Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಯ್ಕೆಗಾರರ ಜತೆಗೆ ವಾಗ್ವಾದ ಹುದ್ದೆ...

ಆಯ್ಕೆಗಾರರ ಜತೆಗೆ ವಾಗ್ವಾದ ಹುದ್ದೆ ಕಳೆದುಕೊಂಡ ಬಂಗಾರ್

ವಾರ್ತಾಭಾರತಿವಾರ್ತಾಭಾರತಿ4 Sept 2019 11:11 PM IST
share
ಆಯ್ಕೆಗಾರರ ಜತೆಗೆ ವಾಗ್ವಾದ ಹುದ್ದೆ ಕಳೆದುಕೊಂಡ ಬಂಗಾರ್

ಮುಂಬೈ, ಸೆ.4: ಆಯ್ಕೆಗಾರರ ಜತೆ ವಾಗ್ವಾದ ನಡೆಸಿದ ತಪ್ಪಿಗೆ ಸಂಜಯ್ ಬಂಗಾರ್ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಹುದ್ದೆ ಕಳೆದುಕೊಂಡಿ ದ್ದಾರೆ ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

 ಮುಂಬರುವ ತವರು ಸರಣಿಗೆ ಟೀಮ್ ಇಂಡಿಯಾಕ್ಕೆ ಹೊಸ ಬ್ಯಾಟಿಂಗ್ ಕೋಚ್ ನೇಮಕವಾಗಿದೆ. ಈ ಹಿಂದೆ ಬ್ಯಾಟಿಂಗ್ ಕೋಚ್ ಆಗಿದ್ದ ಸಂಜಯ್ ಬಂಗಾರ್ ಜಾಗಕ್ಕೆ ವಿಕ್ರಮ್ ಠಾಥೋಡ್ ನೇಮಕಗೊಂಡಿದ್ದಾರೆ.

  

 ಪ್ರಧಾನ ಕೋಚ್, ಬ್ಯಾಟಿಂಗ್, ಫೀಲ್ಡಿಂಗ್, ಬೌಲಿಂಗ್ ಕೋಚ್ ಅವಧಿ ವೆಸ್ಟ್ ಇಂಡೀಸ್ ಪ್ರವಾಸ ಸರಣಿ ತನಕ ವಿಸ್ತರಣೆಯಾಗಿತ್ತು. ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಪ್ರಧಾನ ಕೋಚ್ ಆಗಿ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಆಗಿ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆಗಿ ಆರ್.ಶ್ರೀಧರ್ ಪುನರಾಯ್ಕೆಗೊಂಡಿದ್ದರು. ಆದರೆ ಬ್ಯಾಟಿಂಗ್ ಕೋಚ್ ಮಾತ್ರ ಬದಲಾವ ಣೆಯಾಗಿತ್ತು. ಸಂಜಯ್ ಬಂಗಾರ್ ಬ್ಯಾಟಿಂಗ್ ಹುದ್ದೆ ಕಳೆದುಕೊಂಡ ಕಾರಣ ಮಾತ್ರ ಈ ವರೆಗೂ ನಿಗೂಢವಾಗಿತ್ತು. ಪ್ರಧಾನ ಕೋಚ್ ಆಯ್ಕೆಯನ್ನು ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದ ಸಮಿತಿ ನಡೆಸಿತ್ತು. ಆದರೆ ಸಹಾಯಕ ಕೋಚ್‌ಗಳ ಆಯ್ಕೆಯ ಜವಾಬ್ದಾರಿಯನ್ನು ರಾಷ್ಟ್ರೀಯ ಆಯ್ಕೆ ಸಮಿತಿಗೆ ಬಿಸಿಸಿಐ ವಹಿಸಿಕೊಟ್ಟಿತ್ತು.

     ಭಾರತ ತಂಡದ ಮಧ್ಯಮ ಸರದಿಯ ವೈಫಲ್ಯವನ್ನು ಸರಿಪಡಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮತ್ತು ನ್ಯೂಝಿಲ್ಯಾಂಡ್ ವಿರುದ್ಧ ಕಳೆದ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಸಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆಯ್ಕೆ ಸಮಿತಿ ಬಂಗಾರ್ ಒಪ್ಪಂದವನ್ನು ಮುಂದುವರಿಸದಿರುವ ಬಗ್ಗೆ ಚಿಂತನೆ ನಡೆಸಿತ್ತು. ಈ ವಿಚಾರವನ್ನು ಅರಿತು ಕೊಂಡಿದ್ದ ಸಂಜಯ್ ಬಂಗಾರ್ ಅವರು ಸಂಜೆ ಹೊತ್ತಿಗೆ ಕೋಚ್‌ಗಳ ಸಂದರ್ಶನ ನಡೆಸುತ್ತಿದ್ದ ಆಯ್ಕೆ ಸಮಿತಿ ಸದಸ್ಯ ದೇವಾಂಗ್ ಗಾಂಧಿ ಕೊಠಡಿಯ ಬಾಗಿಲನ್ನು ಬಡಿದು ಒಳನುಗ್ಗಿ ಅವರಲ್ಲಿ ವಾಗ್ವಾದ ನಡೆಸಿದ್ದರು. ಬ್ಯಾಟಿಂಗ್ ಕೋಚ್ ಹುದ್ದೆಯಿಂದ ತನ್ನನ್ನು ಬದಲಾಯಿಸುವುದರ ವಿರುದ್ಧ ಎಚ್ಚರಿಕೆ ನೀಡಿ ಬಂಗಾರ್ ಹೊರ ಬಂದಿದ್ದರು ಎನ್ನಲಾಗಿದೆ.    ಬಂಗಾರ್ ಅಶಿಸ್ತಿನ ವರ್ತನೆಗಾಗಿ ಬ್ಯಾಟಿಂಗ್ ಕೋಚ್ ಹುದ್ದೆಯನ್ನು ಕಳೆದುಕೊಂಡಿದ್ದರು ಎಂದು ವರದಿ ತಿಳಿಸಿದೆ. ಬಂಗಾರ್ ನಡವಳಿಕೆ ಸರಿ ಇರಲಿಲ್ಲ. ಈ ಹಿಂದೆಯೂ ಅವರ ವಿರುದ್ಧ ಹಲವು ಬಾರಿ ಬಿಸಿಸಿಐ ಆಡಳಿತಗಾರರ ಸಮಿತಿಗೆ ದೂರು ರವಾನೆಯಾಗಿತ್ತು. ಈ ಕಾರಣದಿಂದಾಗಿ ಬಂಗಾರ್ ಬದಲಾವಣೆಗೆ ಬಿಸಿಸಿಐ ನಿರ್ಧಾರ ಕೈಗೊಂಡಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X