Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಜಾಸತ್ತೆಯ ಮೌಲ್ಯಕ್ಕಾಗಿ ಅಧಿಕಾರಿಶಾಹಿ...

ಪ್ರಜಾಸತ್ತೆಯ ಮೌಲ್ಯಕ್ಕಾಗಿ ಅಧಿಕಾರಿಶಾಹಿ ವಿರುದ್ಧ ಹೋರಾಟ ಅನಿವಾರ್ಯ: ಜಿ. ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ8 Sept 2019 3:35 PM IST
share
ಪ್ರಜಾಸತ್ತೆಯ ಮೌಲ್ಯಕ್ಕಾಗಿ ಅಧಿಕಾರಿಶಾಹಿ ವಿರುದ್ಧ ಹೋರಾಟ ಅನಿವಾರ್ಯ: ಜಿ. ರಾಜಶೇಖರ್

ಉಡುಪಿ, ಸೆ.8: ದೇಶದ ಮಾಧ್ಯಮಗಳಿಗೆ ಬಡವರ ನೋವು, ಹತಾಶೆ, ಅಳು ಕೇಳಿಸುತ್ತಿಲ್ಲ. ಮೋದಿ ಸರಕಾರ ಅಧಿಕಾರಕ್ಕೆ ಬಂದ ಜೊತೆಗೆ ಪತ್ರಿಕೋದ್ಯಮದ ಕರಾಳ ಅಧ್ಯಾಯ ಕೂಡ ಆರಂಭವಾಗಿದೆ. ಈ ಪ್ರಜಾಸತ್ತೆ ಹಾಗೂ ಮೌಲ್ಯಗಳು ಉಳಿಯಬೇಕಾದರೆ ಪ್ರಸ್ತುತ ಇರುವ ಅಧಿಕಾರಿಶಾಹಿ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆಂದು ಹಿರಿಯ ಚಿಂತಕ ಜಿ. ರಾಜಶೇಖರ್ ಹೇಳಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಹಾಗೂ ಗೌರಿ ಬಳಗ ಉಡುಪಿ ಜಿಲ್ಲೆ ಇದರ ವತಿಯಿಂದ ರವಿವಾರ ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಕಚೇರಿಯಲ್ಲಿ ಆಯೋಜಿಸಲಾದ ಗೌರಿ ಸಂಸ್ಮರಣೆ ಹಾಗೂ ಗೌರಿ ಬಳಗವನ್ನು ‘ನ್ಯಾಯ ಪಥ’ ವಾರಪತ್ರಿಕೆಯ ವಿವಿಧ ಸಂಚಿಕೆಗಳನ್ನು ಅನಾವರಣ ಗೊಳಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಈ ದೇಶದಲ್ಲಿ ಯಾವತ್ತೂ ಕೂಡ ನಿರಾಶಿತರಾಗಿರುವ ಬಡ ಜನರ ಸಂಕಷ್ಟ ಗಳು ಇದೀಗ ಇನ್ನಷ್ಟು ಜಾಸ್ತಿಯಾಗಿದೆ. ಎಲ್ಲ ಕಡೆ ಶ್ರೀಮಂತರ ದುರಾಹಂಕಾರ ಹೆಚ್ಚಾಗುತ್ತಿದೆ. ಕೊಬ್ಬಿದ ಶ್ರೀಮಂತರ ಹಾಗೂ ಅಟ್ಟಹಾಸದಲ್ಲಿ ಮೆರೆಯುತ್ತಿರುವ ಅಧಿಕಾರಿಶಾಹಿಗಳಿಂದ ಬಡವರ ಆಕ್ರಂದನ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಖೇಧ ವ್ಯಕ್ತಪಡಿಸಿದರು.

