Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ...

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ನಾಯಕ ಚಿನ್ಮಯಾನಂದ ಇನ್ನೂ ನಾಪತ್ತೆ

ಹರಿದ್ವಾರದ ಆಶ್ರಮದಿಂದ ವಾಪಸಾದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ3 Sept 2019 11:24 PM IST
share
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ನಾಯಕ ಚಿನ್ಮಯಾನಂದ ಇನ್ನೂ ನಾಪತ್ತೆ

ಶಹಜಾನ್‌ಪುರ(ಉ.ಪ್ರ),ಸೆ.3: ಕಾನೂನು ವಿದ್ಯಾರ್ಥಿನಿಯೋರ್ವಳು ಹೊರಿಸಿರುವ ಕಿರುಕುಳ ಆರೋಪಗಳ ಕುರಿತು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಚಿನ್ಮಯಾನಂದರನ್ನು ಪ್ರಶ್ನಿಸಲು ಹರಿದ್ವಾರದಲ್ಲಿಯ ಅವರ ಆಶ್ರಮಕ್ಕೆ ತೆರಳಿದ್ದ ಸ್ಥಳೀಯ ಪೊಲೀಸರ ತಂಡವು ಬರಿಗೈಯಲ್ಲಿ ವಾಪಸಾಗಿದೆ.

ಚಿನ್ಮಯಾನಂದ ತನ್ನ ಆಶ್ರಮದಲ್ಲಿ ಇರಲಿಲ್ಲವಾದ್ದರಿಂದ ಪೊಲೀಸ್ ತಂಡವು ಸೋಮವಾರ ವಾಪಸಾಗಿದೆ ಎಂದು ಎಸ್‌ಪಿ ದಿನೇಶ ತ್ರಿಪಾಠಿ ಅವರು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ದಿಲ್ಲಿಯಲ್ಲಿದ್ದು,ಅವರ ಇಲ್ಲಿಯ ನಿವಾಸಕ್ಕೆ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದರು.

ಪುತ್ರಿಯನ್ನು ಭೇಟಿಯಾಗಲು ನಾವು ದಿಲ್ಲಿ ತಲುಪಿದಾಗ ಆಕೆ ತುಂಬ ಹೆದರಿಕೊಂಡಿದ್ದಳು ಮತ್ತು ತಾಯಿಯನ್ನು ಕಂಡ ತಕ್ಷಣ ಅಳತೊಡಗಿದ್ದಳು. ಆಡಳಿತ ಮತ್ತು ಕಾನೂನು ನಮ್ಮ ಪರವಾಗಿದೆ ಎಂದು ಆಕೆಗೆ ಧೈರ್ಯ ತುಂಬಿದ್ದೇವೆ. ಆಕೆ ಮನೆಗೆ ಮರಳಲು ಬಯಸಿದ್ದಳು,ಆದರೆ ಹೆದರಿಕೆಯಿಂದ ರಾಜಸ್ಥಾನಕ್ಕೆ ತೆರಳಿದ್ದಳು. ಚಿನ್ಮಯಾನಂದ ವಿರುದ್ಧ ಎಲ್ಲ ಪುರಾವೆಗಳು ಆಕೆಯ ಬಳಿಯಿದ್ದು, ಸುರಕ್ಷಿತ ಸ್ಥಳದಲ್ಲಿರಿಸಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ದೂರವಾಣಿಯಲ್ಲಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

 ಚಿನ್ಮಯಾನಂದರ ಟ್ರಸ್ಟ್ ನಡೆಸುತ್ತಿರುವ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಈ ಯುವತಿ ಆ.24ರಿಂದ ನಾಪತ್ತೆಯಾಗಿದ್ದಳು. ಅದಕ್ಕೂ ಒಂದು ದಿನ ಮೊದಲು ಆಕೆ ‘ಸಂತ ಸಮುದಾಯದ ಹಿರಿಯ ನಾಯಕ ’ನಿಂದ ತನಗೆ ಕಿರುಕುಳ ಮತ್ತು ಜೀವ ಬೆದರಿಕೆಯನ್ನು ಆರೋಪಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಳು. ಆಕೆ ವೀಡಿಯೊದಲ್ಲಿ ಚಿನ್ಮಯಾನಂದರನ್ನು ಹೆಸರಿಸಿರಲಿಲ್ಲ.

ಚಿನ್ಮಯಾನಂದ ತನ್ನ ಪುತ್ರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ತಂದೆ ಪೊಲೀಸ್ ದೂರು ಸಲ್ಲಿಸಿದ್ದಾರೆ. ಆದರೆ ಆರೋಪವನ್ನು ತಿರಸ್ಕರಿಸಿರುವ ಚಿನ್ಮಯಾನಂದರ ವಕೀಲರು,ಇದು ಅವರನ್ನು ಬ್ಲಾಕ್‌ಮೇಲ್ ಮಾಡುವ ಸಂಚು ಎಂದು ಹೇಳಿದ್ದಾರೆ.

ಉ.ಪ್ರದೇಶ ಪೊಲೀಸರು ಆ.30ರಂದು ರಾಜಸ್ಥಾನದಲ್ಲಿ ಯುವತಿಯನ್ನು ಪತ್ತೆ ಹಚ್ಚಿದ್ದರು.

ಕೊಲೆಗಾಗಿ ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳಲ್ಲಿ ಚಿನ್ಮಯಾನಂದ ವಿರುದ್ಧ ಶಹಜಾನ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿ ಆರೋಪಗಳ ಕುರಿತು ತನಿಖೆಗೆ ಐಜಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಸೋಮವಾರ ಉ.ಪ್ರ.ಸರಕಾರಕ್ಕೆ ನಿರ್ದೇಶ ನೀಡಿರುವ ಸರ್ವೋಚ್ಚ ನ್ಯಾಯಾಲಯವು,ಅಲಹಾಬಾದ್ ಹೈಕೋರ್ಟ್ ಪೀಠವು ತನಿಖೆಯ ಮೇಲೆ ನಿಗಾ ಇರಿಸುತ್ತದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X