Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಎಸೆಸೆಲ್ಸಿ-ಪಿಯುಸಿ ಮಂಡಳಿ ವಿಲೀನಕ್ಕೆ...

​ಎಸೆಸೆಲ್ಸಿ-ಪಿಯುಸಿ ಮಂಡಳಿ ವಿಲೀನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Sept 2019 5:24 PM IST
share

ಬೆಂಗಳೂರು, ಸೆ.1: ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ವಿಲೀನಗೊಳಿಸಿ ಸಾಮಾನ್ಯ ಪರೀಕ್ಷಾ ಮಂಡಳಿ ರಚಿಸುವ ಹಲವು ವರ್ಷಗಳ ಯೋಜನೆಗೆ ಈ ವರ್ಷ ಚಾಲನೆ ಸಿಗುವ ಸಾಧ್ಯತೆಯಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸೆಸೆಲ್ಸಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯುಸಿ ಪರೀಕ್ಷೆಗಳನ್ನು ನಡೆಸುತ್ತವೆ. ಎರಡೂ ಇಲಾಖೆಗಳ ಕೆಲಸ ಒಂದೇ ಆಗಿರುವುದರಿಂದ ಎರಡನ್ನೂ ವಿಲೀನಗೊಳಿಸಿ ಸಾಮಾನ್ಯ ಪರೀಕ್ಷಾ ಮಂಡಳಿ ಸ್ಥಾಪಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಡಳಿಗಳ ವಿಲೀನ ಪ್ರಕ್ರಿಯೆ ಪ್ರತಿ ವರ್ಷ ಪ್ರಸ್ತಾವ ಬಂದಾಗಲೂ ಕೊನೆ ಕ್ಷಣದಲ್ಲಿ ಮೂಲೆಗುಂಪು ಸೇರುತ್ತಿತ್ತು. ಆದರೆ, ಈ ಬಾರಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್ ವೇಳೆಗೆ ಮುಕ್ತಾಯ ಹಂತಕ್ಕೆ ಬರಲಿದೆ ಎಂದು ಸಚಿವರು ಹೇಳಿದ್ದು, 2020 ರ ಪರೀಕ್ಷೆಯನ್ನು ಸಾಮಾನ್ಯ ಪರೀಕ್ಷಾ ಮಂಡಳಿಯೇ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.ಪ್ರತಿ ವರ್ಷ 8 ಲಕ್ಷ ವಿದ್ಯಾರ್ಥಿಗಳು ಎಸೆಸೆಲ್ಸಿ ಹಾಗೂ 6 ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯುತ್ತಾರೆ. ಈ ಪರೀಕ್ಷೆ ನಡೆಸಲು ಎರಡು ಇಲಾಖೆಗಳಿಂದ ಅಂದಾಜು 70 ಲಕ್ಷ ರೂ.ಗಳಷ್ಟು ವೆಚ್ಚವಾಗಲಿದೆ.ವಿಲೀನ ಮಾಡಿ ಪರೀಕ್ಷೆ ನಡೆಸಿದಾಗ ತಗಲುವ ವೆಚ್ಚ ಕಡಿಮೆಯಾಗಲಿದೆ ಎಂಬ ಲೆಕ್ಕಾಚಾರ ಮಾಡಲಾಗಿದೆ. ಇದಕ್ಕಾಗಿ 2018 ರ ಬಜೆಟ್‌ನಲ್ಲಿ 50 ಕೋಟಿರೂ.ಗಳು ಮೀಸಲಿಟ್ಟಿತ್ತು. ಆದರೆ, ಮೈತ್ರಿ ಸರಕಾರದ ಅವಧಿಯಲ್ಲಿ ಬಹುತೇಕ ಸಚಿವರು ಬದಲಾದ್ದರಿಂದ ಯಾರೂ ವಿಲೀನ ವಿಚಾರಕ್ಕೆ ಮುಂದಾಗಲಿಲ್ಲ.ಸಿಬ್ಬಂದಿ ವಿಲೀನ: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪಿಯು ಶಿಕ್ಷಣ ಇಲಾಖೆಯಲ್ಲಿ 300 ಕ್ಕೂ ಅಧಿಕ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಿಬ್ಬಂದಿಯನ್ನೂ ವಿಲೀನ ಮಾಡಬೇಕಾಗುತ್ತದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಎರಡೂ ಕಚೇರಿಗಳಿದ್ದರೂ ಬೇರೆ ಬೇರೆ ಕಡೆಯಲ್ಲಿವೆ. ವಿಲೀನದ ಬಳಿಕ ಕಟ್ಟಡ ಬಳಕೆ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಉಪನ್ಯಾಸಕರ ಸಂಘ ವಿರೋಧ

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿಲೀನಕ್ಕೆ ಮುಂದಾಗಿರುವುದನ್ನು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ದೇಶದಲ್ಲಿ ತನ್ನದೇ ಆದ ಮಹತ್ವವಿದೆ. ವೃತ್ತಿಪರ ಶಿಕ್ಷಣ ನೀಡುವುದರಲ್ಲಿಯೂ ಮಾದರಿಯಾಗಿದೆ. ಈ ವೇಳೆ ಶಿಕ್ಷಣ ಮಂಡಳಿ ಸ್ವತಂತ್ರವಾಗಿ ಕಾರ್ಯ ನಿರ್ವಹಣೆ ಕುರಿತು ಸರಕಾರ ಚಿಂತಿಸಬೇಕು. ವಿಲೀನಕ್ಕೆ ಮುಂದಾಗಬಾರದು ಎಂದು ಸಂಘ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X