Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ವಿಕ್ರಮ್ ಲ್ಯಾಂಡರ್' ಇರುವ ಸ್ಥಳದ ಬಗ್ಗೆ...

'ವಿಕ್ರಮ್ ಲ್ಯಾಂಡರ್' ಇರುವ ಸ್ಥಳದ ಬಗ್ಗೆ ಮಾಹಿತಿ ಸಿಕ್ಕಿದೆ: ಇಸ್ರೋ ಅಧ್ಯಕ್ಷ ಕೆ.ಶಿವನ್

ವಾರ್ತಾಭಾರತಿವಾರ್ತಾಭಾರತಿ8 Sept 2019 2:29 PM IST
share
ವಿಕ್ರಮ್ ಲ್ಯಾಂಡರ್ ಇರುವ ಸ್ಥಳದ ಬಗ್ಗೆ ಮಾಹಿತಿ ಸಿಕ್ಕಿದೆ: ಇಸ್ರೋ ಅಧ್ಯಕ್ಷ ಕೆ.ಶಿವನ್

ಹೊಸದಿಲ್ಲಿ,ಸೆ.8: ಚಂದ್ರಯಾನ-2ರ ಸಾಫ್ಟ್ ಲ್ಯಾಂಡಿಂಗ್‌ನ ಕೊನೆಯ ಕ್ಷಣಗಳಲ್ಲಿ ಭೂಮಿಯೊಂದಿಗೆ ಸಂಪರ್ಕ ಕಳೆದುಕೊಂಡಿದ್ದ ಲ್ಯಾಂಡರ್ ವಿಕ್ರಮ್ ಚಂದ್ರನ ಮೇಲ್ಮೈ ಮೇಲಿರುವುದು ಪತ್ತೆಯಾಗಿದ್ದು,ಚಂದ್ರನ ಕಕ್ಷೆಯನ್ನು ಸುತ್ತುತ್ತಿರುವ ಆರ್ಬಿಟರ್ ವಿಕ್ರಮ್‌ನ ಚಿತ್ರಗಳನ್ನು ನಿಯಂತ್ರಣ ಕೇಂದ್ರಕ್ಕೆ ರವಾನಿಸಿದೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್ ಅವರು ರವಿವಾರ ಪ್ರಕಟಿಸಿದ್ದಾರೆ. ಆದರೆ,ಈವರೆಗೂ ವಿಕ್ರಮ್ ಜೊತೆ ಸಂವಹನ ಸಾಧ್ಯವಾಗಿಲ್ಲ ಮತ್ತು ಅದರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಲ್ಯಾಂಡರ್ ನಿಧಾನ ಗತಿಯಲ್ಲಿ ಇಳಿಯಬೇಕಿತ್ತು. ಆದರೆ ಸಂಪರ್ಕ ಕಳೆದುಕೊಂಡ ಬಳಿಕ ಅದು ವೇಗವಾಗಿ ಚಂದ್ರನ ಮೇಲ್ಮೈ ಮೇಲೆ ಇಳಿದಿರಬೇಕು ಎಂದು ಶಿವನ್ ಹೇಳಿದರಾದರೂ,‘ಈಗಲೇ ನಿಖರವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ,ನಾವು ವಿಕ್ರಮ್ ಜೊತೆ ಸಂಪರ್ಕಕ್ಕಾಗಿ ಪ್ರಯತ್ನಿಸುತ್ತಿದ್ದೇವೆ ’ ಎಂದರು.

 ಶನಿವಾರ ಬೆಳಗಿನ ಜಾವ ಈವರೆಗೂ ಯಾವುದೇ ದೇಶವು ಅನ್ವೇಷಿಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಬೇಕಿದ್ದ ಲ್ಯಾಂಡರ್ ತನ್ನ ಗುರಿಯನ್ನು ಸಾಧಿಸುವ ಕೆಲವೇ ಕ್ಷಣಗಳಿಗೆ ಮುನ್ನ ಚಂದ್ರನ ಮೇಲ್ಮೈನಿಂದ ಕೇವಲ 2.1 ಕಿ.ಮೀ. ದೂರವಿರುವಾಗ ಭೂಕೇಂದ್ರದೊಡನೆ ಸಂಪರ್ಕವನ್ನು ಕಳೆದುಕೊಂಡಿತ್ತು.

ಚಂದ್ರಯಾನ-2ರ ಆರ್ಬಿಟರ್ ಅಥವಾ ಕಕ್ಷೆಗಾಮಿಯು ಈಗಾಗಲೇ ಚಂದ್ರನ ಉದ್ದೇಶಿತ ಕಕ್ಷೆಯನ್ನು ಪರಿಭ್ರಮಿಸುತ್ತಿದೆ. ಸದ್ಯಕ್ಕೆ ಹೆಚ್ಚುವರಿ ಇಂಧನವನ್ನು ಹೊಂದಿರುವ ಅದರ ಜೀವಿತಾವಧಿ 7.5 ವರ್ಷಗಳೆಂದು ಅಂದಾಜಿಸಲಾಗಿದೆ.

 ಆರ್ಬಿಟರ್ ಹೈ ರೆಸೊಲ್ಯೂಷನ್ ಚಿತ್ರಗಳನ್ನು ಕಳುಹಿಸಲಿದೆ ಮತ್ತು ಚಂದ್ರನ ಹುಟ್ಟಿನ ಕುರಿತು ಅಧ್ಯಯನ ಹಾಗೂ ಅದರ ಧ್ರುವೀಯ ಪ್ರದೇಶದಲ್ಲಿ ಖನಿಜಗಳು ಮತ್ತು ನೀರಿನ ಮ್ಯಾಪಿಂಗ್ ಕಾರ್ಯಗಳಿಗೆ ನೆರವಾಗಲಿದೆ ಎಂದು ಇಸ್ರೋ ರವಿವಾರ ಬೆಳಿಗ್ಗೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಜುಲೈ 22ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ ಧವನ್ ಅಂತರಿಕ್ಷ ಕೇಂದ್ರದಿಂದ ಚಂದ್ರಯಾನ-2 ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಸುಮಾರು 23 ದಿನಗಳ ಕಾಲ ಪೃಥ್ವಿಯ ಕಕ್ಷೆಯಲ್ಲಿ ಸುತ್ತುತ್ತಿದ್ದ ಚಂದ್ರಯಾನ-2 ಆ.14ರಂದು ಚಂದ್ರನತ್ತ ತನ್ನ ಪಯಣವನ್ನು ಆರಂಭಿಸಿತ್ತು. ಸೆ.2ರಂದು ತನ್ನ ಒಡಲಲ್ಲಿ ಪ್ರಜ್ಞಾನ್ ರೋವರ್‌ನೊಂದಿಗೆ ವಿಕ್ರಮ ಲ್ಯಾಂಡರ್ ಆರ್ಬಿಟರ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X