Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭದ್ರಾ ಡ್ಯಾಂ ಬಳಿ ಗಾರ್ಡನ್ ನಿರ್ಮಿಸಲು...

ಭದ್ರಾ ಡ್ಯಾಂ ಬಳಿ ಗಾರ್ಡನ್ ನಿರ್ಮಿಸಲು ಚಿಂತನೆ: ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ

ವಾರ್ತಾಭಾರತಿವಾರ್ತಾಭಾರತಿ6 Sept 2019 11:53 PM IST
share
ಭದ್ರಾ ಡ್ಯಾಂ ಬಳಿ ಗಾರ್ಡನ್ ನಿರ್ಮಿಸಲು ಚಿಂತನೆ: ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ

ಚಿಕ್ಕಮಗಳೂರು. ಸೆ.6: ಭದ್ರಾ ಡ್ಯಾಂ ಸುತ್ತಮುತ್ತ ಪ್ರವಾಸೋದ್ಯಮಕ್ಕೆ ಉತ್ತಮ ವಾತಾವರಣವಿದ್ದು, ಇದನ್ನು ಅಭಿವೃದ್ಧಿಪಡಿಸಿಕೊಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಹೇಳಿದ್ದಾರೆ.

ತರೀಕೆರೆ ತಾಲೂಕು ಲಕ್ಕವಳ್ಳಿ ಭದ್ರಾ ಡ್ಯಾಂ ಭರ್ತಿಯಾದ್ದರಿಂದ ಇಂದು ಬಾಗಿನ ಮತ್ತು ಗಂಗಾಪೂಜೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಭದ್ರಾ ಡ್ಯಾಂ ಭರ್ತಿಯಾಗಿದ್ದರಿಂದ ಪ್ರತಿನಿತ್ಯ ಪ್ರವಾಸಿಗರ ಸಂಖ್ಯೆ ಹೆಚ್ಚುತಿದ್ದು ಪ್ರವಾಸೋದ್ಯಮಕ್ಕೆ ಸೂಕ್ತ ಸ್ಥಳವಾಗಿರುವುದರಿಂದ ಸಚಿವರು, ಸಂಸದರ ಗಮನ ಸೆಳೆಯಲಾಗಿದೆ ಎಂದು ಹೇಳಿದರು.

ಸಂಸದೆ ಶೋಭ ಕರಂದ್ಲಾಜೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿಯೊಬ್ಬರು ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗೃತಿ ವಹಿಸುವುದು ಅಗತ್ಯವಿದೆ. ಪ್ರತಿ ಹನಿ ನೀರು ಅಮೂಲ್ಯ. ಭೂಮಿ, ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಿನ ದಿನಗಳು ಕಠಿಣವಾಗದ ಪರಿಸ್ಥಿತಿ ಎದುರಾಗಲಿದ್ದು, ಈಗಿನಿಂದಲೇ ನಾವು ಎಚ್ಚರ ವಹಿಸುವುದು ಬಹಳ ಅಗತ್ಯ ಎಂದು ಹೇಳಿದರು.

ರಾಜ್ಯದಲ್ಲಿ ಎಲ್ಲಾ ಡ್ಯಾಂಗಳು ಭರ್ತಿಯಾಗಿದ್ದು, ಅತಿವೃಷ್ಠಿ ಸಂದರ್ಭದಲ್ಲಿ ಆದ ಮಳೆಯ ನೀರನ್ನು ಎಲ್ಲಾ ಕೆರೆಗಳಿಗೆ ತುಂಬಿಸುವ ಯೋಜನೆಗಳಿಗೆ ಇದುವರೆಗೂ ಯಾರೂ ಗಮನ ಹರಿಸಿಲ್ಲ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚು ಮಳೆ ಬಂದಂತಹ ಸಂದರ್ಭದಲ್ಲಿ ಮಳೆ ನೀರು ಆಯಾ ಭಾಗದ ಕೆರೆಗಳಿಗೆ ಸಂಗ್ರಹವಾಗುವಂತೆ ಯೋಜನೆ ರೂಪಿಸಲು ತಜ್ಞರ ಸಮಿತಿ ರಚಿಸಲಾಗಿದೆ ಎಂದ ಸಂಸದರು, ಈ ಬಗ್ಗೆ ಪ್ರಧಾನ ಮಂತ್ರಿಗಳು ತುಂಬಾ ಉತ್ಸುಕರಾಗಿದ್ದಾರೆ. ದೇಶದಲ್ಲಿ ನದಿಗಳ ಜೋಡಣೆ ಯೋಜನೆ ತ್ವರಿತವಾಗಿ ಮಾಡಲು ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದರು. ಮೂಡಿಗೆರೆ ತಾಲೂಕಿನಲ್ಲಿ ಅತಿವೃಷ್ಠಿಯಿಂದ ಬಹಳಷ್ಟು ತೊಂದರೆಯಾಗಿದ್ದು, ಪರಿಸರ ಅಸಮತೋಲನದಿಂದ ಈ ರೀತಿಯ ವೈಪರಿತ್ಯಗಳು ಪರಿಸರದ ಮೇಲೆ ಆಗುತ್ತಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರಕ್ಕೆ ಪೂರಕ ಅಭಿವೃದ್ದಿಯನ್ನು ಮಾಡಬೇಕಗಿದೆ ಎಂದು ಹೇಳಿದರು.

