Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಖ್ ಯಾತ್ರಿಕರಿಗೆ ವಿಮಾನ...

ಸಿಖ್ ಯಾತ್ರಿಕರಿಗೆ ವಿಮಾನ ನಿಲ್ದಾಣಗಳಲ್ಲೇ ವೀಸಾ ವಿತರಣೆ: ಪಾಕ್ ಪ್ರಧಾನಿ ಇಮ್ರಾನ್

ವಾರ್ತಾಭಾರತಿವಾರ್ತಾಭಾರತಿ3 Sept 2019 8:32 PM IST
share
ಸಿಖ್ ಯಾತ್ರಿಕರಿಗೆ ವಿಮಾನ ನಿಲ್ದಾಣಗಳಲ್ಲೇ ವೀಸಾ ವಿತರಣೆ: ಪಾಕ್ ಪ್ರಧಾನಿ ಇಮ್ರಾನ್

ಲಾಹೋರ್, ಸೆ. 3: ಭಾರತ ಮತ್ತು ಇತರ ದೇಶಗಳಿಂದ ಪಾಕಿಸ್ತಾನದಲ್ಲಿರುವ ಗುರುದ್ವಾರಗಳನ್ನು ಸಂದರ್ಶಿಸುವ ಸಿಖ್ ಯಾತ್ರಿಕರಿಗೆ ಒಂದಕ್ಕಿಂತ ಹೆಚ್ಚು ಮತ್ತು ‘ವಿಮಾನ ನಿಲ್ದಾಣಗಳಲ್ಲೇ’ (ವೀಸಾ ಆನ್ ಅರೈವಲ್) ವೀಸಾಗಳನ್ನು ನೀಡಲಾಗುವುದು ಹಾಗೂ ಪವಿತ್ರ ಸ್ಥಳಗಳಿಗೆ ಅವರು ನೀಡುವ ಭೇಟಿಯ ವೇಳೆ ಗರಿಷ್ಠ ಸಂಭಾವ್ಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಘೋಷಿಸಿದ್ದಾರೆ.

‘‘ನಿಮಗೆ ಬಹು ವೀಸಾಗಳನ್ನು ನೀಡಲಾಗುವುದು ಎಂದು ನಾನು ಭರವಸೆ ನೀಡುತ್ತೇನೆ. ಇದು ನಮ್ಮ ಜವಾಬ್ದಾರಿ. ನಿಮಗೆ ವಿಮಾನ ನಿಲ್ದಾಣದಲ್ಲೇ ವೀಸಾಗಳನ್ನು ನೀಡುವ ವ್ಯವಸ್ಥೆಯನ್ನು ನಾವು ಮಾಡುತ್ತೇವೆ’’ ಎಂದು ಇಮ್ರಾನ್ ಖಾನ್ ಸೋಮವಾರ ಹೇಳಿರುವುದಾಗಿ ‘ದ ನ್ಯೂಸ್ ಇಂಟರ್‌ನ್ಯಾಶನಲ್’ ವರದಿ ಮಾಡಿದೆ.

ಅವರು ಇಲ್ಲಿನ ಗವರ್ನರ್ ಹೌಸ್ ಸಮೀಪ ನಡೆದ ಅಂತರ್‌ರಾಷ್ಟ್ರೀಯ ಸಿಖ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪಾಕಿಸ್ತಾನದ ಪಂಜಾಬ್ ರಾಜ್ಯಪಾಲ ಚೌಧರಿ ಸರ್ವಾರ್, ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಚಿವ ಸಂಪುಟ ಸದಸ್ಯರು ಹಾಗೂ ಬ್ರಿಟನ್, ಅಮೆರಿಕ, ಕೆನಡ, ಯುರೋಪ್ ಮತ್ತು ಇತರ ದೇಶಗಳ ಸಿಖ್ ಯಾತ್ರಿಕರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

‘‘ಧಾರ್ಮಿಕ ಸ್ಥಳಗಳ ಸಂದರ್ಶನಕ್ಕಾಗಿ ಅಥವಾ ಪ್ರವಾಸಕ್ಕಾಗಿ ಪಾಕಿಸ್ತಾನಕ್ಕೆ ಬರುವ ವಿದೇಶಿಯರು ವೀಸಾ ಪಡೆಯಲು ಪಡುವ ಕಷ್ಟಗಳ ಬಗ್ಗೆ ನನ್ನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನನಗೆ ಗೊತ್ತಾಯಿತು’’ ಎಂದರು.

‘‘ನಾವು ವೀಸಾ ವ್ಯವಸ್ಥೆಯನ್ನು ಬದಲಿಸಿದ್ದೇವೆ ಹಾಗೂ ಅಡೆತಡೆಗಳನ್ನು ಸೃಷ್ಟಿಸುವ ಜನರ ಪ್ರವೃತ್ತಿ ನಿಧಾನವಾಗಿ ತಿಳಿಯಾಗುತ್ತದೆ’’ ಎಂದು ಇಮ್ರಾನ್ ಖಾನ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X