ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ: ಆರೋಪಿ ಬಂಧನ
![ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ: ಆರೋಪಿ ಬಂಧನ ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ: ಆರೋಪಿ ಬಂಧನ](https://www.varthabharati.in/sites/default/files/images/articles/2019/09/5/208619-1567705263.jpg)
ಬೆಂಗಳೂರು, ಸೆ.5: ಕಾನೂನು ಬಾಹಿರವಾಗಿ ಹುಕ್ಕಾ ಸೇದಲು ಅಡ್ಡೆ ಮಾಡಿಕೊಂಡಿದ್ದ ಜಾಗದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಯೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುನೇಶ್ವರ ಬ್ಲಾಕ್ನ ನಿವಾಸಿ ರಂಗಸ್ವಾಮಿ(29) ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.
ಕಾನೂನು ಬಾಹಿರವಾಗಿ ಹುಕ್ಕಾ ಲಾಂಜ್ಗಳನ್ನು ತೆರೆದು ಯಾವುದೇ ರೀತಿಯ ನಿಯಮಗಳನ್ನು ಪಾಲಿಸದೇ ಹುಕ್ಕಾ ಸೇದಲು ಅವಕಾಶ ಮಾಡಿಕೊಟ್ಟು ಅಕ್ರಮ ಚಟುವಟಿಕೆಗಳ ಅಡ್ಡೆಗಳಾಗಿ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಲಕ ಸುನೀಲ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಈ ಸಂಬಂಧ ಅಶೋಕನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story