ತರೀಕೆರೆ ಶಾಸಕ ಡಿ.ಎಸ್ ಸುರೇಶ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ತಾಲೂಕಿನಲ್ಲಿ ಬರಗಾಲವಿತ್ತು. ಕಳೆದ ಬಾರಿಯಿಂದ ಉತ್ತಮ ಮಳೆಯಾಗಿ ಎರಡನೇ ಬಾರಿಗೆ ಭದ್ರಾ ಡ್ಯಾಂಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಪ್ರತೀ ವರ್ಷ ನಡೆಯುವಂತಾಗಲಿ ಎಂದ ಅವರು, ಭದ್ರಾ ತುಂಬಿ ಹರಿಯುತ್ತಿರುವುದು ಈ ಭಾಗದ ರೈತರಿಗೆ ಅನುಕೂಲವಾಗಿದೆ. ತರೀಕೆರೆ, ಕಡೂರು ತಾಲೂಕು 900 ಕೋಟಿ ರೂ. ಗಳ ವೆಚ್ಚದಲ್ಲಿ ಎಂಬತ್ತು ಕೆರೆಗಳಿಗೆ ಭದ್ರಾ ಡ್ಯಾಂನಿಂದ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಭದ್ರಾ ಡ್ಯಾಂ ನೀರು ತರೀಕೆರೆ ತಾಲೂಕಿಗೆ ಹೆಚ್ಚು ಉಪಯೋಗವಾಗುತ್ತಿಲ್ಲ ಎಂಬ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಮುಂದಿನ ದಿನಗಳಲ್ಲಿ ಭದ್ರಾ ಡ್ಯಾಂ ನೀರು ತರೀಕೆರೆಗೆ ಹೆಚ್ಚು ಉಪಯೋಗವಾಗುವ ಯೋಜನೆಯನ್ನು ರೂಪಿಸಲಾಗುವುದು. ಭದ್ರಾ ಡ್ಯಾಂ ಅನ್ನು ಕೆ.ಆರ್.ಎಸ್ ಬೃಂದಾವನ ರೀತಿಯಲ್ಲಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಹಾಗೂ ನಮ್ಮ ಜಿಲ್ಲೆಯ ಸಚಿವರು, ಈ ಭಾಗದ ಜನಪ್ರತಿನಿಧಿಗಳೊಂದಿಗೆ ಸೇರಿ ಅಭಿವೃದ್ಧಿಪಡಿಸಲು ಹಾಗೂ ಡ್ಯಾಂ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಚೈತ್ರಶ್ರೀ ಮಾಲತೇಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ಪದ್ಮಾವತಿ ಸಂಜೀವ ಕುಮಾರ್ ಮಾತನಾಡಿದರು.

ಇದಕ್ಕೂ ಮುನ್ನ ಸಂಸದರು, ಶಾಸಕರು ಸೇರಿದಂತೆ ರಂಗೇನಹಳ್ಳಿ ಹಾಗೂ ಲಕ್ಕವಳ್ಳಿಯಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಕೆ.ಆರ್ ಆನಂದಪ್ಪ, ಉಪವಿಭಾಗಾಧಿಕಾರಿ ರೂಪ, ತಹಶೀಲ್ದಾರ್ ಧರ್ಮೋಜಿ ರಾವ್, ಮುಖಂಡ ಶಂಭೈನೂರು ಆನಂದಪ್ಪ ಹಾಗೂ ತರೀಕೆರೆ ತಾಲೂಕು ವಿವಿಧ ಜನಪ್ರತಿನಿಧಿಗಳು, ನೀರು ಬಳಕೆದಾರರು, ರೈತರ ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X