Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣೇಶ ಹಬ್ಬ: ಹೂ-ಹಣ್ಣು ದುಬಾರಿ

ಗಣೇಶ ಹಬ್ಬ: ಹೂ-ಹಣ್ಣು ದುಬಾರಿ

ವಾರ್ತಾಭಾರತಿವಾರ್ತಾಭಾರತಿ1 Sept 2019 11:08 PM IST
share
ಗಣೇಶ ಹಬ್ಬ: ಹೂ-ಹಣ್ಣು ದುಬಾರಿ

ಬೆಂಗಳೂರು, ಸೆ.1: ರಾಜಧಾನಿಯಲ್ಲಿ ಗೌರಿ- ಗಣೇಶ ಹಬ್ಬದ ಪ್ರಯುಕ್ತ ಹೂವು ಮತ್ತು ಹಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು, ಸಮರ್ಪಕ ಪೂರೈಕೆ ಇಲ್ಲದೇ ಬೆಲೆಗಳು ಗಗನಕ್ಕೇರಿದೆ.

ಗೌರಿಬಿದನೂರು, ಚಿಕ್ಕಬಳ್ಳಾಪುರ, ಕೋಲಾರ, ದೇವನಹಳ್ಳಿ, ಗದಗ, ಬಳ್ಳಾರಿ, ಚಿತ್ರದುರ್ಗ ಹಾಗೂ ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹೂವುಗಳು ಬರುತ್ತಿವೆ. ಒಂದು ಕೆ.ಜಿ.ಕನಕಾಂಬರ ಹೂವು 2000 ರೂ. ಗಡಿ ದಾಟಿದ್ದು, ಹಬ್ಬದ ದಿನದಂದು ಮೂರು ಸಾವಿರ ರೂ. ಆಗುವ ಸಾಧ್ಯತೆ ಹೆಚ್ಚಾಗಿದೆ. ಬಾಳೆಕಂದುಗಳ ಬೆಲೆಯೂ ಕಳೆದ ವರ್ಷಕ್ಕೆ ಹೋಲಿಸಿದರೆ 30 ರೂ. ರಿಂದ 60 ರೂ. ವರೆಗೆ ಹೆಚ್ಚಾಗಿದೆ. ಕೆ.ಆರ್.ಮಾರುಕಟ್ಟೆಗೆ 60ರಿಂದ 70 ಲೋಡ್, ಮಲ್ಲೇಶ್ವರಂ ಮಾರುಕಟ್ಟೆಗೆ 25 ಲೋಡ್ ಬಾಳೆಕಂದು ಬಂದರೂ, ಬೆಲೆ ಹೆಚ್ಚಳವಾಗಿದೆ. 3 ಅಡಿಯ ಬಾಳೆಕಂದಿಗೆ 50 ರೂ., 5 ಅಡಿಗೆ 80 ರೂ., 12 ಅಡಿ ಎತ್ತರದ ಬಾಳೆಕಂದಿಗೆ 300 ರೂ. ಇದ್ದು, ಈ ಬಾರಿಯ ಗಣೇಶ ಚತುರ್ಥಿ ಬಲು ತುಟ್ಟಿಯಾಗಿದೆ.

