Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇವಲ 20 ಶೇ. ಮುದ್ರಾ ಸಾಲ...

ಕೇವಲ 20 ಶೇ. ಮುದ್ರಾ ಸಾಲ ಫಲಾನುಭವಿಗಳಿಂದ ಉದ್ಯಮ ಆರಂಭ: ವರದಿ

ವಾರ್ತಾಭಾರತಿವಾರ್ತಾಭಾರತಿ4 Sept 2019 10:12 PM IST
share
ಕೇವಲ 20 ಶೇ. ಮುದ್ರಾ ಸಾಲ ಫಲಾನುಭವಿಗಳಿಂದ ಉದ್ಯಮ ಆರಂಭ: ವರದಿ

ಹೊಸದಿಲ್ಲಿ,ಸೆ.4: ಕೇಂದ್ರ ಕಾರ್ಮಿಕ ಸಚಿವಾಲಯದ ಕರಡು ವರದಿಯು ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಸರಕಾರದ ಮುಂಚೂಣಿಯ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಯಶಸ್ಸಿನ ಬಗ್ಗೆ ಶಂಕೆಗಳನ್ನು ವ್ಯಕ್ತಪಡಿಸಿದೆ. ಇನ್ನಷ್ಟೇ ಬಿಡುಗಡೆಗೊಳ್ಳಬೇಕಿರುವ,2018 ಎಪ್ರಿಲ್-ನವೆಂಬರ್ ನಡುವೆ ನಡೆಸಲಾಗಿರುವ ಸಮೀಕ್ಷೆಯು ಮುದ್ರಾ ಸಾಲ ಫಲಾನುಭವಿಗಳ ಪೈಕಿ ಶೇ.20ರಷ್ಟು ಜನರು ಮಾತ್ರ ಹಣವನ್ನು ಹೊಸ ಉದ್ಯಮ ಸ್ಥಾಪನೆಗೆ ಬಳಸಿದ್ದಾರೆ ಮತ್ತು ಇತರರು ತಮ್ಮ ಹಾಲಿ ಉದ್ಯಮವನ್ನು ವಿಸ್ತರಿಸಲು ಉಪಯೋಗಿಸಿಕೊಂಡಿದ್ದಾರೆ ಎನ್ನುವುದನ್ನು ಬೆಳಕಿಗೆ ತಂದಿದೆ.

ಸಮೀಕ್ಷೆಗೊಳಪಡಿಸಲಾದದ 94,375 ಫಲಾನುಭವಿಗಳ ಪೈಕಿ 19,396 (ಶೇ.20.6) ಜನರು ಹೊಸ ಉದ್ಯಮಗಳನ್ನು ಸ್ಥಾಪಿಸಿದ್ದರೆ,ಉಳಿದ 74,979 ಜನರು ಇದ್ದ ಉದ್ಯಮಗಳನ್ನೇ ವಿಸ್ತರಿಸಿದ್ದಾರೆ.

2015 ಎಪ್ರಿಲ್-2017 ಡಿಸೆಂಬರ್ ನಡುವಿನ ಅವಧಿಯಲ್ಲಿ 1.12 ಕೋಟಿ ಹೆಚ್ಚುವರಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಮೀಕ್ಷೆಯ ವರದಿಯು ಹೇಳುತ್ತಿದೆ. ಇದು ವಿತರಣೆಯಾಗಿರುವ ಸಾಲಗಳ ಒಟ್ಟು ಸಂಖ್ಯೆಯ ಶೇ.10ಕ್ಕಿಂತಲೂ ಕಡಿಮೆಯಾಗಿದೆ. ಯೋಜನೆಯಡಿ ಮೊದಲ ಮೂರು ವರ್ಷಗಳಲ್ಲಿ (2015-2018) 12.27 ಕೋ.ಸಾಲ ಖಾತೆಗಳಿಗೆ ಒಟ್ಟು 5.71 ಲ.ಕೋ.ರೂ.ಗಳನ್ನು ವಿತರಿಸಲಾಗಿದೆ. ಆದರೆ ಕರಡು ವರದಿಯು ಹೊಸ ಉದ್ಯಮಗಳು ಮತ್ತು ಹಾಲಿ ಉದ್ಯಮಗಳು ಸೃಷ್ಟಿಸಿರುವ ಹೆಚ್ಚುವರಿ ಉದ್ಯೋಗಗಳ ಪ್ರತ್ಯೇಕ ಅಂಕಿಸಂಖ್ಯೆಗಳನ್ನು ಒದಗಿಸಿಲ್ಲ ಎಂದು ಕಾರ್ಮಿಕ ಸಚಿವಾಲಯದ ಕರಡು ವರದಿಯು ಲಭ್ಯವಾಗಿರುವ ಪ್ರಮುಖ ಆಂಗ್ಲ ಮಾಧ್ಯಮವೊಂದು ಹೇಳಿದೆ.

ಸೃಷ್ಟಿಯಾಗಿರುವ ಹೆಚ್ಚುವರಿ ಉದ್ಯೋಗಗಳಲ್ಲಿ ಸೇವೆಗಳು ಮತ್ತು ವ್ಯಾಪಾರ ಕ್ಷೇತ್ರದ ಕೊಡುಗೆ ಶೇ.67.57ರಷ್ಟಿದ್ದರೆ,ತಯಾರಿಕೆ ಕೇತ್ರದ ಕೊಡುಗೆ ಕೇವಲ ಶೇ.11.7ರಷ್ಟಿದೆ.

ಯೋಜನೆಯಡಿ ಸೃಷ್ಟಿಯಾಗಿರುವ 1.2 ಕೋ.ಉದ್ಯೋಗಗಳ ಪೈಕಿ ಸುಮಾರು ಅರ್ಧ(51.06 ಲ.) ಸ್ವಯಂ ದುಡಿಯುತ್ತಿರುವ ಉದ್ಯಮಗಳ ಮಾಲಕರಾಗಿದ್ದು,ಇದರಲ್ಲಿ ಸಂಬಳವಿಲ್ಲದೆ ದುಡಿಯುತ್ತಿರುವ ಅವರ ಕುಟುಂಬ ಸದಸ್ಯರೂ ಸೇರಿದ್ದಾರೆ. 60.94 ಲ.ಉದ್ಯೋಗಗಳಿಗೆ ಜನರನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯು ತಿಳಿಸಿದೆ.

2017-18ರಲ್ಲಿ ನಿರುದ್ಯೋಗ ದರವು ಶೇ.6.1ರ ದಾಖಲೆ ಮಟ್ಟದಲ್ಲಿರಲಿದೆ ಎಂದು ಅಂದಾಜಿಸಿದ್ದ ನಿರುದ್ಯೋಗ ಕುರಿತು ರಾಷ್ಟ್ರೀಯ ಮಾದರಿ ಸರ್ವೆ ಕಚೇರಿಯ ಸಮೀಕ್ಷೆಯನ್ನು ಎದುರಿಸಲು ಈ ಅಂಕಿಅಂಶಗಳನ್ನು ಬಳಸಿಕೊಳ್ಳಲು ಸರಕಾರವು ಯೋಜಿಸಿತ್ತು.

ಮುದ್ರಾ ಯೋಜನೆಯನ್ನು 2015ರಲ್ಲಿ ಆರಂಭಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X