Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯಾ ರೆಡ್ ದುಲೀಪ್ ಟ್ರೋಫಿ ಚಾಂಪಿಯನ್

ಇಂಡಿಯಾ ರೆಡ್ ದುಲೀಪ್ ಟ್ರೋಫಿ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ7 Sept 2019 11:22 PM IST
share
ಇಂಡಿಯಾ ರೆಡ್ ದುಲೀಪ್ ಟ್ರೋಫಿ ಚಾಂಪಿಯನ್

ಬೆಂಗಳೂರು, ಸೆ.7: ವಿದರ್ಭದ ಆಫ್ ಸ್ಪಿನ್ನರ್ ಅಕ್ಷಯ್ ವಾಖರೆ (5-13)ದಾಳಿಯ ನೆರವಿನಲ್ಲಿ ಇಂಡಿಯಾ ಗ್ರೀನ್ ತಂಡವನ್ನು 38 ರನ್‌ಗಳ ಅಂತರದಲ್ಲಿ ಬಗ್ಗು ಬಡಿದ ಇಂಡಿಯಾ ರೆಡ್ ದುಲೀಪ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದಿಲೀಪ್ ಟ್ರೋಫಿ ಫೈನಲ್‌ನ ಅಂತಿಮ ದಿನವಾಗಿರುವ ಶನಿವಾರ ಇಂಡಿಯಾ ಗ್ರೀನ್ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ ಇಂಡಿಯಾ ರೆಡ್ 39.5 ಓವರ್‌ಗಳಲ್ಲಿ 119 ರನ್‌ಗಳಿಗೆ ನಿಯಂತ್ರಿಸಿ ಗೆಲುವಿನ ನಗೆ ಬೀರಿತು.

ಇಂಡಿಯಾ ರೆಡ್ ಪರ ಶತಕ ದಾಖಲಿಸಿದ್ದ ಅಭಿಮನ್ಯು ಈಶ್ವರನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮೂರನೇ ದಿನದಾಟದಂತ್ಯಕ್ಕೆ 116 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 345 ರನ್ ಗಳಿಸಿದ್ದ ಇಂಡಿಯಾ ರೆಡ್ ಇಂದು ಬೆಳಗ್ಗೆ ಬ್ಯಾಟಿಂಗ್ ಮುಂದುವರಿಸಿ 43 ರನ್ ಸೇರಿಸುವಷ್ಟರಲ್ಲಿ ಆಲೌಟಾಗಿದೆ. ಜೈದೇವ್ ಉನಾದ್ಕಟ್ 32 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರೊಂದಿಗೆ 30 ರನ್ ಗಳಿಸಿ ಕ್ರೀಸ್‌ನಲ್ಲಿದ್ದ ಆದಿತ್ಯ ಸರ್ವಾಟೆ ಈ ಮೊತ್ತಕ್ಕೆ 8 ರನ್ ಸೇರಿಸಿ ಔಟಾದರು. ಅವೇಶ್ ಖಾನ್ 12 ರನ್ ಮತ್ತು ಸಂದೀಪ್ ವಾರಿಯರ್ 1 ರನ್ ಗಳಿಸಿ ಔಟಾದರು.

ಧರ್ಮೆಂದ್ರ ಸಿನ್ಹಾ ಜಡೇಜ ಮತ್ತು ಅಂಕಿತ್ ರಜಪೂತ್ ತಲಾ 3 ವಿಕೆಟ್, ತನ್ವೀರ್ ಉಲ್ ಹಕ್ 2 ವಿಕೆಟ್, ಮಾಯಾಂಕ್ ಮರ್ಕೆಂಡೆ ಮತ್ತು ಧ್ರುವ್ ಶೋರೆ ತಲಾ 1 ವಿಕೆಟ್ ಹಂಚಿಕೊಂಡರು.

ಗೆಲುವಿಗೆ 158 ರನ್ ಗಳಿಸಬೇಕಿದ್ದ ಇಂಡಿಯಾ ಗ್ರೀನ್ ತಂಡ ಅಕ್ಷಯ್ ವಾಖರೆ ಮತ್ತು ಅವೇಶ್ ಖಾನ್ ದಾಳಿಗೆ ತತ್ತರಿಸಿ ಬೇಗನೆ ಇನಿಂಗ್ಸ್ ಮುಗಿಸುವ ಮೂಲಕ ಗೆಲುವಿನ ಅವಕಾಶವನ್ನು ಕೈ ಚೆಲ್ಲಿತು.

ಸಿದ್ದೇಶ್ ಲಾಡ್ 42 ರನ್ ಗಳಿಸಿರುವುದು ತಂಡದ ಪರ ದಾಖಲಾಗಿರುವ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ನಾಯಕ ಫೈಝ್ ಫಝಲ್ 10ರನ್, ಅಕ್ಷತ್ ರೆಡ್ಡಿ 33 ರನ್ ಗಳಿಸಿದರು. ಧ್ರುವ್ 5ರನ್, ಆಕಾಶ್‌ದೀಪ್‌ನಾಥ್ 4ರನ್, ಅಕ್ಷಯ ವಾಡೇಕರ್ 7ರನ್, ಧರ್ಮೆಂದ್ರ ಜಡೇಜ 7ರನ್, ತನ್ವೀರ್ 4ರನ್, ರಾಜೇಶ್ ಮೊಹಾಂತಿ ಔಟಾಗದೆ 4 ರನ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X