Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಈ ಮೊಬೈಲ್ ಆ್ಯಪ್ ಅಸ್ತಮಾ ಸಮಸ್ಯೆಯನ್ನು...

ಈ ಮೊಬೈಲ್ ಆ್ಯಪ್ ಅಸ್ತಮಾ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ

ವಾರ್ತಾಭಾರತಿವಾರ್ತಾಭಾರತಿ5 Sept 2019 11:03 PM IST
share
ಈ ಮೊಬೈಲ್ ಆ್ಯಪ್ ಅಸ್ತಮಾ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ

ಯುರೋಪಿಯನ್ ರೆಸ್ಪಿರೇಟರಿ ಜರ್ನಲ್‌ನಲ್ಲಿ ಪ್ರಕಟಗೊಂಡಿರುವ ಇತ್ತೀಚಿನ ಅಧ್ಯಯನ ವರದಿಯಂತೆ ಅಸ್ತಮಾ ಸಮಸ್ಯೆಯನ್ನು ನಿಯಂತ್ರಿಸಬಲ್ಲ ಮೊಬೈಲ್ ಆ್ಯಪ್‌ವೊಂದನ್ನು ರೂಪಿಸಲಾಗಿದೆ. ಈ ಆ್ಯಪ್ ಮೊದಲು ವ್ಯಕ್ತಿಯ ಶ್ವಾಸಕೋಶಗಳ ಕಾರ್ಯ ನಿರ್ವಹಣೆಯನ್ನು ಲೆಕ್ಕ ಹಾಕುತ್ತದೆ, ಬಳಿಕ ವೈದ್ಯರಿಂದ ಸೂಚಿತ ಚಿಕಿತ್ಸೆಯ ಬಗ್ಗೆ ಯಂತ್ರಸೃಷ್ಟಿತ ಶಿಫಾರಸಿನ ಮೂಲಕ ಮರುಮಾಹಿತಿಯನ್ನು ನೀಡುತ್ತದೆ.

ಆಗಾಗ್ಗೆ ಅನಿಯಂತ್ರಿತ ಅಸ್ತಮಾಕ್ಕೊಳಗಾಗುವ ವ್ಯಕ್ತಿಗಳು ಅಸ್ತಮಾ ದಾಳಿಗಳು ಅಥವಾ ಉಸಿರಾಟದ ತೊಂದರೆಗಳನ್ನು ಅನುಭವಿಸುತ್ತಾರೆ. ಸಾಮಾನ್ಯವಾಗಿ ಸೂಕ್ತವಲ್ಲದ ಔಷಧಿಗಳ ಸೇವನೆ ಅಥವಾ ರೋಗದ ಬಗ್ಗೆ ಸಾಕಷ್ಟು ಕಾಳಜಿ ವಹಿಸದಿರುವುದು ಇಂತಹ ಸ್ಥಿತಿಗೆ ಕಾರಣವಾಗುತ್ತದೆ. ಲಕ್ಷಣಗಳು ಮತ್ತು ಶ್ವಾಸಕೋಶಗಳ ಕಾರ್ಯ ನಿರ್ವಹಣೆಯ ಆಧಾರದಲ್ಲಿ ಸ್ಮಾರ್ಟ್‌ಫೋನ್‌ನಲ್ಲಿ ಕೆಲಸ ಮಾಡುವ ಚಿಕಿತ್ಸೆ ಹೊಂದಾಣಿಕೆ ಕ್ರಮಾವಳಿ ವ್ಯವಸ್ಥೆಯು ಅನಿಯಂತ್ರಿತ ಅಸ್ತಮಾದ ಸಮಸ್ಯೆಯನ್ನು ನಿರ್ವಹಿಸಲು ನೆರವಾಗುತ್ತದೆ ಎನ್ನುವುದನ್ನು ಸ್ವೀಡನ್‌ನ ಕರೊಲಿಂಸ್ಕಾ ಇನ್‌ಸ್ಟಿಟ್ಯೂಟ್‌ನ ಸಂಶೋಧಕರು ನಡೆಸಿದ ಅಧ್ಯಯನವು ತೋರಿಸಿದೆ.

ಈ ಆ್ಯಪ್ ಬಳಕೆ ತುಂಬ ಸುಲಭವಾಗಿದೆ.

