Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂಚನೆಗೊಳಗಾಗಿ 5.5 ಕೋಟಿ ರೂ. ಕಳೆದುಕೊಂಡ...

ವಂಚನೆಗೊಳಗಾಗಿ 5.5 ಕೋಟಿ ರೂ. ಕಳೆದುಕೊಂಡ ವೈದ್ಯ ಕುಟುಂಬದೊಂದಿಗೆ ಆತ್ಮಹತ್ಯೆ

ರೈಸ್ ಪುಲ್ಲಿಂಗ್ ದಂಧೆ

ವಾರ್ತಾಭಾರತಿವಾರ್ತಾಭಾರತಿ4 Sept 2019 2:19 PM IST
share
ವಂಚನೆಗೊಳಗಾಗಿ 5.5 ಕೋಟಿ ರೂ. ಕಳೆದುಕೊಂಡ ವೈದ್ಯ ಕುಟುಂಬದೊಂದಿಗೆ ಆತ್ಮಹತ್ಯೆ

ಅಮಲಾಪುರಂ, ಸೆ.4: ಪೂರ್ವ ಗೋದಾವರಿ ಜಿಲ್ಲೆಯ ಅಮಲಾಪುರಂನ ವೈದ್ಯರೊಬ್ಬರು ತಮ್ಮ ಪತ್ನಿ ಹಾಗೂ ಪುತ್ರನ ಜತೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿಂದಿನ ರಹಸ್ಯವನ್ನು ಪೊಲೀಸರು ಬೇಧಿಸಿದ್ದಾರೆ. ತಮ್ಮಲ್ಲಿರುವ ವಿಶೇಷ, ಮಾಂತ್ರಿಕ ಶಕ್ತಿಯಿರುವ ಅಕ್ಕಿ ಕಾಳುಗಳನ್ನು ಉಪಯೋಗಿಸಿ ಹಣವನ್ನು ದ್ವಿಗುಣಗೊಳಿಸಬಹುದೆಂಬ ನಾಲ್ಕು ಮಂದಿ ಸದಸ್ಯರ ಗ್ಯಾಂಗ್ ನೀಡಿದ ಆಮಿಷಕ್ಕೆ ಬಲಿ ಬಿದ್ದಿದ್ದ ಆರ್ಥೋಪೀಡಿಕ್ ಸರ್ಜನ್ ಆಗಿರುವ ಡಾ. ಪೆನ್ಮೆತ್ಸ ರಾಮಕೃಷ್ಣಂ ರಾಜು ಅವರು ಸ್ಥಳೀಯ ಲೇವಾದೇವಿಗಾರರಿಂದ ಅತ್ಯಧಿಕ ಬಡ್ಡಿ ದರಕ್ಕೆ ಸಾಲ ಪಡೆದು ಆ ನಾಲ್ಕು ಮಂದಿಗೆ 5.5 ಕೋಟಿ ರೂ. ನೀಡಿದ್ದು ನಂತರ ತಾವು ವಂಚನೆಗೊಳಗಾಗಿದ್ದು ತಿಳಿಯುತ್ತಲೇ ಕುಟುಂಬದೊಂದಿಗೆ ಆತ್ಮಹತ್ಯೆಗೈದಿದ್ದರು.

ಅವರನ್ನು ವಂಚಿಸಿದ ತಂಡದ ವರಿಕೂಟಿ ವೆಂಕಟ ವೇಣುಧಾರ ಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ರಾಜು (55), ಅವರ ಪತ್ನಿ ಲಕ್ಷ್ಮೀ ದೇವಿ (45), ವೈದ್ಯ ಪುತ್ರ ಕೃಷ್ಣ ಸಂದೀಪ್ (25) ಕಳೆದ ವಾರ ಅನೆಸ್ತೆಟಿಕ್ ಔಷಧಿ ಸುಕೊಲ್ ಇದರ ಅತಿಯಾದ ಡೋಸ್ ತೆಗೆದುಕೊಂಡು ತಕ್ಷಣ ಸಾವನ್ನಪ್ಪಿದ್ದರು.

ಬಂಧಿತ ಆರೋಪಿ ಪ್ರಸಾದ್ ಕೃಷ್ಣಾ ಜಿಲ್ಲೆಯ ಕೊಡೂರು ಗ್ರಾಮದವನಾಗಿದ್ದರೂ ಹೈದರಾಬಾದ್ ನಿವಾಸಿಯಾಗಿದ್ದ. ಶಾವಲಿನ್, ಅನಂತರಾಮ್ ಹಾಗೂ ಶ್ರೀನಿವಾಸ್ ರಾವ್ ಎಂಬವರು ಆತನ ಸಹವರ್ತಿಗಳೆನ್ನಲಾಗಿದ್ದು ಅವರೆಲ್ಲರೂ  ತಮ್ಮಲ್ಲಿರುವ ಅಕ್ಕಿ ಕಾಳುಗಳಿಗೆ ದೇವರ ಚಿತ್ರಗಳಿರುವ ನಾಣ್ಯಗಳನ್ನು ಸೆಳೆಯುವ ಶಕ್ತಿಯಿದೆಯೆಂದು ಮುಗ್ಧ ಜನರನ್ನು ನಂಬಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X