ಮಂಗಳೂರು ಎಪಿಎಂಸಿ ಮಾಜಿ ಉಪಾಧ್ಯಕ್ಷ ರತ್ನಾಕರ ನಿಧನ
ಮೂಡುಬಿದಿರೆ : ಮಂಗಳೂರು ಎಪಿಎಂಸಿ ಮಾಜಿ ಉಪಾಧ್ಯಕ್ಷ ಮಾಂಟ್ರಾಡಿ ಕೊಳೆಚ್ಚಾವು ರತ್ನಾಕರ ಪೂಜಾರಿ (50) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಶಿರ್ತಾಡಿಯಲ್ಲಿರುವ ಸೌಹಾರ್ದ ಫ್ರೆಂಡ್ಸ್ ಕ್ಲಬ್ ಸಹಿತ ವಿವಿಧ ಸಂಘಟನೆಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿ ಕೊಂಡಿದ್ದ ಅವರು ಪತ್ನಿ ಮತ್ತು ಓರ್ವ ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.
Next Story