ಮೋದಿ ಸರಕಾರ ಆದಷ್ಟು ಬೇಗ ತೊಲಗಬೇಕು. ಜನ ವಿರೋಧಿಯಾಗಿರುವ ಮೋದಿ ಸರಕಾರ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಈ ಸರಕಾರ ಬೇಗ ತೊಲಗಿದಷ್ಟು ಪ್ರಜಾಸತ್ತೆ ಮೌಲ್ಯಗಳಿಗೆ ಅನುಕೂಲವಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೋರಾಟ ನಡೆಸಬೇಕಾಗಿದೆ ಎಂದು ಅವರು ತಿಳಿಸಿದರು.

ಗೌರಿ ಲಂಕೇಶ್ ತೀರಿ ಹೋದ ಬಳಿಕ ಬಹಳ ಸಮಯ ಶೂನ್ಯ ಕಾಡುತ್ತಿತ್ತು. ಕರ್ನಾಟಕ ಪತ್ರಿಕೋದ್ಯಮದಲ್ಲಿ ಇನ್ನೂ ಎಂದಿಗೂ ಗೌರಿ ಬಿಟ್ಟು ಹೋದ ಜಾಗ ವನ್ನು ತುಂಬಿಸಲು ಸಾಧ್ಯವಿಲ್ಲ ಎಂಬ ವಿಚಾರ ಆವರಿಸಿಕೊಂಡಿತ್ತು. ಇದೀಗ ಗೌರಿ ಬಳಗದ ಮೂಲಕ ಆ ನೋವು ಸ್ವಲ್ಪ ಮಟ್ಟಿಗೆ ನಿವಾರಣೆಯಾಗುವ ಆಶಾವಾದ ಕಂಡುಬರುತ್ತಿದೆ ಎಂದು ಅವರು ಹೇಳಿದರು.

ಗೌರಿ ಲಂಕೇಶ್ ಧರ್ಮ ನಿರಪೇಕ್ಷ ಧೋರಣೆಯ ಪರ ಧ್ವನಿ ಹಾಗೂ ಹೋರಾಟ ನಡೆಸುತ್ತಿದ್ದರು. ಅದೇ ಕಾರಣಕ್ಕೆ ಆಕೆ ಹುತಾತ್ಮರಾದರು. ಗೌರಿ ಹೋರಾಡಿದ ಮೌಲ್ಯಗಳಿಗೆ ನಮ್ಮನ್ನು ನಾವು ಅರ್ಪಿಸಿಕೊಳ್ಳುವುದೇ ಆಕೆಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ. ಆದುದರಿಂದ ಇದು ನೆನಪಿನ ದಿನ ಮಾತ್ರವಲ್ಲ, ಅರ್ಪಣೆಯ ಸಂಕಲ್ಪ ದಿನವೂ ಆಗಿದೆ. ಗೌರಿ ಹೋರಾಡಿದ ಮೌಲ್ಯಗಳಿಗೊಸ್ಕರ ನಾವು ಸಮರ್ಪಿಸಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಎ.ಕೆ.ಸುಬ್ಬಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಚಿಂತಕರಾದ ಹಯವದನ ಮೂಡಸಗ್ರಿ, ವರದ ರಾಜ ಬಿರ್ತಿ, ಸಂವರ್ತ್ ಸಾಹಿಲ್, ಹುಸೇನ್ ಕೋಡಿಬೆಂಗ್ರೆ, ಶಾರೂಕ್ ತೀರ್ಥಹಳ್ಳಿ ಗೌರಿ ಲಂಕೇಶ್‌ಗೆ ನುಡಿನಮನ ಸಲ್ಲಿಸಿದರು. 

ಹಿರಿಯ ಲೇಖಕ ಗೋಪಾಲ ಬಿ.ಶೆಟ್ಟಿ, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್ ಉಪಸ್ಥಿತರಿದ್ದರು. ವೇದಿಕೆಯ ಉಪಾಧ್ಯಕ್ಷ ಪ್ರೊ.ಫಣಿರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದ್ರೀಸ್ ಹೂಡೆ ವಂದಿಸಿದರು. ದಿನಕರ ಬೆಂಗ್ರೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X