Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ’...

‘ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ’ ಎಂದು ಪ್ರಜಾಪ್ರಭುತ್ವದ ಹಕ್ಕು ಕುರಿತ ಕಾರ್ಯಕ್ರಮಕ್ಕೆ ಅಡ್ಡಿ

ಆರೆಸ್ಸೆಸ್, ಎಬಿವಿಪಿ ಕಾರ್ಯಕರ್ತರ ಕೃತ್ಯ: ಆರೋಪ

ವಾರ್ತಾಭಾರತಿವಾರ್ತಾಭಾರತಿ1 Sept 2019 9:02 PM IST
share
‘ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ’ ಎಂದು ಪ್ರಜಾಪ್ರಭುತ್ವದ ಹಕ್ಕು ಕುರಿತ ಕಾರ್ಯಕ್ರಮಕ್ಕೆ ಅಡ್ಡಿ

ಹೊಸದಿಲ್ಲಿ, ಸೆ.1: ಹೊಸದಿಲ್ಲಿಯಲ್ಲಿ ಮಾನವ ಹಕ್ಕುಗಳ ಸಂಘಟನೆ ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ಹಕ್ಕುಗಳ ವಿಷಯದ ಬಗ್ಗೆ ಚರ್ಚೆ ನಡೆಸುವುದನ್ನು ಆಕ್ಷೇಪಿಸಿ, ಇದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಎಂಬ ಕಾರಣ ನೀಡಿ ತಂಡವೊಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಕೇಂದ್ರ ದಿಲ್ಲಿಯ ಮಾಳವೀಯ ಸ್ಮೃತಿ ಭವನದಲ್ಲಿ ಪ್ರಜಾಪ್ರಭುತ್ವ ಹಕ್ಕುಗಳ ರಕ್ಷಣೆಯ ಉದ್ದೇಶದ ಎರಡು ದಿನದ ರಾಷ್ಟ್ರೀಯ ಸಮಾವೇಶಕ್ಕೆ ಶನಿವಾರ ಚಾಲನೆ ನೀಡಲಾಗಿತ್ತು. ಆರಂಭದಲ್ಲಿ ಅನುಮತಿ ನೀಡಿದ್ದ ಅಧಿಕಾರಿಗಳು ಬಳಿಕ ಸಮಾವೇಶದಲ್ಲಿ ನಿಗದಿಗೊಳಿಸಿದ್ದ ಗೋಷ್ಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಭಿನ್ನಾಭಿಪ್ರಾಯದ ದಮನ, ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರದ ರದ್ದತಿ, ದಲಿತರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳು ಇತ್ಯಾದಿ ವಿಷಯಗಳ ಗೋಷ್ಟಿಯನ್ನು ಆಯೋಜಿಸಿರುವುದಕ್ಕೆ ಆಕ್ಷೇಪ ಎತ್ತಿದರು ಹಾಗೂ ಈ ಕಾರ್ಯಕ್ರಮ ರದ್ದುಗೊಳಿಸಬೇಕೆಂಬ ಒತ್ತಡ ಬಂದಿದೆ ಎಂದು ಆಡಳಿತ ವರ್ಗ ತಿಳಿಸಿತು.

ಮುಖ್ಯವಾಗಿ ಪ್ರಜಾಪ್ರಭುತ್ವ ಹಕ್ಕು ವಿಷಯದ ಚರ್ಚೆಗೆ ಅವರು ಆಕ್ಷೇಪಿಸಿದರು ಎಂದು ಸಿಪಿಐ(ಮಾರ್ಕಿಸ್ಟ್-ಲೆನಿನಿಸ್ಟ್) ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಸಮಾವೇಶದ ಆಯೋಜಕರು ಸಂಘಟನೆಯ ಸಿದ್ಧಾಂತ ಹಾಗೂ ಚಿಂತನೆಯ ಬಗ್ಗೆ ಮೊದಲೇ ತಿಳಿಸದೆ ತಪ್ಪು ಮಾಹಿತಿ ನೀಡಿದ ಕಾರಣ ಸಮಾವೇಶವನ್ನು ರದ್ದುಗೊಳಿಸಿರುವುದಾಗಿ ರವಿವಾರ ಮಧ್ಯಾಹ್ನ ತಿಳಿಸಲಾಗಿದೆ. ದಿಲ್ಲಿಯಲ್ಲಿ ಮಾನವ ಹಕ್ಕುಗಳ ಕುರಿತಾದ ಪ್ರಮುಖ ಸಮಾವೇಶವನ್ನು ಯಾವುದೇ ಅಡ್ಡಿಯಿಲ್ಲದೆ ನಡೆಸಲು ಸಾಧ್ಯವಾಗಿಲ್ಲ ಎಂಬುದು ಬೇಸರದ ವಿಷಯ ಎಂದವರು ಹೇಳಿದ್ದಾರೆ.

ಸಮಾವೇಶವು ಮಾನವ ಹಕ್ಕುಗಳ ಕುರಿತಾಗಿದೆ ಎಂದು ಮೊದಲೇ ಸ್ಪಷ್ಟವಾಗಿ ತಿಳಿಸಿರುವುದಾಗಿ ಸಮಾವೇಶದ ಸಹ ಆಯೋಜಕರಾದ ‘ಪಾಕಿಸ್ತಾನ-ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಆ್ಯಂಡ್ ಡೆಮಾಕ್ರಸಿ’ಯ ಪ್ರಧಾನ ಕಾರ್ಯದರ್ಶಿ ವಿಜಯನ್ ಎಂಜೆ ಹೇಳಿದ್ದಾರೆ. ಆದರೆ ಶನಿವಾರ ಉಪನ್ಯಾಸ ನೀಡಿದವರು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಆ ಬಳಿಕ ಸಮಾವೇಶದ ಸ್ಥಳಕ್ಕೆ ಆಗಮಿಸಿದ ತಂಡವೊಂದು ಮಾನವ ಹಕ್ಕು ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದೆ. ಇವರಲ್ಲಿ ಕೆಲವರು ಮಾಳವೀಯ ಟ್ರಸ್ಟ್‌ನ ಸದಸ್ಯರು ಹಾಗೂ ಉಳಿದವರು ಆರೆಸ್ಸೆಸ್ ಸಂಘಟನೆಯವರು. ಜೆಎನ್‌ಯುವಿನ ಎಬಿವಿಪಿ ಸದಸ್ಯರೂ ಗುಂಪಿನಲ್ಲಿದ್ದು ಇವರ ಮುಖ ನೋಡಿದರೆ ಗುರುತಿಸಬಲ್ಲೆ ಎಂದು ವಿಜಯನ್ ಹೇಳಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿದ್ದು ಸಮಾವೇಶ ಯಶಸ್ವಿಯಾಗಿ ನಡೆದಿದೆ ಎಂದವರು ತಿಳಿಸಿದ್ದಾರೆ.

Convention in Defence of Democratic Rights ends on a defiant and upbeat note. Thugs don't scare us! pic.twitter.com/Juc3SUOvxL

— Kavita Krishnan (@kavita_krishnan) September 1, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X