ಕೆ.ಆರ್.ಮಾರುಕಟ್ಟೆಯಲ್ಲಿ ದುಂಡು ಮಲ್ಲಿಗೆ 500 ರೂ., ಗುಲಾಬಿ 160 ರೂ., ಸಂಪಿಗೆ 200 ರೂ., ಸೇವಂತಿಗೆ 150 ರೂ. ಇದೆ. ಗೌರಿಬಿದನೂರಿನಿಂದ ಕನಕಾಂಬರ ಹೂ ಬರುತ್ತಿದ್ದು, ಚಿಕ್ಕಬಳ್ಳಾಪುರ, ಕೋಲಾರ, ದೇವನಹಳ್ಳಿ, ಹೊಸಕೋಟೆಯಿಂದ ಸಂಪಿಗೆ, ಗುಲಾಬಿ ಹೂ ಬರುತ್ತಿವೆ. ಗದಗ, ಬಳ್ಳಾರಿ, ಚಿತ್ರದುರ್ಗದಿಂದ ಹೂವುಗಳು ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ ಎನ್ನುತ್ತಾರೆ ಹೂವಿನ ವ್ಯಾಪಾರಿ ಮಹೇಶ್.
ಹಣ್ಣುಗಳು ಮಾರುಕಟ್ಟೆಗೆ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಸೇಬು ಕೆ.ಜಿ.ಗೆ 150 ರೂ., ದಾಳಿಂಬೆ 120 ರೂ., ಸೀತಾಫಲ 130 ರೂ., ಮೊಸಂಬಿ 140 ರೂ., ಆಸ್ಟ್ರೇಲಿಯಾ ಮೊಸಂಬಿ 200 ರೂ., ಕಿತ್ತಳೆ 140 ರೂ., ಒಂದು ಫೈನಾಫಲ್ಗೆ 50 ರೂ. ಬೆಲೆ ಇದೆ. ಕಳೆದ ವಾರ ಹಣ್ಣುಗಳ ಬೆಲೆ ಕಡಿಮೆ ಇತ್ತು. ಆದರೆ ಇದೀಗ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಬ್ಬದ ದಿನಂದಂದು ಇನ್ನು ಹೆಚ್ಚಾಗಲಿದೆ. ಮಹಾರಾಷ್ಟ್ರದಿಂದ ದಾಳಿಂಬೆ, ಆಸ್ಟ್ರೇಲಿಯಾದಿಂದ ಮೊಸಂಬಿ ಬರುತ್ತಿದ್ದು, ರಾಜ್ಯದಿಂದ ಹೆಚ್ಚಿನ ಉತ್ಪನ್ನ ಬರುತ್ತಿಲ್ಲ ಆದ್ದರಿಂದ ಹಣ್ಣುಗಳ ದರವೂ ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿ ಶೌಕತ್.

ತರಕಾರಿ ಬೆಲೆ ಸ್ಥಿರ; ಅಂತರ್ ರಾಜ್ಯಕ್ಕೆ ರಫ್ತು
ರಾಜ್ಯದ ವಿವಿಧ ಜಿಲ್ಲೆಗಳಿಂದ ತರಕಾರಿ ಅಧಿಕ ಮಟ್ಟದಲ್ಲಿ ಮಾರುಕಟ್ಟೆಗೆ ಬರುತ್ತಿದ್ದು, ತರಕಾರಿ ಬೆಲೆ ಸ್ಥಿರವಾಗಿದೆ. ಜನರಿಗೆ ಕೈಗೆಟುಕುವ ದರದಲ್ಲಿ ತರಕಾರಿಗಳು ಸಿಗುತ್ತಿದ್ದು, ಪ್ರತಿದಿನ ಕೆ.ಆರ್.ಮಾರುಕಟ್ಟೆಯಿಂದ ಕೇರಳಕ್ಕೆ 5-9 ಲೋಡ್, ಆಂಧ್ರಪ್ರದೇಶಕ್ಕೆ 10 ಲೋಡ್, ತಮಿಳುನಾಡಿಗೆ 20-25 ಲೋಡ್, ಮುಂಬೈಗೆ 3 ಲೋಡ್ ತರಕಾರಿ ರಾಜ್ಯದಿಂದ ಹೋಗುತ್ತಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಿ ಶರವಣ.

ಈ ಬಾರಿಯ ಗಣೇಶ ಚತುರ್ಥಿಗೆ ಈಗಾಗಲೇ ಇಷ್ಟು ಪ್ರಮಾಣದ ಹೂ ಬೇಕು ಎಂದು ಗ್ರಾಹಕರು ತಿಳಿಸಿದ್ದಾರೆ. ಆದ್ದರಿಂದ ಬೇಡಿಕೆ ಹೆಚ್ಚಿದೆ. ಆದರೆ ಪೂರೈಕೆ ಇಲ್ಲ. ನಾವು ಪ್ರತಿದಿನ 500 ಕೆ.ಜಿ ಹೂವು ಮಾರಾಟ ಮಾಡುತ್ತಿದ್ದೆವು. ಹಬ್ಬದಲ್ಲಿ 3,000 ಕೆ.ಜಿ. ಬೇಡಿಕೆ ಇದೆ. ಆದ್ದರಿಂದ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
-ಮಹೇಶ್, ಹೂವಿನ ವ್ಯಾಪಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X