Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿ:...

ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿ: ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ3 Sept 2019 1:48 PM IST
share
ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿ: ಐವನ್ ಡಿಸೋಜ

ಮಂಗಳೂರು, ಸೆ.3: ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿದ್ದು, ಕೇಂದ್ರ ಸರಕಾರ ಮಲಗಿದೆ ಎಂದು ವಿಧಾನ ಪರಿಷತ್‌ನ ಸದಸ್ಯರಾದ ಐವನ್ ಡಿಸೋಜ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ನಡುವೆ ಆರ್‌ಬಿಐನಿಂದ ಹಣವನ್ನು ಹಿಂಪಡೆದಿರುವ ಕೇಂದ್ರ ಸರಕಾರ ದೇಶವನ್ನು ಗಂಡಾಂತರಕ್ಕೆ ತಳ್ಳಿದೆ ಎಂದರು.

ದೇಶವು ತೀವ್ರವಾದ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನದ ಮೂಲಕ ಕೇಂದ್ರ ಸರಕಾರ ಕಾರ್ಪೊರೇಟ್ ಪೆಕಂಪನಿಗಳಿಗೆ ಸಹಕರಿಸುತ್ತಿದೆ. ಈ ಮೂಲಕ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಕುತಂತ್ರ ನಡೆಸಿದೆ. ಬ್ಯಾಂಕ್‌ಗಳ ವಿಲೀನೀಕರಣ ದೇಶದ ಜನತೆಗೆ ಮಾಡುವ ದ್ರೋಹ ಎಂದು ಅವರು ಆಪಾದಿಸಿದರು.

ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಹೋರಾಟವನ್ನೂ ನಡೆಸಲಿದೆ. ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗ ಶೀಘ್ರವೇ ಕೇಂದ್ರದ ಹಣಕಾಸು ಸಚಿವರನ್ನು ಈ ವಿಷಯದಲ್ಲಿ ಭೇಟಿ ಮಾಡಲಿದೆ ಎಂದು ಅವರು ಹೇಳಿದರು.

ಯುಪಿಎ ಸರಕಾರ ಆಡಳಿತದಲ್ಲಿದ್ದ ಸಂದರ್ಭ ವಿಶ್ವವೇ ಆರ್ಥಿಕ ಹಿಂಜರಿತಕ್ಕೆ ಒಳಗಾಗಿದ್ದರೂ ಭಾರತ ಸ್ಥಿರವಾಗಿದ್ದು. ಆದರೆ ಇದೀಗ ಭಾರತದ ಜಿಡಿಪಿ ಶೇ.5ಕ್ಕಿಂತ ಕಡಿಮೆಯಾಗಿದೆ. ಸ್ವಿಸ್ ಬ್ಯಾಂಕ್‌ನಿಂದ ಕಪ್ಪು ಹಣವನ್ನು ತರುವುದಾಗಿ ಹೇಳಿದ್ದ ಕೇಂದ್ರ ಸರಕಾರ ಇದೀಗ ಆರ್‌ಬಿಐ ಹಣವನ್ನೇ ತೆಗೆದಿದೆ. ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದ್ದರೂ ಅದರ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಸಣ್ಣ ಉದ್ದಿಮೆಗಳು ಮುಚ್ಚುತ್ತಿವೆ. ಅಟೋಮೊಬೈಲ್, ಟೆಕ್ಸ್‌ಟೈಲ್ ಕಂಪೆನಿಗಳು ಉತ್ಪನ್ನವನ್ನು ಸ್ಥಗಿತಗೊಳಿಸುತ್ತಿವೆ. ಹೂಡಿಕೆಯಾಗುತ್ತಿಲ್ಲ. ವಿದೇಶಿ ಬಂಡವಾಳ ಬರುತ್ತಿಲ್ಲ. ಇಂತಹ ವ್ಯವಸ್ಥೆಯ ನಡುವೆಯೂ ಬ್ಯಾಂಕ್‌ಗಳ ವಿಲಿನೀಕರಣದಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ಕೇಂದ್ರದ ಹಣಕಾಸು ಸಚಿವರು ಹೇಳುತ್ತಿರುವುದು ಹಾಸ್ಯಾಸ್ಪದ ಎಂದರು.

ಬಿಜೆಪಿಗೆ ಪ್ರಚಾರ ಮಾಡಿಯೇ ಗೊತ್ತು ಹೊರತು ವಿಚಾರ ಮಾಡುವುದು ತಿಳಿದಿಲ್ಲ. ಬಿಜೆಪಿಗೆ ಸಲಹೆ ಬರುವುದು ನಾಗಪುರದಿಂದ ಎಂಬಂತೆ ಕಾಣುತ್ತಿದೆ. ಅಲ್ಲಿರುವವರು ಪ್ರಚಾರಕರೇ ಹೊರತು ವಿಚಾರಕರಲ್ಲ. ಪ್ರಧಾನಿಯವರಿಗೆ ಇದಕ್ಕೆಲ್ಲಾ ಸಮಯವೇ ಇಲ್ಲ. ಅವರು ವಿದೇಶದ ಪ್ರವಾಸದಲ್ಲಿ ನಿರತರಾಗಿದ್ದಾರೆ ಎಂದು ಐವನ್ ಡಿಸೋಜ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X