Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್ ಲೈನ್ ನಲ್ಲಿಯೇ ಹಳೆಯ ಫೋಟೋ ಬದಲಾಯಿಸಿ...

ಆನ್ ಲೈನ್ ನಲ್ಲಿಯೇ ಹಳೆಯ ಫೋಟೋ ಬದಲಾಯಿಸಿ ಕಲರ್ ವೋಟರ್ ಐಡಿ ಪಡೆಯಿರಿ

ವಾರ್ತಾಭಾರತಿವಾರ್ತಾಭಾರತಿ1 Sept 2019 10:13 PM IST
share
ಆನ್ ಲೈನ್ ನಲ್ಲಿಯೇ ಹಳೆಯ ಫೋಟೋ ಬದಲಾಯಿಸಿ ಕಲರ್ ವೋಟರ್ ಐಡಿ ಪಡೆಯಿರಿ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಶೇ. 1ಕ್ಕಿಂತಲೂ ಹೆಚ್ಚು ನಕಲಿ ಮತದಾರರಿದ್ದಾರೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಿದ್ದು, ಮತದಾರರ ಪಟ್ಟಿ ಪರಿಶೀಲನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾರ್ವಜನಿಕರು ಪಟ್ಟಿಯಿಂದ ನಕಲಿ ಹೆಸರುಗಳನ್ನು ತೆಗೆದುಹಾಕಲು ಸಹಕರಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ.

ವಾರ್ತಾ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಚುನಾವಣಾ ಪಟ್ಟಿ ಪರಿಶೀಲನಾ ಕಾರ್ಯಕ್ರಮಕ್ಕೆ ರವಿವಾರ ಚಾಲನೆ ನೀಡಿ ಮಾತನಾಡಿದ ಅವರು, ಸದ್ಯದ ಚುನಾವಣಾ ಪಟ್ಟಿಯಲ್ಲಿ ಲಿಂಗ ಅಸಮಾನತೆ ಸರಿಯಾಗಿದೆ. ಪುರುಷ-ಮಹಿಳೆ ಮತದಾರರ ಸಂಖ್ಯೆ ಸಾವಿರಕ್ಕೆ 979 ಇದೆ. ಯುವ ಮತದಾರರ ಸಂಖ್ಯೆಯ ಸಮಸ್ಯೆಯಿದ್ದು, ಅರ್ಹರ ಸಂಖ್ಯೆ 11 ಲಕ್ಷಕ್ಕೂ ಅಧಿಕವಿದೆ ಎಂದರು.

ಮೊದಲ ಬಾರಿಗೆ ಚುನಾವಣಾ ಆಯೋಗ ಎಪಿಕ್(ಓಟರ್)ಗೆ ಹತ್ತು ಹದಿನೈದು ವರ್ಷಗಳ ಹಿಂದೆ ನೀಡಿರುವ ಹಳೆಯ ಫೋಟೋ ಬದಲಾಯಿಸಿ ಈಗಿನ ಕಲರ್ ಫೋಟೋ ಆನ್‌ಲೈನ್ ಮೂಲಕ ಅಪ್ಲೋಡ್ ಮಾಡಬಹುದಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಫೋಟೋ ಬದಲಾವಣೆ ಅಥವಾ 2-3 ಕಡೆಗಳಲ್ಲಿ ಹೆಸರು ಇದ್ದಲ್ಲಿ ಸರಿ ಪಡಿಸಿಕೊಳ್ಳಲು ಉತ್ತಮ ಅವಕಾಶವಿದೆ. ಸಾರ್ವಜನಿಕರು ಈ ಅವಕಾಶವನ್ನು ತಪ್ಪದೇ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತ ಉಮೇಶ್ ಸಿಹ್ನಾ ಮಾತನಾಡಿ, ಓಟರ್ ಐಡಿಯಲ್ಲಿರುವ ಹಳೆ ಫೋಟೋ ಬದಲಾವಣೆಗೆ ಅವಕಾಶ ಇದೆ. ಹಾಗೆಯೇ ಒಂದು ಕುಟುಂಬದ ಎಲ್ಲ ಮತದಾರರನ್ನು ಒಂದೇ ಮತಗಟ್ಟೆಯಲ್ಲಿ ಸೇರಿಸಲು ಅವಕಾಶ ಇದೆ. ಮತದಾರರು ಆನ್‌ಲೈನ್ ಮೂಲಕವೇ ಇದನ್ನು ಮಾಡಿಕೊಳ್ಳಬಹುದು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಮುಖ್ಯ ಚುನಾವಣಾ ಆಯುಕ್ತ ಕೆ.ಎನ್. ರಮೇಶ್, ಪಿ.ಎಸ್.ವಸ್ತ್ರದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X