Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಟಿವಿ ವಿರುದ್ಧ ‘ಸೆಬಿ’ ಆದೇಶ...

ಎನ್‌ಡಿಟಿವಿ ವಿರುದ್ಧ ‘ಸೆಬಿ’ ಆದೇಶ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ5 Sept 2019 10:23 PM IST
share
ಎನ್‌ಡಿಟಿವಿ ವಿರುದ್ಧ ‘ಸೆಬಿ’ ಆದೇಶ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಮುಂಬೈ,ಸೆ.5: ನ್ಯೂ ಡೆಲ್ಲಿ ಟೆಲಿವಿಶನ್ ಲಿ. (ಎನ್‌ಡಿಟಿವಿ) ವಿರುದ್ಧ ಭಾರತೀಯ ಭದ್ರತೆ ಮತ್ತು ವಿನಿಮಯ ಮಂಡಳಿ (ಸೆಬಿ) ಜಾರಿ ಮಾಡಿರುವ ಆದೇಶವನ್ನು ಬಾಂಬೆ ಉಚ್ಚ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.

ಭದ್ರತೆ ಒಪ್ಪಂದ (ನಿಯಂತ್ರಣ) ಕಾಯ್ದೆ, 1956ಅನ್ನು ಉಲ್ಲಂಘಿಸಿದ ಕಾರಣಕ್ಕೆ ಎನ್‌ಡಿಟಿವಿ ವಾಹಿನಿಯ ವಿರುದ್ಧ ‘ಸೆಬಿ’ ಕಾನೂನು ಕ್ರಮ ತೆಗೆದುಕೊಂಡ ಹಿನ್ನೆಲೆಯಲ್ಲಿ ಪರಿಹಾರ ಅರ್ಜಿಯನ್ನು ದಾಖಲಿಸಲು ನೀಡಿರುವ ಸಮಯವನ್ನು ವಿಸ್ತರಿಸಬೇಕೆಂದು ಕೋರಿ ವಾಹಿನಿ ಮಾಡಿದ ಮನವಿಯನ್ನು ಸೆಬಿ ತಿರಸ್ಕರಿಸಿ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರಾದ ಅಖಿಲ್ ಕುರೇಶಿ ಮತ್ತು ಎಸ್.ಜೆ ಕಾತಾವಾಲ ಅವರ ನ್ಯಾಯಪೀಠ, ಅವಧಿ ವಿಸ್ತರಣೆ ಕೋರಿ ಎನ್‌ಡಿಟಿವಿ ಸಲ್ಲಿಸಿರುವ ಅರ್ಜಿ ವಿವರಾತ್ಮಕ ಮತ್ತು ಸಮರ್ಥವಾಗಿದೆ ಎಂದು ತಿಳಿಸಿದೆ.

ಪರಿಹಾರ ಅರ್ಜಿಗಳನ್ನು ದಾಖಲಿಸಲು ಅವಧಿ ವಿಸ್ತರಣೆ ಮಾಡುವಂತೆ ಕೋರಿ ಎನ್‌ಡಿಟಿವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ತಿರಸ್ಕರಿಸಿದ ‘ಸೆಬಿ’ ಆಗಸ್ಟ್ 23, 2017 ಮತ್ತು ಆಗಸ್ಟ್ 31,2017ರ ಆದೇಶಗಳನ್ನು ಪ್ರಶ್ನಿಸಿ ವಾಹಿನಿ 2018ರಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಫೆಬ್ರವರಿ 21, 2014ರಂದು ನೀಡಲಾದ ತೆರಿಗೆ ಮೌಲ್ಯಮಾಪನ ಆದೇಶದಲ್ಲಿ ಕಂಡುಬಂದಂತೆ 2009-10ರಲ್ಲಿ ಎನ್‌ಡಿಟಿವಿ ಸ್ವೀಕರಿಸಿದ್ದ 450 ಕೋಟಿ ರೂ. ಮೊತ್ತಕ್ಕೆ ತೆರಿಗೆ ಪಾವತಿಸಿಲ್ಲ. ಆಮೂಲಕ ಒಪ್ಪಂದದ 36ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ‘ಸೆಬಿ’ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎನ್‌ಡಿಟಿವಿ ಪರ ವಾದಿಗಳು, “ನಾವು ಕಾನೂನು ಸಲಹೆಯನ್ನು ಪಡೆದಿದ್ದೆವು ಮತ್ತು ಒಪ್ಪಂದದ 36ನೇ ವಿಧಿಯಡಿ ತೆರಿಗೆ ವ್ಯತ್ಯಾಸದ ಬಗ್ಗೆ ತಿಳಿಸುವ ಅಗತ್ಯವಿಲ್ಲ ಎಂದು ಭಾವಿಸಿದ್ದೆವು” ಎಂದು ತಿಳಿಸಿದ್ದರು.

ಎನ್‌ಡಿಟಿವಿ ಪರ ವಾದಿಸಿದ ಫರಿಶ್ತೆ ಸೇತ್ನ ಮತ್ತು ಅಧಿರಾಜ್ ಮಲ್ಹೋತ್ರ, ‘ಸೆಬಿ’ ತಿಳಿಸಿರುವಂತೆ ಎನ್‌ಡಿಟಿವಿ ತೆರಿಗೆ ಪಾವತಿಯ ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ. ಅರ್ಜಿ ಸಲ್ಲಿಸಲು ಸಮಯಾವಕಾಶ ಕೋರಿ ಕಕ್ಷಿದಾರರು ಸಲ್ಲಿಸಿರುವ ಮನವಿ ಸಂಪೂರ್ಣ ಮತ್ತು ಸಮರ್ಥವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X