Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ...

ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ನಿಯಮಾವಳಿಗಳ ರಚನೆ: ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ7 Sept 2019 7:39 PM IST
share
ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ನಿಯಮಾವಳಿಗಳ ರಚನೆ: ಡಾ.ಕೆ.ಸುಧಾಕರ್

ಬೆಂಗಳೂರು, ಸೆ.7: ರಾಜ್ಯಾದ್ಯಂತ ಹಂತಹಂತವಾಗಿ ಪ್ಲಾಸ್ಟಿಕ್ ಅನ್ನು ನಿಷೇಧಿಸಲು ನಿಯಮಾವಳಿಗಳನ್ನು ರೂಪಿಸಿ ರಾಜ್ಯ ಸರಕಾರಕ್ಕೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಶನಿವಾರ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನದ ಅಂಗವಾಗಿ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ಗೂಬೆಗಳ ಮುಗ್ಧ ಲೋಕ ಎಂಬ ಛಾಯಾಚಿತ್ರ, ಸಾಕ್ಷಚಿತ್ರ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ. ಆದರೆ, ನಾವು ಅವರಿಗಿಂತಲೂ ಮೊದಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ನಿಟ್ಟಿನಲ್ಲಿ, ನಿಯಮಾವಳಿಗಳನ್ನು ರೂಪಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದೇವೆ. ಅಲ್ಲದೆ, ರಾಜ್ಯಾದ್ಯಂತ ಸಂಚಾರ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಾರ್ಯೋನ್ಮುಖರಾಗಿದ್ದೇವೆ ಎಂದರು.

ನಾವು ಇಂದು ಬಳಕೆ ಮಾಡುತ್ತಿರುವ ಪ್ಲಾಸ್ಟಿಕ್ ಸಾವಿರಾರು ಟನ್‌ಗಳಷ್ಟು ಸಮುದ್ರದ ಪಾಲಾಗುತ್ತಿದೆ. ಅಲ್ಲಿನ ಮೀನುಗಳು ಸೇರಿ ಹಲವು ಜಲಚರಗಳು ಪ್ಲಾಸ್ಟಿಕ್ ಸೇವಿಸಿ ಸಾಯುತ್ತಿವೆ. ಅಲ್ಲದೆ, ಸಮುದ್ರದ ಮೀನುಗಳು ಮನುಷ್ಯರು ತಿಂದು, ಕ್ಯಾನ್ಸರ್‌ರಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.

ಮಲೆನಾಡು, ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನ ತತ್ತರಿಸಿದರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬರದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಇದಕ್ಕೆಲ್ಲಾ ನಾವೆಲ್ಲರೂ ಸೇರಿ ಪರಿಸರಕ್ಕೆ ಮಾಡುತ್ತಿರುವ ಹಾನಿಯೇ ಕಾರಣವಾಗಿದೆ. ಆದುದರಿಂದಾಗಿ ನಾವು ಪ್ರಕೃತಿಯನ್ನು ನಮ್ಮ ಕುಟುಂಬಕ್ಕಿಂತ ಹೆಚ್ಚಾಗಿ ಪ್ರೀತಿಸಬೇಕು ಎಂದು ನುಡಿದರು.

ಬೆಂಗಳೂರು ನಗರ ಕಾಂಕ್ರೀಟ್ ಜಂಗಲ್ ಆಗಿದೆ. ಹಿಂದಿನ ದಿನಗಳಲ್ಲಿ ನಗರದಲ್ಲಿ ಸುಮಾರು 800-900 ಕೆರೆಗಳಿದ್ದವು. ಆದರೆ, ಈಗ ಎಲ್ಲವನ್ನೂ ಲೆಕ್ಕ ಹಾಕಿದರೂ 100-150 ಕೆರೆಗಳು ಸಿಗುವುದಿಲ್ಲ. ಎಲ್ಲ ಕಡೆ ಬಸ್ ನಿಲ್ದಾಣಗಳು, ದೊಡ್ಡ ದೊಡ್ಡ ಕಂಪೆನಿಗಳು ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಮಾತನಾಡಿ, ಪರಿಸರದ ಕುರಿತು, ಅಲ್ಲಿನ ಪ್ರಾಣಿ, ಪಕ್ಷಿಗಳ ಕುರಿತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಉದ್ಯಾನನಗರಿಯಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ನಗರವಾಗಿದೆ. ಮಾಲಿನ್ಯ ಅಧಿಕವಾಗುತ್ತಿದೆ ಎಂದ ಅವರು, ಹಿಂದೆ ಒಬ್ಬರಿಗೆ 7 ಮರಗಳಿದ್ದವು. ಆದರೆ, ಈಗ 17 ಜನರಿಗೆ ಒಂದು ಮರವಿದೆ ಎಂದರು.

ಇತ್ತೀಚಿಗೆ ಮಲೆನಾಡಿನಲ್ಲಿ ಆದ ಭೂ ಕುಸಿತ ಹಾಗೂ ಪ್ರಕೃತಿ ವಿಕೋಪಗಳಿಗೆ ಮಾನವ ನಿರ್ಮಿತ ವ್ಯವಸ್ಥೆಯೇ ಕಾರಣವಾಗಿದೆ. ಅರಣ್ಯದಲ್ಲಿ ಶೇ.25 ರಷ್ಟು ಬಿದಿರು, ಶೇ.50 ರಷ್ಟು ಹಣ್ಣು, ಹಂಪಲು ಬಿಡುವ ಮರಗಳನ್ನು ಬೆಳೆಸಬೇಕು. ಅಲ್ಲದೆ, ಪ್ರತಿ 2-3 ಕಿ.ಮೀ.ಗೆ ಒಂದು ಕೆರೆ ನಿರ್ಮಾಣದ ಅಗತ್ಯವಿದೆ. ಸರಕಾರಿ ಜಮೀನಿನಲ್ಲಿ ಅರಣ್ಯ ಬೆಳೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗೂಬೆ ವಿಜ್ಞಾನಿ ಡಾ.ಎರಿಕ್ ರಾಮಾನುಜಂ, ಛಾಯಾಗ್ರಾಹಕ ಸರವಣನ್ ಜನಕರಾಜನ್, ಈಶ್ವರ್ ಪ್ರಸಾದ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X