ಶ್ವಾಸಕೋಶಗಳ ಕಾರ್ಯ ನಿರ್ವಹಣೆಯನ್ನು ಅಳೆಯಲು ಸ್ಮಾರ್ಟ್‌ಫೋನ್‌ನ್ನು ಉಸಿರಾಡಿಸಿದ ಮತ್ತು ಹೊರಕ್ಕೆ ಬಿಟ್ಟ ವಾಯುವಿನ ಪ್ರಮಾಣವನ್ನು ಲೆಕ್ಕ ಹಾಕಲು ಬಳಸುವ ನಿಸ್ತಂತು ಸ್ಪೈರೊಮೀಟರ್‌ಗೆ ಸಂಪರ್ಕಿಸಲಾಗುತ್ತದೆ. ಆ್ಯಪ್ ವ್ಯಕ್ತಿಯ ಉಸಿರಾಟ ಲಕ್ಷಣಗಳನ್ನು ದಾಖಲಿಸಿಕೊಂಡು ,ಬಳಿಕ ಸಾಧ್ಯವಿರುವ ಚಿಕಿತ್ಸೆಯನ್ನು ಸೂಚಿಸಿ ಸ್ವಯಂಚಾಲಿತ ಮರುಮಾಹಿತಿಯನ್ನು ಒದಗಿಸುತ್ತದೆ.

ಈ ಆ್ಯಪ್‌ನ್ನು ‘ ಅಸ್ತಮಾ ಟ್ಯೂನರ್ ’ಎಂದು ಹೆಸರಿಸಲಾಗಿದ್ದು, ಇದು ಅಸ್ತಮಾ-ಕಾಳಜಿ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಶ್ವಾಸಕೋಶ ಕಾರ್ಯ ನಿರ್ವಹಣೆ ಮತ್ತು ಅಸ್ತಮಾ ಲಕ್ಷಣಗಳನ್ನು ವಿಶ್ಲೇಷಿಸುತ್ತದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಬ್ಯೋರ್ನ್ ನಾರ್ಡ್ಲಂಡ್ ವರದಿಯಲ್ಲಿ ತಿಳಿಸಿದ್ದಾರೆ.

 ಈ ಆ್ಯಪ್‌ನ ಬಳಕೆದಾರರು ಈ ಪ್ರಕ್ರಿಯೆಗೆ ಬಳಸಲಾಗುವ ಇನ್‌ಹೇಲರ್‌ನ ಚಿತ್ರವನ್ನೂ ಪಡೆಯುತ್ತಾರೆ. ರೋಗಿಗೆ ಅಗತ್ಯವಿರುವ ಔಷಧಿಯ ಪ್ರಮಾಣವನ್ನು ಹೆಚ್ಚಿಸಬೇಕೇ ಅಥವಾ ತಗ್ಗಿಸಬೇಕೇ ಅಥವಾ ಯಥಾಸ್ಥಿತಿಯನ್ನು ಮುಂದುವರಿಸಬೇಕೇ ಎನ್ನುವುದು ಸೇರಿದಂತೆ ಇದರೊಂದಿಗೆ ನೀಡಲಾಗಿರುವ ನಿರ್ದೇಶಗಳನ್ನು ಆದ್ಯಂತ ಪಾಲಿಸಬೇಕಾಗುತ್ತದೆ.

ಆ್ಯಪ್‌ನೊಂದಿಗೆ ಸಂಪರ್ಕಿಸಲಾಗಿರುವ ನಿಸ್ತಂತು ಸ್ಪೈರೊಮೀಟರ್‌ನ ಮೂಲಕ ಶ್ವಾಸಕೋಶದ ಕಾರ್ಯ ನಿರ್ವಹಣೆಯನ್ನು ಅಳೆಯಲು ಅಸ್ತಮಾ ಟ್ಯೂನರ್ ಅವಕಾಶ ಕಲ್ಪಿಸುತ್ತದೆ. ಅನಿಯಂತ್ರಿತ ಅಸ್ತಮಾದಿಂದ ನರಳುತ್ತಿದ್ದ ಆರು ವರ್ಷ ಪ್ರಾಯಕ್ಕಿಂತ ಹೆಚ್ಚಿನ 77 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಹದಿಹರೆಯದವರಾಗಿದ್ದರು. ರೋಗದ ಸಾಂಪ್ರದಾಯಿಕ ನಿರ್ವಹಣೆಗೆ ಹೋಲಿಸಿದರೆ ಡಿಜಿಟಲ್ ಸಾಧನವನ್ನು ಬಳಸಿದವರಲ್ಲಿ ಅಸ್ತಮಾ ಲಕ್ಷಣಗಳ ಇಳಿಕೆಯ ಪ್ರಮಾಣ ಹೆಚ್ಚಾಗಿತ್ತು. ಕನಿಷ್ಠ ವಾರಕ್ಕೊಮ್ಮೆ ಡಿಜಿಟಲ್ ಸಾಧನವನ್ನು ಬಳಸಿದ್ದ ವಯಸ್ಕರೂ ತಮ್ಮ ಔಷಧಿಗಳನ್ನು ತೆಗೆದುಕೊಳ್ಳುವುದನ್ನು ಚೆನ್ನಾಗಿ ನೆನಪಿಟ್ಟುಕೊಂಡಿದ್ದರು ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X