Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತ್ಯಸಂಸ್ಕಾರಕ್ಕೆ ಜಾಗ ನಿರಾಕರಣೆ:...

ಅಂತ್ಯಸಂಸ್ಕಾರಕ್ಕೆ ಜಾಗ ನಿರಾಕರಣೆ: ಮೃತದೇಹದೊಂದಿಗೆ ಮಳೆಯಲ್ಲೇ ನೆನೆಯುತ್ತಾ ಕಾದ ದಲಿತರು

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ2 Sept 2019 11:07 PM IST
share
ಅಂತ್ಯಸಂಸ್ಕಾರಕ್ಕೆ ಜಾಗ ನಿರಾಕರಣೆ: ಮೃತದೇಹದೊಂದಿಗೆ ಮಳೆಯಲ್ಲೇ ನೆನೆಯುತ್ತಾ ಕಾದ ದಲಿತರು

ಚೆನ್ನೈ, ಸೆ.2: ದಲಿತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಮೇಲ್ಜಾತಿಯ ಜನರು ಜಾಗ ನೀಡದ ಕಾರಣ ದಲಿತರು ಮಳೆಯಲ್ಲೇ ನೆನೆಯುತ್ತಾ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಕಾದ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. 50 ವರ್ಷದ ದಲಿತ ವ್ಯಕ್ತಿ ಷಣ್ಮುಗವೇಲು ಮೃತಪಟ್ಟಿದ್ದರು. ಅಂತ್ಯಸಂಸ್ಕಾರಕ್ಕಾಗಿ ಸಾಂಪ್ರದಾಯಿಕ ರುದ್ರಭೂಮಿಗೆ ಮೃತದೇಹವನ್ನು ಒಯ್ಯಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಭಾರೀ ಮಳೆ ಸುರಿದ ಪರಿಣಾಮ ಬೆಂಕಿ ಹೊತ್ತಿಸಲಾಗದೆ ಸಂಬಂಧಿಕರು ಕಂಗಾಲಾದರು.

“ಈ ಕಾರಣದಿಂದಾಗಿ ದಲಿತರು ಮೇಲ್ಜಾತಿಯವರೊಂದಿಗೆ ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸ್ಥಳ ಕೇಳಿದ್ದರು. ಆದರೆ ಅವರು ನಿರಾಕರಿಸಿದರು. ಸಮಸ್ಯೆಯ ಬಗ್ಗೆ, ಅಸಹಾಯಕತೆಯ ಬಗ್ಗೆ ವಿವರಿಸಿದರೂ ಅವರು ಕಿವಿಗೊಡಲಿಲ್ಲ” ಎಂದು ಚೆಲ್ಲಕಣ್ಣು ಎಂಬವರು ವಿವರಿಸಿದ್ದಾರೆ.

ಈ ಗ್ರಾಮದಲ್ಲಿ 50 ದಲಿತ ಕುಟುಂಬಗಳಿದ್ದರೆ, 150ಕ್ಕೂ ಹೆಚ್ಚು ರೆಡ್ಡಿಯಾರ್ ಸಮುದಾಯದ ಜನರಿದ್ದಾರೆ. ಎರಡೂ ಸಮುದಾಯಗಳಿಗೆ ಇಲ್ಲಿ ಪ್ರತ್ಯೇಕ ರುದ್ರಭೂಮಿಗಳಿವೆ. ಆದರೆ ಮೇಲ್ಜಾತಿಯವರ ರುದ್ರಭೂಮಿಯಲ್ಲಿ ಶವಗಳ ಅಂತ್ಯಸಂಸ್ಕಾರಕ್ಕೆ ಶೆಡ್ ಗಳಿದ್ದರೆ, ದಲಿತರಿಗೆ ಬರೀ ಭೂಮಿ ಮಾತ್ರವಿದೆ.

ಷಣ್ಮುಗವೇಲು ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡುವಂತೆ ಅವರ ಸಂಬಂಧಿಕರು ಬೇಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

“ಇಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಮಗೆ ಏನೂ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮುದಾಯಕ್ಕೆ ಸಹಾಯ ಮಾಡಿ” ಎಂದು ಒಬ್ಬರು ಬೇಡಿಕೊಳ್ಳುತ್ತಾರೆ. “ಅವರ ನಮ್ಮ ವಿರುದ್ಧ ತಾರತಮ್ಯ ನಡೆಸುತ್ತಿದ್ದಾರೆ. ಅವರಿಗೆ ಎಲ್ಲಾ ಸವಲತ್ತುಗಳಿವೆ. ನಮ್ಮನ್ನು ನೋಡಿ. ಮಳೆಯಲ್ಲಿ ನಿಂತಿದ್ದೇವೆ. ಅವನು ನನ್ನ ಸಹೋದರ” ಎಂದು ಷಣ್ಮುಗವೇಲು ಅವರ ಮೃತದೇಹವನ್ನು ತೋರಿಸುತ್ತಾ ಆ ವ್ಯಕ್ತಿ ಹೇಳುತ್ತಾರೆ.

“ಮೃತದೇಹಕ್ಕೆ ಬೆಂಕಿ ಕೊಟ್ಟಾಗ ಮಳೆ ಬಂದು ಎಲ್ಲಾ ಆರಿಹೋಯಿತು. ಮೃತದೇಹ ಅರ್ಧದಷ್ಟು ಸುಟ್ಟಿತ್ತು. ನಂತರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು” ಎಂದು ಚೆಲ್ಲಕಣ್ಣು ಹೇಳುತ್ತಾರೆ.

No dignity in death: Dalit community in Madurai struggles to conduct funeral in rain. The burial grounds for caste Hindus, they allege, are separate and with better facilities. @thenewsminute pic.twitter.com/HJjclG8jPL

— priyankathirumurthy (@priyankathiru) September 2, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X