Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 10 ಲಕ್ಷ ರೊಹಿಂಗ್ಯಾ ನಿರಾಶ್ರಿತರ ಮೊಬೈಲ್...

10 ಲಕ್ಷ ರೊಹಿಂಗ್ಯಾ ನಿರಾಶ್ರಿತರ ಮೊಬೈಲ್ ಸಂಪರ್ಕ ಸ್ಥಗಿತಕ್ಕೆ ಬಾಂಗ್ಲಾ ಆದೇಶ

ವಾರ್ತಾಭಾರತಿವಾರ್ತಾಭಾರತಿ3 Sept 2019 8:11 PM IST
share
10 ಲಕ್ಷ ರೊಹಿಂಗ್ಯಾ ನಿರಾಶ್ರಿತರ ಮೊಬೈಲ್ ಸಂಪರ್ಕ ಸ್ಥಗಿತಕ್ಕೆ ಬಾಂಗ್ಲಾ ಆದೇಶ

ಕಾಕ್ಸ್ ಬಜಾರ್ (ಬಾಂಗ್ಲಾದೇಶ), ಸೆ. 3: ಬಾಂಗ್ಲಾದೇಶದ ಆಗ್ನೇಯ ಭಾಗದಲ್ಲಿರುವ ಶಿಬಿರಗಳಲ್ಲಿ ವಾಸಿಸುತ್ತಿರುವ ಸುಮಾರು 10 ಲಕ್ಷ ರೊಹಿಂಗ್ಯಾ ನಿರಾಶ್ರಿತರ ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಮೊಬೈಲ್ ಕಂಪೆನಿಗಳಿಗೆ ಅಧಿಕಾರಿಗಳು ಸೋಮವಾರ ಆದೇಶ ನೀಡಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಶಿಬಿರಗಳಲ್ಲಿ ಭಾರೀ ಪ್ರಮಾಣದಲ್ಲಿ ಹಿಂಸೆ ವರದಿಯಾಗಿರುವ ಹಿನ್ನೆಲೆಯಲ್ಲಿ, ಬಾಂಗ್ಲಾದೇಶ ಈ ಕ್ರಮ ತೆಗೆದುಕೊಂಡಿದೆ.

ಈ ಶಿಬಿರಗಳಲ್ಲಿ ವಾಸಿಸುತ್ತಿರುವ ಹೆಚ್ಚಿನ ರೊಹಿಂಗ್ಯಾ ಮುಸ್ಲಿಮರು ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಮ್ಯಾನ್ಮಾರ್ ಸೇನೆ ನಡೆಸಿದ ದಮನ ಕಾರ್ಯಾಚರಣೆಗೆ ಬೆದರಿ ಬಾಂಗ್ಲಾದೇಶಕ್ಕೆ ಪಲಾಯನಗೈದವರು.

ಶಿಬಿರಗಳಿಗೆ ಒದಗಿಸಲಾಗಿರುವ ಮೊಬೈಲ್ ಜಾಲಗಳನ್ನು ಮುಚ್ಚಲು ತೆಗೆದುಕೊಂಡ ಕ್ರಮಗಳ ಬಗ್ಗೆ ದೂರಸಂಪರ್ಕ ಕಂಪೆನಿಗಳು ಏಳು ದಿನಗಳಲ್ಲಿ ಸರಕಾರಕ್ಕೆ ವರದಿಗಳನ್ನು ನೀಡಬೇಕಾಗಿದೆ ಎಂದು ಬಾಂಗ್ಲಾದೇಶ ಟೆಲಿಕಮ್ಯುನಿಕೇಶನ್ ರೆಗ್ಯುಲೇಟರಿ ಕಮಿಶನ್ (ಬಿಟಿಆರ್‌ಸಿ) ವಕ್ತಾರ ಝಾಕಿರ್ ಹುಸೈನ್ ಖಾನ್ ಹೇಳಿದರು.

‘‘ಶಿಬಿರಗಳಲ್ಲಿ ತುಂಬಾ ಸಂಖ್ಯೆಯಲ್ಲಿ ನಿರಾಶ್ರಿತರು ಮೊಬೈಲ್ ಫೋನ್‌ಗಳನ್ನು ಬಳಸುತ್ತಿದ್ದಾರೆ. ಅದನ್ನು ನಿಲ್ಲಿಸುವಂತೆ ನಾವು ಮೊಬೈಲ್ ಸೇವಾಪೂರೈಕೆದಾರ ಕಂಪೆನಿಗಳಿಗೆ ಸೂಚಿಸಿದ್ದೇವೆ’’ ಎಂದು ಎಎಫ್‌ಪಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು ಹೇಳಿದರು. ‘‘ಭದ್ರತಾ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’’ ಎಂದರು.

ರೊಹಿಂಗ್ಯಾ ನಿರಾಶ್ರಿತರಿಂದ ವಿರೋಧ

ಬಾಂಗ್ಲಾದೇಶ ಸರಕಾರದ ಈ ಆದೇಶಕ್ಕೆ ರೊಹಿಂಗ್ಯಾ ನಿರಾಶ್ರಿತರು ಆಶ್ಚರ್ಯಚಕಿತರಾಗಿದ್ದಾರೆ.

ನಿಷೇಧವು ರೊಹಿಂಗ್ಯಾರ ಜೀವನದ ಮೇಲೆ ಭಾರೀ ಪರಿಣಾಮ ಬೀರಲಿದೆ ಹಾಗೂ ಗಡಿ ಜಿಲ್ಲೆ ಕಾಕ್ಸ್ ಬಝಾರ್‌ನ ವಿವಿಧ ಭಾಗಗಳಲ್ಲಿ ಹಂಚಿಹೋಗಿರುವ ಶಿಬಿರಗಳ ನಡುವಿನ ಸಂಪರ್ಕ ಕಡಿದುಹೋಗಲಿದೆ ಎಂದು ಅನಾಮಧೇಯರಾಗಿ ಉಳಿಯಬಯಸಿದ ರೊಹಿಂಗ್ಯಾ ನಾಯಕರೊಬ್ಬರು ಹೇಳಿದರು.

‘‘ಮ್ಯಾನ್ಮಾರ್ ಅಥವಾ ಜಗತ್ತಿನ ಇತರ ಭಾಗಗಳಲ್ಲಿ ವಾಸಿಸುತ್ತಿರುವ ನಮ್ಮ ಸಂಬಂಧಿಗಳೊಂದಿಗೆ ಸಂಪರ್ಕ ಹೊಂದಲು ನಮಗೆ ಸಾಧ್ಯವಾಗುವುದಿಲ್ಲ’’ ಎಂದು ಅವರು ಹೇಳಿದರು.

ಹೆಚ್ಚಿನ ರೊಹಿಂಗ್ಯಾ ನಿರಾಶ್ರಿತರು ವಿದೇಶಗಳಲ್ಲಿರುವ ರೊಹಿಂಗ್ಯಾ ಮುಸ್ಲಿಮರು ಕಳುಹಿಸುತ್ತಿರುವ ಹಣದಲ್ಲಿ ಜೀವಿಸುತ್ತಿದ್ದಾರೆ ಹಾಗೂ ಹಣ ಕಳುಹಿಸಿರುವ ಬಗ್ಗೆ ಅವರಿಗೆ ಫೋನ್ ಕರೆಗಳು ಬರುತ್ತವೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X