Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯು ಪಡೆಗೆ 8 ಅಪಾಚೆ ಹೆಲಿಕಾಪ್ಟರ್ಗಳ...

ವಾಯು ಪಡೆಗೆ 8 ಅಪಾಚೆ ಹೆಲಿಕಾಪ್ಟರ್ಗಳ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ3 Sept 2019 1:00 PM IST
share
ವಾಯು ಪಡೆಗೆ 8 ಅಪಾಚೆ ಹೆಲಿಕಾಪ್ಟರ್ಗಳ ಸೇರ್ಪಡೆ

ಪಠಾಣ್ಕೋಟ್, ಸೆ. 3: ಭಾರತೀಯ ವಾಯುಡೆಯ ಸಮರ ಸಾಮರ್ಥ್ಯಕ್ಕೆ ಪ್ರಮುಖ ಉತ್ತೇಜನವಾಗಿ ಅಮೆರಿಕ ನಿರ್ಮಿತ 8 ಅಪಾಚೆ ಎಎಚ್-64 ಇ ದಾಳಿ ಹೆಲಿಕಾಪ್ಟರ್ಗಳನ್ನು ಸೋಮವಾರ ಐಎಎಫ್ಗೆ ಸೇರ್ಪಡೆಗೊಳಿಸಲಾಗಿದೆ. ಪಠಾಣ್ಕೋಟ್ ವಾಯು ಪಡೆ ನೆಲೆಯಲ್ಲಿ ಎಎಚ್-64 ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ ಕಾರ್ಯಕ್ರಮದಲ್ಲಿ ವಾಯು ಪಡೆ ವರಿಷ್ಠ ಬಿ.ಎಸ್. ಧಾನೋವ ಮುಖ್ಯ ಅತಿಥಿಯಾಗಿದ್ದರು. 

ಈ ಸಂದರ್ಭ ಮಾತನಾಡಿದ ಧಾನೋವ, ಹೆಲಿಕಾಪ್ಟರ್ಗಳ ಸೇರ್ಪಡೆ ಭಾರತೀಯ ವಾಯುಪಡೆಯ ಕಾರ್ಯಾಚರಣೆ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದರು. ಅಪಾಚೆ ಸೇರ್ಪಡೆಯಿಂದ ವಾಯು ಪಡೆಯ ಇತ್ತಿಚೆಗಿನ ತಲೆಮಾರಿನ ದಾಳಿ ಹೆಲಿಕಾಪ್ಟರ್ಗಳ ದಾಸ್ತಾನು ಮೇಲ್ದರ್ಜೀಕರಣಗೊಳ್ಳಲಿದೆ ಎಂದು ಹೇಳುವ ಮೂಲಕ ಅವರು ಅಪಾಚೆ ದಾಳಿ ಹೆಲಿಕಾಪ್ಟರ್ಗಳ ವ್ಯಾಪಕ ಶ್ರೇಣಿಯ ಸಾಮರ್ಥ್ಯಗಳ ಬಗ್ಗೆ ಪ್ರಶಂse ವ್ಯಕ್ತಪಡಿಸಿದರು. ‘‘ಭಾರತೀಯ ವಾಯು ಪಡೆ ಆಗ್ರಹಿಸಿದ್ದ ನಿಖರ ಗುಣಮಟ್ಟಕ್ಕೆ ಹೊಂದುವಂತೆ ಈ ಹೆಲಿಕಾಪ್ಟರ್ಗಳನ್ನು ಮಾರ್ಪಡಿಸಲಾಗಿದೆ. ನಿಗದಿತ ಅವಧಿಯಂತೆ ಹೆಲಿಕಾಪ್ಟರ್ಗಳು ದೊರಕಿರುವುದು ಸಂತಸ ಉಂಟು ಮಾಡಿದೆ’’ ಎಂದು ಅವರು ಹೇಳಿದರು. ಹಳೆಯದಾಗುತ್ತಿರುವ ಎಂಐ-35 ಹೆಲಿಕಾಪ್ಟರ್ ಸ್ಥಾನ ತುಂಬಲು ಅಪಾಚೆ ಹೆಲಿಕಾಪ್ಟರ್ಗಳನ್ನು ಖರೀದಿಸಲಾಯಿತು. ಜಗತ್ತಿನ ಹಲವು ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಅತ್ಯಾಧುನಿಕ ಬಹೋದ್ದೇಶಿತ ಹೆಲಿಕಾಪ್ಟರ್ ಇದಾಗಿದೆ.

ಇದು 80ರ ದಶಕದಿಂದ ಈಚೆಗೆ ಹಾರಾಟ ನಡೆಸುತ್ತಿದೆ. ಜಾಗತ್ತಿನಾದ್ಯಂತ ತನ್ನ ಯಶಸ್ವಿ ಕಾರ್ಯಾಚರಣೆಯನ್ನು ಸಾಬೀತುಪಡಿಸಿದೆ. ಗುಂಡು ಹಾರಿಸುವ ಹಾಗೂ ಎಟಿಜಿಎಂ (ಟ್ಯಾಂಕ್ ತಡೆ ನಿರ್ದೇಶಿತ ಕ್ಷಿಪಣಿ), ರಾಕೆಟ್ ಹಾಗೂ ಇತರ ಯುದ್ಧ ಸಾಮಗ್ರಿಗಳನ್ನು ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ತಿಳಿಸಿದರು. ಆಕಾಶದಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ಸಾಮರ್ಥ ಹೊಂದಿರುವ ಹೆಲಿಕಾಪ್ಟರ್ ಭಾರತೀಯ ವಾಯು ಪಡೆಗೆ ಸೇರ್ಪಡೆಗೊಳ್ಳುತ್ತಿರುವುದು ಇದೇ ಮೊದಲು ಎಂದು ಧಾನೋವ ಹೇಳಿದರು.

‘‘ಇದರ ಬೆಂಕಿ ನಿಯಂತ್ರಣ ರ್ಯಾಡರ್ ಕೂಡ ಪ್ರಚಂಡ ಸಾಮರ್ಥ್ಯ ನೀಡಲಿದೆ. ಶಸ್ತ್ರಾಸ್ತ ವಿರೋಧಿ ಕಾರ್ಯಾಚರಣೆ, ವಾಯು ಪಡೆಯ ಶತ್ರುಗಳ ನಿಗ್ರಹ ಹಾಗೂ ಯುದ್ಧಭೂಮಿಯಲ್ಲಿ ವೈಮಾನಿಕ ದಾಳಿಯಲ್ಲಿ ಪಾತ್ರ-ಹೀಗೆ ಹಲವು ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಇದು ಹೊಂದಿದೆ’’ ಎಂದು ಧಾನೋವ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X