆದ ‘ದಿ ಪಬ್ಲಿಕ್ ಇಂಟಲೆಕ್ಚುವೆಲ್ ಇನ್ ಇಂಡಿಯಾ’ ಪುಸ್ತಕ ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ವಿಮರ್ಶಾತ್ಮಕವಾಗಿ ಅವಲೋಕಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X