Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೈತರನ್ನು ಉಗ್ರರೆಂದು ಬಿಂಬಿಸುತ್ತಿರುವ...

ರೈತರನ್ನು ಉಗ್ರರೆಂದು ಬಿಂಬಿಸುತ್ತಿರುವ ಭಾರತ ಸೇನೆ: ಪಾಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Sept 2019 10:53 PM IST
share
ರೈತರನ್ನು ಉಗ್ರರೆಂದು ಬಿಂಬಿಸುತ್ತಿರುವ ಭಾರತ ಸೇನೆ: ಪಾಕ್ ಆರೋಪ

  ಇಸ್ಲಾಮಾಬಾದ್,ಸೆ.8: ಪ್ರಮಾದವಶಾತ್ ಗಡಿನಿಯಂತ್ರಣ ರೇಖೆ ದಾಟಿದ್ದ ಪಾಕಿಸ್ತಾನದ ಇಬ್ಬರು ರೈತರನ್ನು ಭಯೋತ್ಪಾದಕ ಸಂಘಟನೆಯೊಂದರ ಸದಸ್ಯರೆಂಬುದಾಗಿ ಭಾರತದ ಸೇನೆಯು ತಪ್ಪಾಗಿ ಬಿಂಬಿಸುತ್ತಿರುವುದಾಗಿ ಪಾಕ್ ಸೇನೆ ಶನಿವಾರ ಆಪಾದಿಸಿದೆ.

  ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಭಾರತ ಸರಕಾರ ಆಗಸ್ಟ್ 5ರಂದು ರದ್ದುಪಡಿಸಿದ ಬಳಿಕ ಪಾಕಿಸ್ತಾನವು ಕಾಶ್ಮೀರ ಕಣಿವೆಗೆ ಹಲವಾರು ಭಯೋತ್ಪಾದಕರನ್ನು ನುಗ್ಗಿಸಲು ಯತ್ನಿಸುತ್ತಿದೆ ಎಂದು ಭಾರತೀಯ ಸೇನೆಯ 15 ಕಾರ್ಪ್ಸ್ ಪಡೆಯ ಲೆ.ಜನರಲ್ ಕೆ.ಜೆ.ಎಸ್.ದಿಲ್ಲೋನ್ ಸೆ.4ರಂದು ಶ್ರೀನಗರದಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಆರೋಪಿಸಿದ್ದರು.

  ಕಾಶ್ಮೀರದೊಳಗೆ ನುಸುಳಲು ವಿಫಲ ಯತ್ನ ನಡೆಸಿದ ಲಷ್ಕರೆ ತಯ್ಯೆಬಾ ಗುಂಪಿನ ಇಬ್ಬರು ಉಗ್ರರನ್ನು ನಾವು ಬಂಧಿಸಿದ್ದೇವೆ ಎಂದು ಅವರು ತಿಳಿಸಿದ್ದರು.

ಬಂಧಿತರು ವಿಚಾರಣೆಯ ವೇಳೆ ತಮ್ಮನ್ನು ರಾವಲ್ಪಿಂಡಿಯ ನಿವಾಸಿಗಳಾದ ಮುಹಮ್ಮದ್ ಖಲೀಲ್ ಹಾಗೂ ಮುಹಮ್ಮದ್ ನಝೀಮ್ ಎಂಬುದಾಗಿ ಗುರುತಿಸಿಕೊಂಡಿದ್ದಾರೆಂದು ಹೇಳಿರುವ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆಗೊಳಿಸಿತ್ತು.

  ಆದರೆ ಪಾಕ್ ಸೇನೆಯು ಭಾರತದ ಆರೋಪವನ್ನು ಅಲ್ಲಗಳೆದಿದೆ. ಎಲ್‌ಓಸಿಯಲ್ಲಿ ಬಂಧಿತರಾದ ಖಲೀಲ್ (30) ಹಾಗೂ ನಝೀಮ್ (21), ಪಾಕ್ ಆಕ್ರಮಿತ ಕಾಶ್ಮೀರದ ರೈತರಾಗಿದ್ದು ಅವರು ಹುಲ್ಲು ಕತ್ತರಿಸಲು ಹೋಗಿದ್ದಾಗ, ಪ್ರಮಾದವಶಾತ್ ಹಾಜಿಪುರ್ ಬಳಿ ಗಡಿನಿಯಂತ್ರಣ ರೇಖೆಯನ್ನು ದಾಟಿದ್ದಾರೆಂದು ಪಾಕ್ ಸೇನೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

  ಭಾರತ ಹಾಗೂ ಪಾಕ್ ಸೇನೆಗಳ ನಡುವೆ ಪ್ರತಿ ವಾರಕ್ಕೊಮ್ಮೆ ನಡೆಯುವ ಹಾಟ್‌ಲೈನ್ ಸಂಭಾಷಣೆಯಲ್ಲಿ ಇವರಿಬ್ಬರ ಬಂಧನದ ವಿಷಯದ ಬಗ್ಗೆ ಚರ್ಚಿಸಲಾಗಿತ್ತು. ಈ ಮಧ್ಯೆ ಕೆಲವು ಭಾರತೀಯ ಮಾಧ್ಯಮಗಳು, ಬಂಧಿತರು ನಿಷೇಧಿತ ಉಗ್ರಗಾಮಿ ಗುಂಪೊಂದರ ಸದಸ್ಯರೆಂದು ಆರೋಪಿಸಿದ್ದವು.

  ಉಭಯದೇಶಗಳ ನಡುವೆ ಮಾಹಿತಿ ಹಾಗೂ ವಾಸ್ತವಾಂಶಗಳನ್ನು ವಿನಿಮಯ ಮಾಡಿಕೊಂಡಿರುವ ಹೊರತಾಗಿಯೂ ಭಾರತದ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದಾಗಿ ಪಾಕ್ ಕಳವಳ ವ್ಯಕ್ತಪಡಿಸಿತ್ತು.

 ಬಂಧಿತರಿಗೆ ಸಂಬಂಧಿಸಿ ಭಾರತವು ಕಾನೂನು ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಫಲಿತಾಂಶವನ್ನು ಪಾಕ್ ಅಧಿಕಾರಿಗಳ ಜೊತೆ ಹಂಚಿಕೊಳ್ಳಲಾಗುವುದೆಂದು ಭಾರತ ಸೇನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X