Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಪ್ಪಂದರಹಿತ ಬ್ರೆಕ್ಸಿಟ್ ನಿಲ್ಲಿಸುವ...

ಒಪ್ಪಂದರಹಿತ ಬ್ರೆಕ್ಸಿಟ್ ನಿಲ್ಲಿಸುವ ಮಸೂದೆಗೆ ಬ್ರಿಟನ್ ಸಂಸತ್ತು ಅಂಗೀಕಾರ

ಪ್ರಧಾನಿ ಬೊರಿಸ್ ಜಾನ್ಸನ್‌ಗೆ ಹೊಸ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ7 Sept 2019 11:38 PM IST
share
ಒಪ್ಪಂದರಹಿತ ಬ್ರೆಕ್ಸಿಟ್ ನಿಲ್ಲಿಸುವ ಮಸೂದೆಗೆ ಬ್ರಿಟನ್ ಸಂಸತ್ತು ಅಂಗೀಕಾರ

ಲಂಡನ್, ಸೆ. 7: ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವುದನ್ನು (ಬ್ರೆಕ್ಸಿಟ್) ವಿಳಂಬಿಸುವಂತೆ ಪ್ರಧಾನಿ ಬೊರಿಸ್ ಜಾನ್ಸನ್‌ರನ್ನು ಬಲವಂತಪಡಿಸುವ ಕಾನೂನಿಗೆ ಬ್ರಿಟನ್‌ನ ಮೇಲ್ಮನೆ ಶುಕ್ರವಾರ ಅಂತಿಮ ಅಂಗೀಕಾರ ನೀಡಿದೆ. ಇದು ಅವಧಿಪೂರ್ವ ಚುನಾವಣೆ ನಡೆಯುವಂತೆ ನೋಡಿಕೊಳ್ಳುವಲ್ಲಿ ಪರದಾಡುತ್ತಿರುವ ಪ್ರಧಾನಿಗೆ ಮತ್ತೊಂದು ಹೊಸ ಹಿನ್ನಡೆಯಾಗಿದೆ.

ಮುಂದಿನ ತಿಂಗಳು ಐರೋಪ್ಯ ಒಕ್ಕೂಟದಿಂದ ವಿಚ್ಛೇದನಗೊಳ್ಳುವ ಮುನ್ನ ಅದರೊಂದಿಗೆ ಒಪ್ಪಂದವೊಂದಕ್ಕೆ ಬರಲು ಜಾನ್ಸನ್ ವಿಫಲರಾದರೆ, ಈಗಿನ ಅಕ್ಟೋಬರ್ 31ರ ಬ್ರೆಕ್ಸಿಟ್ ಗಡುವನ್ನು ಮುಂದೂಡುವಂತೆ ಈ ಮಸೂದೆ ನಿಗದಿಪಡಿಸುತ್ತದೆ.

ಈ ಮಸೂದೆಗೆ ರಾಣಿ ದ್ವಿತೀಯ ಎಲಿಝಬೆತ್ ಸಹಿ ಹಾಕಿದ ಬಳಿಕ ಅದು ಕಾನೂನಾಗುತ್ತದೆ.

ಬ್ರೆಕ್ಸಿಟನ್ನು ಮುಂದೂಡುವುದಕ್ಕಿಂತಲೂ ನಾನು ಸಾಯತ್ತೇನೆ ಎಂದು ಈಗಾಗಲೇ ಹೇಳಿರುವ ಜಾನ್ಸನ್ ಬ್ರಿಟನ್ ಸಂಸತ್ತಿಗೆ ಅವಧಿಪೂರ್ವ ಚುನಾವಣೆಯನ್ನು ನಡೆಸಲು ಉತ್ಸುಕರಾಗಿದ್ದಾರೆ. ಈ ಚುನಾವಣೆಯು ತನಗೆ ಒಪ್ಪಂದವಿದ್ದರೂ ಒಪ್ಪಂದವಿಲ್ಲದೆಯೂ ಬ್ರಿಟನನ್ನು ಐರೋಪ್ಯ ಒಕ್ಕೂಟದಿಂದ ಹೊರತರಲು ಜನಾದೇಶ ನೀಡುತ್ತದೆ ಎಂದು ಅವರು ನಂಬಿದ್ದಾರೆ.

ಅವರು ಶುಕ್ರವಾರ ಬೆಳಗ್ಗೆ ಸ್ಕಾಟ್‌ಲ್ಯಾಂಡ್‌ನಲ್ಲಿ ಮೀನುಗಾರರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. ಇಲ್ಲಿನ ಮೀನುಗಾರರು 2016ರ ಬ್ರೆಕ್ಸಿಟ್ ಜನಮತಗಣನೆಯಲ್ಲಿ ಬ್ರಿಟನ್ ಐರೋಪ್ಯ ಒಕ್ಕೂಟದಿಂದ ಹೊರಬರುವ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದರು.

 ಬ್ರಿಟನ್ ಸಂಸತ್ ಅಂಗೀಕರಿಸಿದ ಮಸೂದೆಯನ್ನು ಜಾನ್ಸನ್ ‘ಶರಣಾಗತಿ’ ಎಂದು ಬಣ್ಣಿಸಿದ್ದಾರೆ. ಇದು ಬ್ರೆಕ್ಸಿಟ್ ಒಪ್ಪಂದದಲ್ಲಿ ತಮಗೆ ಬೇಕಾದ ಶರತ್ತುಗಳನ್ನು ವಿಧಿಸಲು ಉಳಿದ 27 ಐರೋಪ್ಯ ಒಕ್ಕೂಟದ ನಾಯಕರಿಗೆ ಅವಕಾಶ ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

46 ವರ್ಷಗಳ ಕಾಲ ಐರೋಪ್ಯ ಒಕ್ಕೂಟದಲ್ಲಿದ್ದ ಬಳಿಕ, ಇದೀಗ ಬ್ರಿಟನ್ ಹೊರಬರುತ್ತಿದೆ.

ಇದಕ್ಕೂ ಮೊದಲು, ಮಂಗಳವಾರ ಬ್ರೆಕ್ಸಿಟ್ ಗಡುವನ್ನು ಮುಂದೂಡುವ ಮಸೂದೆಯನ್ನು ಹೌಸ್ ಆಫ್ ಕಾಮನ್ಸ್ ಅಂಗೀಕರಿಸಿತ್ತು. ಅಂದು ಪ್ರಧಾನಿ ಜಾನ್ಸನ್‌ರ ಕನ್ಸರ್ವೇಟಿವ್ ಪಕ್ಷದವರೇ ಆಗಿರುವ 21 ಬಂಡುಕೋರ ಸಂಸದರು ಮಸೂದೆ ಪರವಾಗಿ ಮತ ಹಾಕಿದ್ದರು.

ಆ ಬಂಡುಕೋರ ಸಂಸದರನ್ನು ಜಾನ್ಸನ್ ಉಚ್ಚಾಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X